AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಪ್ರಯತ್ನದಿಂದ ಯಶಸ್ಸು ಸಾಧ್ಯ ಎಂದ ಚಿತ್ರದುರ್ಗದ ಆಟೋ ಚಾಲಕನ ಮಗಳೀಗ ನ್ಯಾಯಾಧೀಶೆ !

ಸಾಧಿಸುವ ಛಲ ಇದ್ದರೆ ಎಂತಹ ಕಷ್ಟಗಳು ಬಂದರೂ ಎದುರಿಸಿ ಸಾಧಿಸುತ್ತಾರೆ ಎಂಬುವುದಕ್ಕೆ ಉತ್ತಮ ಉದಾಹರಣೆ ಚಿತ್ರದುರ್ಗದ ಯುವತಿ ಟಿ.ಸುಮಾ. ಅನಾರೋಗ್ಯಕ್ಕೆ ತುತ್ತಾಗಿ, ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡು ನಿರಂತರ ಪ್ರಯತ್ನದಿಂದ ಇಂದು ನ್ಯಾಯಾಧೀಶೆಯಾಗಿದ್ದಾರೆ. ಈ ಮೂಲಕ ತಾನು ಕಂಡ ಕನಸನ್ನು ನನಸಾಗಿಸಿಕೊಂಡಿದ್ದಾರೆ.

ಸತತ ಪ್ರಯತ್ನದಿಂದ ಯಶಸ್ಸು ಸಾಧ್ಯ ಎಂದ ಚಿತ್ರದುರ್ಗದ ಆಟೋ ಚಾಲಕನ ಮಗಳೀಗ ನ್ಯಾಯಾಧೀಶೆ !
ನ್ಯಾಯಾಧೀಶೆ ಟಿ. ಸುಮಾ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Feb 28, 2024 | 2:43 PM

Share

ಚಿತ್ರದುರ್ಗ, ಫೆಬ್ರವರಿ 28: ಅಪ್ಪ ಆಟೋ ಚಾಲಕ (Auto Driver) ವೃತ್ತಿಯಲ್ಲಿ ಬದುಕು ಕಟ್ಟಿಕೊಂಡ ಶ್ರಮಜೀವಿ. ಮಕ್ಕಳಿಬ್ಬರೂ ಅಪ್ಪನ ವೃತ್ತಿಯನ್ನೇ ಮುಂದುವರೆಸಿದ್ದರು. ಆದರೆ, ಮಗಳು ಮಾತ್ರ ಛಲಬಿಡದೆ ಓದಿನಲ್ಲಿ ತೊಡಗಿದ್ದಳು. ಮೂರನೇ ಬಾರಿಗೆ ಬರೆದ ಪರೀಕ್ಷೆಯಲ್ಲಿ ಕೊನೆಗೂ ಯಶಸ್ಸು ಸಾಧಿಸಿ ನ್ಯಾಯಾಧೀಶೆಯಾದ (Judge) ಸಾಹಸಗಾಥೆಯಿದು.

2023ರ ನವೆಂಬರ್ ತಿಂಗಳಲ್ಲಿ ನಡೆದಿದ್ದ ಸ್ಪರ್ಧಾತ್ಮಕ ಪರೀಕ್ಷೆಗೆ 2024ರ ಜನವರಿ ತಿಂಗಳಲ್ಲಿ ಮೌಖಿಕ ಪರೀಕ್ಷೆ ನಡೆದಿತ್ತು. ಬಳಿಕ 33 ಅಬ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಸಿವಿಲ್‌ ನ್ಯಾಯಾಧೀಶರಾಗಿ ಆಯ್ಕೆ ಮಾಡಲಾಗಿದ್ದು ಚಿತ್ರದುರ್ಗದ ಯುವತಿ ಟಿ. ಸುಮಾ ನ್ಯಾಯಾಧೀಶರಾಗಿ ಆಯ್ಕೆ ಆಗುವ ಮೂಲಕ ಕೋಟೆನಾಡಿನ ಕೀರ್ತಿ ಪತಾಕೆ ಹಾರಿಸಿದ್ದಾರೆ.

ಟಿ.ಸುಮಾ ವಿದ್ಯಭ್ಯಾಸ

ಚಿತ್ರದುರ್ಗದ ಮಠದ ಕುರುಬರಹಟ್ಟಿಯ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಪೂರೈಸಿದ್ದು ಎಸ್​ಜೆಎಂ ಮಹಿಳಾ ಕಾಲೇಜಿನಲ್ಲಿ ಪದವಿ ವ್ಯಾಸಾಂಗ ಮಾಡಿದ್ದಾರೆ. 2020-21ರಲ್ಲಿ ಸರಸ್ವತಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದರು. ಕಾನೂನು ಪದವಿ ಓದುವಾಗಲೇ ನ್ಯಾಯಧೀಶರಾಗಬೇಕೆಂಬ ಕನಸು ಕಟ್ಟಿಕೊಂಡು ನಿರಂತರ ಓದಿನಲ್ಲಿ ನಿರತರಾಗಿದ್ದರು.

ಎರಡನೇ ಸಲ ವಿಫಲ ಮೂರನೇ ಸಲ‌ ಸಫಲ

2021ರಲ್ಲಿ ನ್ಯಾಯಾಧೀಶರ ನೇಮಕಕ್ಕೆ ಪರೀಕ್ಷೆ ಬರೆದಾಗ ಸಂದರ್ಶನದಲ್ಲಿ ವಿಫಲರಾಗಿದ್ದರು. 2022ರಲ್ಲಿ ಅನಾರೋಗ್ಯದ ಕಾರಣ ಮುಖ್ಯ ಪರೀಕ್ಷೆಗೆ ಹಾಜರಾಗಲಿಲ್ಲ. ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು ಚೇತರಿಸಿಕೊಂಡ ಬಳಿಕ ಮತ್ತೆ ನ್ಯಾಯಾಧೀಶರಾಗುವ ಕನಸಿನ ಬೆನ್ನು ಬಿದ್ದಿದ್ದರು. ಮೂರನೇ ಪ್ರಯತ್ನದಲ್ಲಿ ಛಲ ಬಿಡದ ವಿಕ್ರಮನಂತೆ ಸಫಲತೆ ಸಾಧಿಸಿದ್ದಾರೆ.

ಕೌಟುಂಬಿಕ ಹಿನ್ನೆಲೆ

ಟಿ.ಸುಮಾ ಚಿತ್ರದುರ್ಗ ನಗರದ ಕೋಡೆನಹಟ್ಟಿಯ ಆಟೋ ಚಾಲಕ ತಿಪ್ಪೇಸ್ವಾಮಿ, ಭಾಗ್ಯಮ್ಮ ದಂಪತಿಗಳ ಮೂರನೇ ಪುತ್ರಿ. ಇಬ್ಬರು ಸಹೋದರರು ಸಹ ಅಪ್ಪನಂತೆ ಆಟೋ ಚಾಲಕ ವೃತ್ತಿಯಲ್ಲಿ ತೊಡಗಿದ್ದಾರೆ. ಕುಟುಂಬದಲ್ಲಿ ಪದವಿ ಪೂರೈಸಿದ ಏಕೈಕ ಯುವತಿ ಸುಮಾ. ಸುಮಾಳ ಸಾಧನೆ ಕುಟುಂಬದಲ್ಲಿ ಭಾರಿ ಖುಷಿ ಮೂಡಿಸಿದೆ.

ಇದನ್ನೂ ಓದಿ: ಜೀವನದ ಸವಾಲುಗಳನ್ನು ಮೆಟ್ಟಿ ನಿಂತು ಭರವಸೆಯ ಸಾಧನೆ ಮಾಡಿದ ಉದಯೋನ್ಮುಖ ಪ್ರತಿಭೆ ಕಾರ್ತಿಕ್ ವೈ ಬಿ

ನ್ಯಾಯವಾದಿ ಎಂ.ಸಿ.ಪಾಪಣ್ಣ ಅವರ ಮಾರ್ಗದರ್ಶನದಲ್ಲಿ ಸುಮಾ ವಕೀಲ‌ ವೃತ್ತಿಯಲ್ಲಿ ತೊಡಗಿದ್ದರು. ಅಂತೆಯೇ ಸುಮಾ ಅವರ ಕನಸು ಸಾಕಾರಗೊಳ್ಳಲು ಪಾಪಾಣ್ಣ ಸಹಕಾರ ಮಾಡಿದ್ದಾರೆ. ಕಠಿಣ ಪರಿಶ್ರಮದ ಮೂಲಕ ನೇಮಕವಾಗುವ ಮೂಲಕ ಕನಸು ನನಸಾಗಿಸಿಕೊಂಡಿದ್ದಾರೆ. ಆ ಮೂಲಕ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ.

ಕಷ್ಟ ಕಾಲದಲ್ಲಿ ನ್ಯಾಯವಾದಿ ಪಾಪಣ್ಣ ಮಾರ್ಗದರ್ಶನ ಮತ್ತು ಸಹಕಾರ ನೀಡಿದ್ದಾರೆ. ಯುಪಿಎಸ್ಸಿ ಪರೀಕ್ಷೆ ಬರೆಯುವ ಬಗ್ಗೆಯೂ ಚಿಂತನೆ ನಡೆಸಿದ್ದೆ.‌ ಕಾನೂನು ಪದವಿ ಓದಿ ನ್ಯಾಯಾಧೀಶರನ್ನು ಕಂಡ ಬಳಿಕ ನ್ಯಾಯಾಧೀಶೆ ಆಗಬೇಕೆಂಬ ಕನಸ ಮೂಡಿತು. ಗುರಿಯತ್ತಲೇ ಚಿತ್ತ ನೆಟ್ಟು ಸಾಗಿದಾಗ ನ್ಯಾಯಾಧೀಶೆಯಾಗುವ ಕನಸು ಸಾಕಾರಗೊಂಡಿತು ಎಂದು ನ್ಯಾಯಾಧೀಶೆ ಸುಮಾ ಹೇಳಿದರು.

ಇನ್ನು ಮಗಳ ಸಾಧನೆ ಬಗ್ಗೆ ತಂದೆ ತಿಪ್ಪೇಸ್ವಾಮಿ ಮಾತನಾಡಿ, ಸುಮಾಳ ತಾಯಿ ಭಾಗ್ಯಮ್ಮ ಅವರ ಖುಷಿಗೆ ಪಾರವಿಲ್ಲ. ಆಟೋ ವೃತ್ತಿಯಲ್ಲಿ ದುಡಿದು ಕೈಲಾದಷ್ಟು ಓದಿಸಿದ್ದೇವೆ. ಮಗಳು ನ್ಯಾಯಾಧೀಶೆಯಾಗಿದ್ದು ಅಪಾರ ಖುಷಿ ತಂದಿದೆ ಎಂದು ಖುಷಿ ಹಂಚಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:42 pm, Wed, 28 February 24

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ