AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆ: ಅದರಿಂದ ನಷ್ಟೇವೇನೂ ಇಲ್ಲ; ಬದಲಿಗೆ ನಾವೂ ಗರ್ಭಿಣಿಯರಿಗೆ ಉಚಿತ ಸೇವೆ ಕೊಡ್ತೀವಿ ಅಂತಿದ್ದಾರೆ ಚಿತ್ರದುರ್ಗದ ಆಟೋ ಚಾಲಕರು

Chitradurga auto drivers: ಚಿತ್ರದುರ್ಗದಲ್ಲಿ ಸ್ನೇಹಜೀವಿ ಆಟೋ ಚಾಲಕರ ಸಂಘವು ಗರ್ಭಿಣಿ ಮಹಿಳೆಯರಿಗೆ ಉಚಿತ ಸೇವೆ ಕಲ್ಪಿಸುವ ಸಂಕಲ್ಪ ಮಾಡಿದೆ. ಬಾಣಂತಿಯರಿಗೆ, ಅನಾರೋಗ್ಯ ಪೀಡಿತರಿಗೆ ಮತ್ತು ಅಪಘಾತಗಳ ಸಂದರ್ಭದಲ್ಲೂ ಸಹ ಆಟೋ ಚಾಲಕರು ಸೇವಾ ಕಾರ್ಯ ಕೈಗೊಳ್ಳುವ ಮೂಲಕ ಜನಮೆಚ್ಚುಗೆಗೆ ಪಾತ್ರರಾಗುತ್ತಿದ್ದಾರೆ.

ಶಕ್ತಿ ಯೋಜನೆ: ಅದರಿಂದ ನಷ್ಟೇವೇನೂ ಇಲ್ಲ; ಬದಲಿಗೆ ನಾವೂ ಗರ್ಭಿಣಿಯರಿಗೆ ಉಚಿತ ಸೇವೆ ಕೊಡ್ತೀವಿ ಅಂತಿದ್ದಾರೆ ಚಿತ್ರದುರ್ಗದ ಆಟೋ ಚಾಲಕರು
ಗರ್ಭಿಣಿಯರಿಗೆ ಉಚಿತ ಸೇವೆ ಕೊಡ್ತೀವಿ ಅಂತಿದ್ದಾರೆ ಚಿತ್ರದುರ್ಗದ ಆಟೋ ಚಾಲಕರು
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Jul 22, 2023 | 5:19 PM

Share

Karnataka Shakti Scheme: ರಾಜ್ಯದಲ್ಲಿ ನೂತನ ಕಾಂಗ್ರೆಸ್​​ ಸರ್ಕಾರ ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ. ಪರಿಣಾಮ ಖಾಸಗಿ ವಾಹನಗಳ ಆದಾಯಕ್ಕೆ ಕತ್ತರಿ ಬಿದ್ದಿದೆ ಎಂಬ ಮಾತು ಕೇಳಿ ಬರುತ್ತಿದೆ. ಆದ್ರೆ, ಇದೇ ವೇಳೆ ಕೋಟೆನಾಡು ಚಿತ್ರದುರ್ಗದಲ್ಲಿ ಮಾತ್ರ ಆಟೋ ಚಾಲಕರು (Chitradurga auto drivers) ಗರ್ಭಿಣಿಯರಿಗೆ ಉಚಿತ ಸೇವೆ ಕಲ್ಪಿಸಲು ಸಂಕಲ್ಪ ಮಾಡಿದ್ದಾರೆ. ಈ ಕುರಿತು ವರದಿ ಇಲ್ಲಿದೆ. ಗರ್ಭಿಣಿಯರಿಗೆ (pregnant) ಉಚಿತ ಆಟೋ ಸರ್ವೀಸ್ ಗೆ ಆಟೋವಾಲಾಗಳ ಸಂಕಲ್ಪ. ಗರ್ಭಿಣಿಯರಿಗೆ ಉಚಿತ ಪ್ರಯಾಣ ಕಲ್ಪಿಸಿದ ಆಟೋಗಳಿಗೆ ಜಿಲ್ಲಾಧಿಕಾರಿ ಚಾಲನೆ. ಆಟೋ ಚಾಲಕರಿಗೆ ಸಸಿ ನೀಡಿ ಶಹಬ್ಬಾಸ್ ಗಿರಿ ಸೂಚಿಸಿದ ಡಿಸಿ ದಿವ್ಯಪ್ರಭು. ಈ ದೃಶ್ಯಗಳು ಕಂಡು ಬಂದಿದ್ದು ಕೋಟೆನಾಡು ಚಿತ್ರದುರ್ಗ ನಗರದ ಡಿಸಿ ಕಚೇರಿ ಬಳಿ.

ಹೌದು, ಕೋಟೆನಾಡಿನಲ್ಲಿ ಸ್ನೇಹಜೀವಿ ಆಟೋ ಚಾಲಕರು ಮತ್ತು ಮಾಲೀಕರ ಕ್ಷೇಮಾಭಿವೃದ್ಧಿ ಸಂಘವು ಗರ್ಭಿಣಿಯರಿಗೆ ಉಚಿತ ಸೇವೆ ಕಲ್ಪಿಸುವ ಸಂಕಲ್ಪ ಮಾಡಿದೆ. ನೂರಕ್ಕೂ ಹೆಚ್ಚು ಆಟೋ ಚಾಲಕರು ಆಟೋ ಮೇಲೆ ಈ ಬಗ್ಗೆ ಬರಹ ಬರೆಸಿದ್ದು ಸೇವೆಗೆ ಸಂಕಲ್ಪ ಮಾಡಿದ್ದಾರೆ ಎಂದು ಆಟೋ ಚಾಲಕರಾದ ವೀರೇಶ ಮಾಹಿತಿ ನೀಡಿದ್ದಾರೆ.

ಇನ್ನು ನಗರದ ಒನಕೆ ಓಬವ್ವ ವೃತ್ತದ ಬಳಿಯ ಜಿಲ್ಲಾಧಿಕಾರಿ ಕಚೇರಿ ಬಳಿ ನೂರಕ್ಕೂ ಹೆಚ್ಚು ಆಟೋಗಳು ಜಮಾಯಿಸಿದ್ದವು. ಡಿಸಿ ದಿವ್ಯಪ್ರಭು ಅವರು ಖುಷಿಯಿಂದಲೇ ಆಟೋಗಳ ಉಚಿತ ಸೇವೆಗೆ ಚಾಲನೆ ನೀಡಿದರು. ಆಟೋ ಚಾಲಕರ ಸೇವಾ ಕಾರ್ಯದ ಬಗ್ಗೆ ಮೆಚ್ಚುಗೆ ಸೂಚಿಸಿದರು. ಇದೇ ರೀತಿ ಸೇವಾ ಕಾರ್ಯ ಮುಂದುವರೆಯಲಿ ಎಂದು ಆಶಯ ವ್ಯಕ್ತಪಡಿಸಿದರು.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ನಗರದಲ್ಲಿ ಸ್ನೇಹಜೀವಿ ಆಟೋ ಚಾಲಕರ ಸಂಘ ಗರ್ಭಿಣಿ ಮಹಿಳೆಯರಿಗೆ ಉಚಿತ ಸೇವೆ ಕಲ್ಪಿಸುವ ಸಂಕಲ್ಪ ಮಾಡಿದೆ. ಅಂತೆಯೇ ಈಗಾಗಲೇ ಗರ್ಭಿಣಿ ಮಹಿಳೆಯರಿಗೆ ಉಚಿತ ಸೇವೆ ಆರಂಭಿಸಿದೆ. ಬಾಣಂತಿಯರಿಗೆ, ಅನಾರೋಗ್ಯ ಪೀಡಿತರಿಗೆ ಮತ್ತು ಅಪಘಾತಗಳ ಸಂದರ್ಭದಲ್ಲೂ ಸಹ ಆಟೋ ಚಾಲಕರು ಸೇವಾ ಕಾರ್ಯ ಕೈಗೊಳ್ಳುವ ಮೂಲಕ ಜನಮೆಚ್ಚುಗೆಗೆ ಪಾತ್ರರಾಗುತ್ತಿದ್ದಾರೆ.

ಚಿತ್ರದುರ್ಗ ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:19 pm, Sat, 22 July 23

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ