Madara Chennaiah Swamiji Mother: ಬಸವಮೂರ್ತಿ ಮಾದಾರ ಚನ್ನಯ್ಯಶ್ರೀಗೆ ಮಾತೃ ವಿಯೋಗ

ಚಿತ್ರದುರ್ಗದ ಶಿವಶರಣ ಮಾದಾರ ಚನ್ನಯ್ಯ ಮಠದ ಚನ್ನಯ್ಯಶ್ರೀಗಳ ತಾಯಿ ಗಂಗಮ್ಮ(85) ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಗಂಗಮ್ಮ ಇಂದು (ಆಗಸ್ಟ್ 17) ಕೊನೆಯುಸಿರೆಳೆದಿದ್ದಾರೆ.

Madara Chennaiah Swamiji Mother: ಬಸವಮೂರ್ತಿ ಮಾದಾರ ಚನ್ನಯ್ಯಶ್ರೀಗೆ ಮಾತೃ ವಿಯೋಗ
ಮಾದಾರ ಚನ್ನಯ್ಯಶ್ರೀ ತಾಯಿ ಗಂಗಮ್ಮ
Edited By:

Updated on: Aug 17, 2023 | 11:11 AM

ಚಿತ್ರದುರ್ಗ, (ಆಗಸ್ಟ್ 17): ಚಿತ್ರದುರ್ಗದ (Chiradruga) ಶಿವಶರಣ ಮಾದಾರ ಚನ್ನಯ್ಯ ಮಠದ ಚನ್ನಯ್ಯಶ್ರೀಗಳ (basavamurthy madara chennaiah swamiji) ತಾಯಿ ಗಂಗಮ್ಮ(85) ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಗಂಗಮ್ಮ ಅವರು ನಿನ್ನೆ  (ಆಗಸ್ಟ್ 16) ಕೊನೆಯುಸಿರೆಳೆದಿದ್ದು, ಇಂದು ಸಂಜೆ ವೇಳೆಗೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಹಿರೇಕಂದವಾಡಿ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

ಚಿತ್ರದುರ್ಗವನ್ನು ಕಾರ್ಯ ಕ್ಷೇತ್ರವನ್ನಾಗಿಸಿಕೊಂಡು ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರು ಪೀಠ ಸ್ಥಾಪಿಸಿರುವ ಶ್ರೀಗಳು ಈ ಮಠದ ಪ್ರಥಮ ಪೀಠಾಧ್ಯಕ್ಷರಾಗಿದ್ದು, ಸರ್ವ ಜಾತಿ ಧರ್ಮಗಳ ಜನರು ಒಡನಾಟ ಹೊಂದಿದ್ದಾರೆ. ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರು ಸಮಾಜ ಸೇವಾ ದೀಕ್ಷೆ ಸ್ವೀಕರಿಸಿ 2022ರ ಜೂನ್ 24ಕ್ಕೆ ಎರಡು ದಶಕಗಳು ಕಳೆದಿವೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ 6 ಜನ ಸಾವು ಪ್ರಕರಣ: ಕಾಲರಾ ಮಾದರಿಯ ಬ್ಯಾಕ್ಟೀರಿಯ ಪತ್ತೆ, ಕೇಸ್​ ಬುಕ್

ತಮ್ಮ ಪೂರ್ವಾಶ್ರಮದಲ್ಲಿ ಶ್ರೀಗಳಿಗೆ ಚಿಕ್ಕಂದಿನಿಂದಲೂ ಚಿತ್ರದುರ್ಗ ಮುರುಘಾಮಠದೊಂದಿಗೆ ಅತ್ಯಂತ ನಿಕಟ ಸಂಬಂಧ ಈ ಸಂದರ್ಭದಲ್ಲಿ ಪರಮ ಪೂಜ್ಯ ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರು ಮಾದಾರ ಸಮಾಜದ ಪ್ರಗತಿಗೆ ಗುರುಪೀಠ ಸ್ಥಾಪಿಸಿ, ಸಮಾಜಸೇವಾ ದೀಕ್ಷೆ ನೀಡಿದ್ದು. ನಂತರ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರು ಕಳೆದ 20 ವರ್ಷಗಳಲ್ಲಿ ಸಾಧಿಸಿದ್ದು ಅಪಾರ.

ಚಿತ್ರದುರ್ಗ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:05 am, Thu, 17 August 23

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us