AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ.ಎಸ್. ಯಡಿಯೂರಪ್ಪ ಬಿಜೆಪಿಯ ಆಧಾರ ಸ್ತಂಭವಿದ್ದಂತೆ; ಬಿಎಸ್‌ವೈ ರಾಜೀನಾಮೆಯಿಂದ ನಮ್ಮ ಬಲ ಕುಸಿದ ಭಾವನೆ: ಚಿತ್ರದುರ್ಗದಲ್ಲಿ ಬಿಜೆಪಿ ಶಾಸಕ

ದಕ್ಷಿಣ ಭಾರತದಲ್ಲಿ ಬಿಜೆಪಿ ಹೆಸರೇಳುವವರಿಲ್ಲದಾಗ ಪಕ್ಷ ಕಟ್ಟಿದ್ದರು. ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ತಂದರು. ನಮ್ಮಂಥವರನ್ನು ಗೆಲ್ಲಿಸಲು ಯುವಕರಂತೆ ಪ್ರವಾಸ ಮಾಡಿದರು ಎಂದು ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಬಿಜೆಪಿಯ ಆಧಾರ ಸ್ತಂಭವಿದ್ದಂತೆ; ಬಿಎಸ್‌ವೈ ರಾಜೀನಾಮೆಯಿಂದ ನಮ್ಮ ಬಲ ಕುಸಿದ ಭಾವನೆ: ಚಿತ್ರದುರ್ಗದಲ್ಲಿ ಬಿಜೆಪಿ ಶಾಸಕ
ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ
TV9 Web
| Edited By: ಆಯೇಷಾ ಬಾನು|

Updated on: Jul 26, 2021 | 2:52 PM

Share

ಚಿತ್ರದುರ್ಗ: ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ಘೋಷಣೆ ಬೆನ್ನಲ್ಲೆ ಚಿತ್ರದುರ್ಗದಲ್ಲಿ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಬಿ.ಎಸ್.ಯಡಿಯೂರಪ್ಪ ಬಿಜೆಪಿಯ ಆಧಾರ ಸ್ತಂಭವಿದ್ದಂತೆ. ಬಿಎಸ್‌ವೈ ರಾಜೀನಾಮೆಯಿಂದ ನಮ್ಮ ಬಲ ಕುಸಿದ ಭಾವನೆ ಎಂದರು.

ಈ ವೇಳೆ ಮಾತನಾಡುತ್ತ ಅವರು, ದಕ್ಷಿಣ ಭಾರತದಲ್ಲಿ ಬಿಜೆಪಿ ಹೆಸರೇಳುವವರಿಲ್ಲದಾಗ ಪಕ್ಷ ಕಟ್ಟಿದ್ದರು. ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ತಂದರು. ನಮ್ಮಂಥವರನ್ನು ಗೆಲ್ಲಿಸಲು ಯುವಕರಂತೆ ಪ್ರವಾಸ ಮಾಡಿದರು.224ಕ್ಷೇತ್ರಗಳಲ್ಲಿ ಬಿಎಸ್ ವೈ ಸುಂಟರಗಾಳಿಯಂತೆ ತಿರುಗಿದರು. ಬಿಎಸ್ ವೈ ರಾಜೀನಾಮೆಯಿಂದ ವಿರೋಧಿಗಳಲ್ಲೂ ದುರದೃಷ್ಠ ಎಂಬ ಭಾವನೆ. ವೀರಶೈವ ಮಾತ್ರವಲ್ಲದೆ ಪ್ರತಿ ಮಠಗಳಿಗೂ ನೆರವು ನೀಡಿದ್ದಾರೆ. ಬಿಎಸ್ವೈರಂತ ಉನ್ನತ ಮಟ್ಟದ ನಾಯಕತ್ವ ನಮ್ಮ ಪಕ್ಷದಲ್ಲಿ ವಿರಳ. ಈಗ ಬಿಎಸ್ವೈ ಭೇಟಿ ಮಾಡಲು ತೆರಳುವೆ. ಇವರು ಪಕ್ಷಾತೀತ, ಜಾತ್ಯಾತೀತ ನಾಯಕ. ಬಿಎಸ್ ವೈ ರಾಜೀನಾಮೆ ಘೋಷಣೆ ವೇಳೆ ಸಹಜ ನೋವಾಗಿತ್ತು. ಪಕ್ಷ ಬೇರೆ ಉನ್ನತ ಸ್ಥಾನ ನೀಡಿ ಗೌರವಯುತವಾಗಿ ನಡೆಸಿಕೊಳ್ಳಲಿದೆ. ಮುಂದಿನ ಸಿಎಂ, ಸಚಿವ ಸಂಪುಟ ಬಗ್ಗೆ ರಾಷ್ಟ್ರೀಯ ನಾಯಕರಿಂದ ತೀರ್ಮಾನ ಮಾಡಲಾಗುತ್ತೆ. ಈ ವೇಳೆ ಸಚಿವ ಸ್ಥಾನದ ಬಗ್ಗೆ ಕೇಳುವುದು ಸಣ್ಣತನ ಆಗುತ್ತದೆ. ಪಕ್ಷದ ಆದೇಶವನ್ನು ನಾವು ಪಾಲಿಸುತ್ತೇವೆ ಎಂದು ಹೇಳಿದರು.

ನಾನು ಶಾಸಕನಾಗುವುದಕ್ಕೆ ಯಡಿಯೂರಪ್ಪನವರೇ ಕಾರಣ ಇನ್ನು ಇದೇ ರೀತಿ ಮೈಸೂರಿನಲ್ಲಿ ಬಿಜೆಪಿ ಶಾಸಕ ಎಲ್.ನಾಗೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. BSY ರಾಜೀನಾಮೆಯಿಂದ ನನಗೆ ವೈಯಕ್ತಿಕವಾಗಿ ನೋವಾಗಿದೆ. ನಾನು ಶಾಸಕನಾಗುವುದಕ್ಕೆ ಯಡಿಯೂರಪ್ಪನವರೇ ಕಾರಣ. ನನ್ನ ಕೆಲಸ ಗಮನಿಸಿ ಬಿಎಸ್‌ವೈ ನನಗೆ ಟಿಕೆಟ್ ಕೊಡಿಸಿದ್ದರು. ರಾಜ್ಯದ ಅಭಿವೃದ್ಧಿಗೆ ಶ್ರಮವಹಿಸಿದ ನಾಯಕ ಯಡಿಯೂರಪ್ಪ. ಇಂತಹ ವಯಸ್ಸಿನಲ್ಲೂ ರಾಜ್ಯಾದ್ಯಂತ ಸಂಚಾರ ಮಾಡಿದ್ದಾರೆ. ಕೊರೊನಾ ಸಂದರ್ಭದಲ್ಲಿ ಉತ್ತಮವಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ‌. ಬಿಜೆಪಿ ಅಗ್ರಗಣ್ಯ ನಾಯಕ ಬಿಎಸ್ವೈ ಅವರ ಕೆಲಸಗಳನ್ನು ಮರೆಯಲು ಸಾಧ್ಯವಿಲ್ಲ. ಬಿಜೆಪಿ ಶಿಸ್ತಿನ ಪಕ್ಷ, ಹಾಗಾಗಿ ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದರು.

ಇದನ್ನೂ ಓದಿ: ಯಡಿಯೂರಪ್ಪ ಭ್ರಷ್ಟ ಮುಖ್ಯಮಂತ್ರಿ ಹೇಳಿಕೆ ವಿಚಾರ: ಸಿದ್ದರಾಮಯ್ಯ ಹೇಳಿಕೆಗೆ ಶ್ರೀನಿವಾಸ ಪ್ರಸಾದ್ ಲೆಫ್ಟ್​​-ರೈಟ್​

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ