AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಗಳ ಸುರಿಮಳೆ; ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಅರೆಸ್ಟ್

ಮೂಡಲಗಿರಿಯಪ್ಪ ಅವರ ವಿರುದ್ಧ ನಕಲಿ ದಾಖಲೆ‌ ಸೃಷಿಸಿ ₹7 ಕೋಟಿ ಲಪಟಾಯಿಸಿದ ಆರೋಪ, ಬೇನಾಮಿ ವ್ಯಕ್ತಿಗಳ ಹೆಸರಲ್ಲಿ ಚೆಕ್ ನೀಡಿ ಹಣ ಗುಳುಂ ಆರೋಪ ಕೇಳಿ ಬಂದಿದೆ.

ಆರೋಪಗಳ ಸುರಿಮಳೆ; ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಅರೆಸ್ಟ್
ಮೂಡಲಗಿರಿಯಪ್ಪ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Aug 07, 2023 | 8:37 AM

Share

ಚಿತ್ರದುರ್ಗ, ಆ.07: ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕನ(Nirmithi Kendra Former Project Director) ವಿರುದ್ಧ ಆರೋಪದ ಪಟ್ಟಿಯೇ ಕೇಳಿಬಂದಿದ್ದು ಚಿತ್ರದುರ್ಗ ಸಿಇಎನ್ ಠಾಣೆ‌ ಪೊಲೀಸರು(Chitradurga CEN Police Station) ಬಂಧಿಸಿದ್ದಾರೆ. ಮಾಜಿ ಯೋಜನಾ ನಿರ್ದೇಶಕ ಮೂಡಲಗಿರಿಯಪ್ಪ ಅವರ ವಿರುದ್ಧ ವಿವಿಧ ಕಾಮಗಾರಿಗಳ ಹಣ ದುರ್ಬಳಕೆ ಆರೋಪ ಕೇಳಿ ಬಂದಿದೆ. ಸದ್ಯ ಪೊಲೀಸರು ಮೂಡಲಗಿರಿಯಪ್ಪನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಮೂಡಲಗಿರಿಯಪ್ಪ ಅವರ ವಿರುದ್ಧ ನಕಲಿ ದಾಖಲೆ‌ ಸೃಷಿಸಿ ₹7 ಕೋಟಿ ಲಪಟಾಯಿಸಿದ ಆರೋಪ, ಬೇನಾಮಿ ವ್ಯಕ್ತಿಗಳ ಹೆಸರಲ್ಲಿ ಚೆಕ್ ನೀಡಿ ಹಣ ಗುಳುಂ ಆರೋಪ ಕೇಳಿ ಬಂದಿದೆ. ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸತ್ಯನಾರಾಯಣರಾವ್ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದರು. ಬಳಿಕ ಚಿತ್ರದುರ್ಗದ ಸಿಇಎನ್ ಪೊಲೀಸ್ ಠಾಣೆಗೆ ಈ ಪ್ರಕರಣ ವರ್ಗಾವಣೆಯಾಗಿದ್ದು ಪೊಲೀಸರು ಮೂಡಲಗಿರಿಯಪ್ಪ ಅವರನ್ನು ಬಂಧಿಸಿದ್ದಾರೆ. ನಿರ್ಮಿತಿ ಕೇಂದ್ರದ ಹಣ ಲಪಟಾಯಿಸಿದ ಪ್ರಕರಣದಲ್ಲಿ ಮೂಡಲಗಿರಿಯವರು ವಜಾಗೊಂಡಿದ್ದರು. ತಿಂಗಳ ಹಿಂದಷ್ಟೇ ಕೆಲಸದಿಂದ ವಜಾಗೊಳಿಸಲಾಗಿತ್ತು. ನಿನ್ನೆ ಮೂಡಲಗಿರಿಯಪ್ಪ ವಿರುದ್ಧ ಮತ್ತೊಂದು ದೂರು ಹಿನ್ನೆಲೆ ಈಗ ಬಂಧಿಸಲಾಗಿದೆ.

ಇದನ್ನೂ ಓದಿ: ಆನೆ ನೋಡಿಕೊಂಡ ಬೊಮ್ಮನ್​-ಬೆಳ್ಳಿ ದಂಪತಿಗೆ ಇದೆಂಥಾ ಸ್ಥಿತಿ; ಸಿನಿಮಾ ತಂಡದವರಿಂದಲೇ ಮೋಸ

ಎರಡು ಕಾರುಗಳ ನಡುವೆ ಅಪಘಾತ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜೇನುಬೈಲು ಗ್ರಾಮದ ಬಳಿ ಓವರ್ ಟೆಕ್ ಮಾಡಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಎರಡು ಕಾರುಗಳ ನಡುವೆ ಡಿಕ್ಕಿಯಾಗಿದ್ದು ರಭಸಕ್ಕೆ ಕಾರು ಪಲ್ಟಿಯಾಗಿದೆ. ಭೀಕರ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ‌ಯಾಗಿದೆ. ಎರಡು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ‌ಗಳಾಗಿವೆ. ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ನಾಲ್ವರನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಜೇನುಬೈಲಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:36 am, Mon, 7 August 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್