AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಗಳ ಸುರಿಮಳೆ; ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಅರೆಸ್ಟ್

ಮೂಡಲಗಿರಿಯಪ್ಪ ಅವರ ವಿರುದ್ಧ ನಕಲಿ ದಾಖಲೆ‌ ಸೃಷಿಸಿ ₹7 ಕೋಟಿ ಲಪಟಾಯಿಸಿದ ಆರೋಪ, ಬೇನಾಮಿ ವ್ಯಕ್ತಿಗಳ ಹೆಸರಲ್ಲಿ ಚೆಕ್ ನೀಡಿ ಹಣ ಗುಳುಂ ಆರೋಪ ಕೇಳಿ ಬಂದಿದೆ.

ಆರೋಪಗಳ ಸುರಿಮಳೆ; ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಅರೆಸ್ಟ್
ಮೂಡಲಗಿರಿಯಪ್ಪ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Aug 07, 2023 | 8:37 AM

Share

ಚಿತ್ರದುರ್ಗ, ಆ.07: ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕನ(Nirmithi Kendra Former Project Director) ವಿರುದ್ಧ ಆರೋಪದ ಪಟ್ಟಿಯೇ ಕೇಳಿಬಂದಿದ್ದು ಚಿತ್ರದುರ್ಗ ಸಿಇಎನ್ ಠಾಣೆ‌ ಪೊಲೀಸರು(Chitradurga CEN Police Station) ಬಂಧಿಸಿದ್ದಾರೆ. ಮಾಜಿ ಯೋಜನಾ ನಿರ್ದೇಶಕ ಮೂಡಲಗಿರಿಯಪ್ಪ ಅವರ ವಿರುದ್ಧ ವಿವಿಧ ಕಾಮಗಾರಿಗಳ ಹಣ ದುರ್ಬಳಕೆ ಆರೋಪ ಕೇಳಿ ಬಂದಿದೆ. ಸದ್ಯ ಪೊಲೀಸರು ಮೂಡಲಗಿರಿಯಪ್ಪನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಮೂಡಲಗಿರಿಯಪ್ಪ ಅವರ ವಿರುದ್ಧ ನಕಲಿ ದಾಖಲೆ‌ ಸೃಷಿಸಿ ₹7 ಕೋಟಿ ಲಪಟಾಯಿಸಿದ ಆರೋಪ, ಬೇನಾಮಿ ವ್ಯಕ್ತಿಗಳ ಹೆಸರಲ್ಲಿ ಚೆಕ್ ನೀಡಿ ಹಣ ಗುಳುಂ ಆರೋಪ ಕೇಳಿ ಬಂದಿದೆ. ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸತ್ಯನಾರಾಯಣರಾವ್ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದರು. ಬಳಿಕ ಚಿತ್ರದುರ್ಗದ ಸಿಇಎನ್ ಪೊಲೀಸ್ ಠಾಣೆಗೆ ಈ ಪ್ರಕರಣ ವರ್ಗಾವಣೆಯಾಗಿದ್ದು ಪೊಲೀಸರು ಮೂಡಲಗಿರಿಯಪ್ಪ ಅವರನ್ನು ಬಂಧಿಸಿದ್ದಾರೆ. ನಿರ್ಮಿತಿ ಕೇಂದ್ರದ ಹಣ ಲಪಟಾಯಿಸಿದ ಪ್ರಕರಣದಲ್ಲಿ ಮೂಡಲಗಿರಿಯವರು ವಜಾಗೊಂಡಿದ್ದರು. ತಿಂಗಳ ಹಿಂದಷ್ಟೇ ಕೆಲಸದಿಂದ ವಜಾಗೊಳಿಸಲಾಗಿತ್ತು. ನಿನ್ನೆ ಮೂಡಲಗಿರಿಯಪ್ಪ ವಿರುದ್ಧ ಮತ್ತೊಂದು ದೂರು ಹಿನ್ನೆಲೆ ಈಗ ಬಂಧಿಸಲಾಗಿದೆ.

ಇದನ್ನೂ ಓದಿ: ಆನೆ ನೋಡಿಕೊಂಡ ಬೊಮ್ಮನ್​-ಬೆಳ್ಳಿ ದಂಪತಿಗೆ ಇದೆಂಥಾ ಸ್ಥಿತಿ; ಸಿನಿಮಾ ತಂಡದವರಿಂದಲೇ ಮೋಸ

ಎರಡು ಕಾರುಗಳ ನಡುವೆ ಅಪಘಾತ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜೇನುಬೈಲು ಗ್ರಾಮದ ಬಳಿ ಓವರ್ ಟೆಕ್ ಮಾಡಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಎರಡು ಕಾರುಗಳ ನಡುವೆ ಡಿಕ್ಕಿಯಾಗಿದ್ದು ರಭಸಕ್ಕೆ ಕಾರು ಪಲ್ಟಿಯಾಗಿದೆ. ಭೀಕರ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ‌ಯಾಗಿದೆ. ಎರಡು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ‌ಗಳಾಗಿವೆ. ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ನಾಲ್ವರನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಜೇನುಬೈಲಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:36 am, Mon, 7 August 23

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ