AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಕಲುಷಿತ ನೀರಿನ ಆತಂಕ, ಕವಾಡಿಗರಹಟ್ಟಿ ಗ್ರಾಮ ಖಾಲಿ ಖಾಲಿ

ಕೋಟೆನಾಡು ಚಿತ್ರದುರ್ಗ ನಗರದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ ದೊಡ್ಡ ದುರಂತವೇ ನಡೆದು ಹೋಗಿದೆ. ಐವರು ಸಾವಿಗೀಡಾಗಿದ್ದು ಓರ್ವ ಗರ್ಭಿಣಿಗೆ ಗರ್ಭಪಾತವೇ ಆಗಿದೆ. ಇನ್ನೂರಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ.

ಚಿತ್ರದುರ್ಗ: ಕಲುಷಿತ ನೀರಿನ ಆತಂಕ, ಕವಾಡಿಗರಹಟ್ಟಿ ಗ್ರಾಮ ಖಾಲಿ ಖಾಲಿ
ಜನ ಸಂಚಾರ ಇಲ್ಲದೆ ಬಿಕೋ ಎನ್ನುತ್ತಿರುವ ಚಿತ್ರದುರ್ಗದ ಕವಾಡಿಗರಹಟ್ಟಿ ಗ್ರಾಮ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Aug 07, 2023 | 9:18 PM

Share

ಚಿತ್ರದುರ್ಗ, ಆಗಸ್ಟ್ 7: ಕೋಟೆನಾಡು ಚಿತ್ರದುರ್ಗ (Chitradurga) ನಗರದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ ಐವರು ಸಾವಿಗೀಡಾಗಿದ್ದು ಓರ್ವ ಗರ್ಭಿಣಿಗೆ ಗರ್ಭಪಾತವಾಗಿದ್ದು, ಇನ್ನೂರಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ. ಹೀಗಾಗಿ ಭೀತಿಗೊಂಡ ಜನರು ಗ್ರಾಮ ತೊರೆದಿದ್ದಾರೆ.

ಕವಾಡಿಗರಹಟ್ಟಿ ಚಿತ್ರದುರ್ಗ ನಗರಸಭೆ ವ್ಯಾಪ್ತಿಗೆ ಸೇರುತ್ತದೆಯಾದರೂ ಇದೊಂದು ಪುಟ್ಟ ಹಳ್ಳಿ ಎಂದೇ ಹೇಳಬಹುದು. ಆಗಸ್ಟ್ 1 ರಿಂದ ಈ ಗ್ರಾಮದಲ್ಲಿ ಮರಣ ಮೃದಂಗವೇ ಬಾರಿಸಿದೆ. ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಸೇರಿದಂತೆ ಇನ್ನೂರಕ್ಕೂ ಹೆಚ್ಚು ಜನರು ವಾಂತಿ ಬೇಧಿಯಿಂದ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ. ಐವರು ಸಾವಿಗೀಡಾಗಿದ್ದು ಓರ್ವ ಗರ್ಭಿಣಿಗೆ ಗರ್ಭಪಾತವೂ ಆಗಿದೆ. ಹೀಗಾಗಿ, ಬಡಾವಣೆಯ ಜನರಲ್ಲಿ ಸಹಜವಾಗಿಯೇ ಆತಂಕ ಮೂಡಿದೆ.

ಇದನ್ನೂ ಓದಿ: ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಐವರು ಸಾವು; ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ – ಗುಂಡೂರಾವ್

ಕಲುಷಿತ ನೀರಿನಿಂದಲೇ ಕಾಲರಾ ಮಾದರಿ ರೋಗ ಹರಡಿದೆ ಎಂಬುದಾಗಿ ಸರ್ವೇಕ್ಷಣಾ ಇಲಾಖೆ ವರದಿಯೇನೋ ನೀಡಿದೆ. ಆದರೆ, ಇನ್ನಿತರೆ ಎಫ್​ಎಸ್​ಎಲ್​ ವರದಿ, ಮರಣೋತ್ತರ ವರದಿ, ತಜ್ಞರ ತಂಡದ ವರದಿ ಬರಲು ಬಾಕಿಯಿದೆ. ಅಷ್ಟೇ ಅಲ್ಲದೆ, ದ್ವೇಷದ ಹಿನ್ನೆಲೆ ನೀರಿನ ಟ್ಯಾಂಕಿಗೆ ವಿಷ ಬೆರೆಸಲಾಗಿದೆ ಎಂಬ ಅನುಮಾನವೂ ಜನರಲ್ಲಿದ್ದು ಅನೇಕರಲ್ಲಿ ಇನ್ನೂ ಭೀತಿ ಮನೆ ಮಾಡಿದೆ.

ಸ್ಪಷ್ಟ ಮಾಹಿತಿಯಿಲ್ಲದೆ ಅನೇಕರು ಮಕ್ಕಳು, ಗರ್ಭಿಣಿಯರನ್ನು ಸಂಬಂದಿಕರ ಮನೆಗೆ ಕಳುಹಿಸಿದ್ದು ಊರಿಗೆ ಊರು ಖಾಲಿ ಖಾಲಿ ಆಗಿದೆ. ಊಟ ಮಾಡಲೂ ಭಯ, ನೀರು ಕುಡಿಯಲು ಸಹ ಭಯ ಆಗುತ್ತಿದೆ ಎಂದು ಸ್ಥಳೀಯರು ಹೇಳಿಕೊಳ್ಳುತ್ತಿದ್ದಾರೆ.

ಇನ್ನು ಕವಾಡಿಗರಹಟ್ಟಿಯ ಹಳೇಹಟ್ಟಿಯಲ್ಲಿ ಮಾತ್ರ ಈ ಸಮಸ್ಯೆ ಕಾಣಿಸಿಕೊಂಡಿದೆ. ಆದರೆ, ಇದೇ ಟ್ಯಾಂಕಿನಿಂದ ನೀರು ಸರಬರಾಜು ಆಗುವ ಹೊಸಹಟ್ಟಿ, ಲಿಂಗಾಯತರ ಕಾಲೋನಿ ಜನರಿಗೆ ಮಾತ್ರ ಯಾವುದೇ ಸಮಸ್ಯೆ ಆಗಿಲ್ಲದೇ ಇರುವುದು ಇಲ್ಲಿನ ಜನರಲ್ಲಿ ಭೀತಿ ಸೃಷ್ಠಿಸಿದೆ. ವಿಷ ಬೆರೆಸಿದ್ದೇ ಇಷ್ಟಕ್ಕೆಲ್ಲಾ ಕಾರಣವೆಂಬ ಅಂಶ ಜನರಲ್ಲಿ ಬೇರೂರಿದ್ದು ಆತಂಕ ಹುಟ್ಟಿಸಿದೆ. ಅಂತೆಯೇ ಗರ್ಭಿಣಿ ಉಷಾಗೆ ಗರ್ಭಪಾತ ಆಗಿರುವ ಸುದ್ದಿ ಗರ್ಭಿಣಿಯರು ಮತ್ತು ಬಾಣಂತಿರನ್ನು ಬೆಚ್ಚಿ ಬೀಳಿಸಿದೆ.

ಒಟ್ಟಾರೆಯಾಗಿ ಸರ್ಕಾರ ಮತ್ತು ಜಿಲ್ಲಾಡಳಿತವು ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ ನಡೆಸಿ ಘಟನೆಗೆ ಕಾರಣವೇನೆಂಬ ಸ್ಪಷ್ಟ ಮಾಹಿತಿ ನೀಡುವ ಮೂಲಕ ಜನರಲ್ಲಿ ಆತ್ಮಸ್ಥೈರ್ಯ ತುಂಬಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ಗಂಡನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!