AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ದೌರ್ಜನ್ಯಕ್ಕೆ ಸಹಕಾರ: ಮುರುಘಾ ಮಠದ ವಾರ್ಡನ್ ರಶ್ಮಿಗೆ ಜಾಮೀನು

ಚಿತ್ರದುರ್ಗ ಮುರುಘಾಶ್ರೀ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ ಲೇಡಿ ವಾರ್ಡನ್ ರಶ್ಮಿಗೆ ಹೈಕೋರ್ಟ್‌ನ ನ್ಯಾ.ಮೊಹಮ್ಮದ್ ನವಾಜ್‌ರಿದ್ದ ಪೀಠ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಸ್ವಾಮೀಜಿ ಕೃತ್ಯಕ್ಕೆ ಲೇಡಿ ವಾರ್ಡನ್ ಸಾಥ್ ನೀಡುತ್ತಿದ್ದರು ಅನ್ನುವ ಅಂಶವನ್ನ ಬಾಲಕಿಯರು ಪೊಲೀಸರ ಎದುರು ತಿಳಿಸಿದ್ದರು.

ಲೈಂಗಿಕ ದೌರ್ಜನ್ಯಕ್ಕೆ ಸಹಕಾರ: ಮುರುಘಾ ಮಠದ ವಾರ್ಡನ್ ರಶ್ಮಿಗೆ ಜಾಮೀನು
ಲೇಡಿ ವಾರ್ಡನ್ ರಶ್ಮಿ
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಗಂಗಾಧರ​ ಬ. ಸಾಬೋಜಿ

Updated on:Dec 21, 2023 | 4:15 PM

ಚಿತ್ರದುರ್ಗ, ಡಿಸೆಂಬರ್​ 21: ಚಿತ್ರದುರ್ಗ ಮುರುಘಾಶ್ರೀ (Muruga shree) ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ ಲೇಡಿ ವಾರ್ಡನ್ ರಶ್ಮಿಗೆ ಹೈಕೋರ್ಟ್‌ನ ನ್ಯಾ.ಮೊಹಮ್ಮದ್ ನವಾಜ್‌ರಿದ್ದ ಪೀಠ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಶ್ರೀಗಳ ಲೈಂಗಿಕ ದೌರ್ಜನ್ಯಕ್ಕೆ ವಾರ್ಡನ್ ರಶ್ಮಿ ಸಹಕಾರ ನೀಡಿದ್ದರು.

ಚಾರ್ಜ್​ಶೀಟ್​​ನಲ್ಲಿ ಎರಡನೇ ಆರೋಪಿ ಆಗಿರುವ ಲೇಡಿ ವಾರ್ಡನ್ ವಿರುದ್ಧ, ಬೆಚ್ಚಿ ಬೀಳಿಸುವ ಆರೋಪಗಳು ಮಾಡಲಾಗಿತ್ತು. ಈ ಪೈಕಿ, ಮುರುಘಾ ಶ್ರೀಗಳ ಬಳಿ ಬಾಲಕಿಯರನ್ನ ಕರೆದೊಯ್ಯುವ ಕೆಲಸವನ್ನ ಇದೇ ವಾರ್ಡನ್​ ಮಾಡುತ್ತಿದ್ದಳು.

ಇದನ್ನೂ ಓದಿ: ಮುರುಘಾ ಮಠದ ಎಸ್​ಜೆಎಂ ವಿದ್ಯಾಪೀಠದ ಸಿಇಒಗೆ ಗೇಟ್​ಪಾಸ್​: ಮುರುಘಾ ಶ್ರೀ ಆದೇಶ

ಯಾರನ್ನ ಕಳಿಸಬೇಕು, ಯಾವಾಗ ಕಳಿಸಬೇಕು,  ಹೇಗೆ ಕಳಿಸಬೇಕು ಅನ್ನುವ ಎಲ್ಲ ವಿಚಾರವನ್ನೂ ಈಕೆಯೇ ನೋಡಿಕೊಳ್ಳುತ್ತಿದ್ದಳು. ಇದಕ್ಕೆ ತಿರುಗಿ ಬೀಳುವ ಬಾಲಕಿಯರ ಮೇಲೆ, ಇಲ್ಲದ ನೆಪವೊಡ್ಡಿ ಶಿಕ್ಷೆಯನ್ನೂ ನೀಡುತ್ತಿದ್ದಳು ಅನ್ನುವ ಸಂಗತಿಯನ್ನ ಬಾಲಕಿಯರು ಹೇಳಿದ್ದರು.

ಮುರುಘಾಶ್ರೀ ವಿರುದ್ಧದ ಫೋಕ್ಸೋ ಪ್ರಕರಣದಲ್ಲಿ, ಸ್ವಾಮೀಜಿ ಕೃತ್ಯಕ್ಕೆ ಲೇಡಿ ವಾರ್ಡನ್ ಸಾಥ್ ನೀಡುತ್ತಿದ್ದರು ಅನ್ನುವ ಅಂಶವನ್ನ ಬಾಲಕಿಯರು ಪೊಲೀಸರ ಎದುರು ತಿಳಿಸಿದ್ದರು. ಇಲ್ಲಿ, ಶ್ರೀಗಳ ಬಳಿಗೆ ಕಳುಹಿಸಲು ಬಾಲಕಿಯರನ್ನ ಲೇಡಿ ವಾರ್ಡನ್ ಆಯ್ಕೆ ಮಾಡುತ್ತಿದ್ದಳು. ಬಡತನ, ತಂದೆ ತಾಯಿ ಇಲ್ಲದ ಬಾಲಕಿಯರನ್ನೇ ಈ ಕೃತ್ಯಕ್ಕೆ ಆಯ್ಕೆ ಮಾಡುತ್ತಿದ್ರಂತೆ.

ಇದನ್ನೂ ಓದಿ: ಮುರುಘಾಶ್ರೀ ಕೈಗೆ ಮರಳಿದ ಮುರುಘಾಮಠದ ಅಧಿಕಾರ

ಆರೋಪಿ ನಂಬರ್​ 1 ಅಂದರೆ ಮುರುಘಾ ಶ್ರೀ ಖಾಸಗಿ ಕೋಣೆಗೆ ಆರೋಪಿ ನಂಬರ್​ 2 ಹಾಸ್ಟೆಲ್​ ಲೇಡಿ ವಾರ್ಡನ್​ ಮಕ್ಕಳನ್ನ ಕರೆದುಕೊಂಡು ಹೋಗುತ್ತಿದ್ದರು. ಇದಕ್ಕೆ ಪೂರಕವಾದ ಸಾಕ್ಷ್ಯಧಾರಗಳು ಲಭಿಸಿವೆ ಎಂದು ಈ ಆರೋಪಗಳಿಗೆ ಪುಷ್ಠಿ ನೀಡುವಂತೆ ಸತ್ರಸ್ತೆಯರ ಪರ ವಕೀಲ ಶ್ರೀನಿವಾಸ್ ಹೇಳಿದ್ದರು.

ಹೊರಗಿದ್ದುಕೊಂಡೇ ಮಠದ ಆಡಳಿತ

ಚಿತ್ರದುರ್ಗ ಜಿಲ್ಲೆ ಪ್ರವೇಶಿಸದಂತೆ ಮುರುಘಾಶ್ರೀಗೆ ಹೈಕೋರ್ಟ್ ಷರತ್ತು ನೀಡಿದ ಹಿನ್ನಲೆ ಜಿಲ್ಲೆಯಿಂದ ಹೊರಗಿದ್ದುಕೊಂಡೇ ಮುರುಘಾ ಶ್ರೀಗಳು ಮಠದ ಆಡಳಿತವನ್ನು ನಡೆಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:58 pm, Thu, 21 December 23

ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು