AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ದೌರ್ಜನ್ಯಕ್ಕೆ ಸಹಕಾರ: ಮುರುಘಾ ಮಠದ ವಾರ್ಡನ್ ರಶ್ಮಿಗೆ ಜಾಮೀನು

ಚಿತ್ರದುರ್ಗ ಮುರುಘಾಶ್ರೀ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ ಲೇಡಿ ವಾರ್ಡನ್ ರಶ್ಮಿಗೆ ಹೈಕೋರ್ಟ್‌ನ ನ್ಯಾ.ಮೊಹಮ್ಮದ್ ನವಾಜ್‌ರಿದ್ದ ಪೀಠ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಸ್ವಾಮೀಜಿ ಕೃತ್ಯಕ್ಕೆ ಲೇಡಿ ವಾರ್ಡನ್ ಸಾಥ್ ನೀಡುತ್ತಿದ್ದರು ಅನ್ನುವ ಅಂಶವನ್ನ ಬಾಲಕಿಯರು ಪೊಲೀಸರ ಎದುರು ತಿಳಿಸಿದ್ದರು.

ಲೈಂಗಿಕ ದೌರ್ಜನ್ಯಕ್ಕೆ ಸಹಕಾರ: ಮುರುಘಾ ಮಠದ ವಾರ್ಡನ್ ರಶ್ಮಿಗೆ ಜಾಮೀನು
ಲೇಡಿ ವಾರ್ಡನ್ ರಶ್ಮಿ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Dec 21, 2023 | 4:15 PM

Share

ಚಿತ್ರದುರ್ಗ, ಡಿಸೆಂಬರ್​ 21: ಚಿತ್ರದುರ್ಗ ಮುರುಘಾಶ್ರೀ (Muruga shree) ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ ಲೇಡಿ ವಾರ್ಡನ್ ರಶ್ಮಿಗೆ ಹೈಕೋರ್ಟ್‌ನ ನ್ಯಾ.ಮೊಹಮ್ಮದ್ ನವಾಜ್‌ರಿದ್ದ ಪೀಠ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಶ್ರೀಗಳ ಲೈಂಗಿಕ ದೌರ್ಜನ್ಯಕ್ಕೆ ವಾರ್ಡನ್ ರಶ್ಮಿ ಸಹಕಾರ ನೀಡಿದ್ದರು.

ಚಾರ್ಜ್​ಶೀಟ್​​ನಲ್ಲಿ ಎರಡನೇ ಆರೋಪಿ ಆಗಿರುವ ಲೇಡಿ ವಾರ್ಡನ್ ವಿರುದ್ಧ, ಬೆಚ್ಚಿ ಬೀಳಿಸುವ ಆರೋಪಗಳು ಮಾಡಲಾಗಿತ್ತು. ಈ ಪೈಕಿ, ಮುರುಘಾ ಶ್ರೀಗಳ ಬಳಿ ಬಾಲಕಿಯರನ್ನ ಕರೆದೊಯ್ಯುವ ಕೆಲಸವನ್ನ ಇದೇ ವಾರ್ಡನ್​ ಮಾಡುತ್ತಿದ್ದಳು.

ಇದನ್ನೂ ಓದಿ: ಮುರುಘಾ ಮಠದ ಎಸ್​ಜೆಎಂ ವಿದ್ಯಾಪೀಠದ ಸಿಇಒಗೆ ಗೇಟ್​ಪಾಸ್​: ಮುರುಘಾ ಶ್ರೀ ಆದೇಶ

ಯಾರನ್ನ ಕಳಿಸಬೇಕು, ಯಾವಾಗ ಕಳಿಸಬೇಕು,  ಹೇಗೆ ಕಳಿಸಬೇಕು ಅನ್ನುವ ಎಲ್ಲ ವಿಚಾರವನ್ನೂ ಈಕೆಯೇ ನೋಡಿಕೊಳ್ಳುತ್ತಿದ್ದಳು. ಇದಕ್ಕೆ ತಿರುಗಿ ಬೀಳುವ ಬಾಲಕಿಯರ ಮೇಲೆ, ಇಲ್ಲದ ನೆಪವೊಡ್ಡಿ ಶಿಕ್ಷೆಯನ್ನೂ ನೀಡುತ್ತಿದ್ದಳು ಅನ್ನುವ ಸಂಗತಿಯನ್ನ ಬಾಲಕಿಯರು ಹೇಳಿದ್ದರು.

ಮುರುಘಾಶ್ರೀ ವಿರುದ್ಧದ ಫೋಕ್ಸೋ ಪ್ರಕರಣದಲ್ಲಿ, ಸ್ವಾಮೀಜಿ ಕೃತ್ಯಕ್ಕೆ ಲೇಡಿ ವಾರ್ಡನ್ ಸಾಥ್ ನೀಡುತ್ತಿದ್ದರು ಅನ್ನುವ ಅಂಶವನ್ನ ಬಾಲಕಿಯರು ಪೊಲೀಸರ ಎದುರು ತಿಳಿಸಿದ್ದರು. ಇಲ್ಲಿ, ಶ್ರೀಗಳ ಬಳಿಗೆ ಕಳುಹಿಸಲು ಬಾಲಕಿಯರನ್ನ ಲೇಡಿ ವಾರ್ಡನ್ ಆಯ್ಕೆ ಮಾಡುತ್ತಿದ್ದಳು. ಬಡತನ, ತಂದೆ ತಾಯಿ ಇಲ್ಲದ ಬಾಲಕಿಯರನ್ನೇ ಈ ಕೃತ್ಯಕ್ಕೆ ಆಯ್ಕೆ ಮಾಡುತ್ತಿದ್ರಂತೆ.

ಇದನ್ನೂ ಓದಿ: ಮುರುಘಾಶ್ರೀ ಕೈಗೆ ಮರಳಿದ ಮುರುಘಾಮಠದ ಅಧಿಕಾರ

ಆರೋಪಿ ನಂಬರ್​ 1 ಅಂದರೆ ಮುರುಘಾ ಶ್ರೀ ಖಾಸಗಿ ಕೋಣೆಗೆ ಆರೋಪಿ ನಂಬರ್​ 2 ಹಾಸ್ಟೆಲ್​ ಲೇಡಿ ವಾರ್ಡನ್​ ಮಕ್ಕಳನ್ನ ಕರೆದುಕೊಂಡು ಹೋಗುತ್ತಿದ್ದರು. ಇದಕ್ಕೆ ಪೂರಕವಾದ ಸಾಕ್ಷ್ಯಧಾರಗಳು ಲಭಿಸಿವೆ ಎಂದು ಈ ಆರೋಪಗಳಿಗೆ ಪುಷ್ಠಿ ನೀಡುವಂತೆ ಸತ್ರಸ್ತೆಯರ ಪರ ವಕೀಲ ಶ್ರೀನಿವಾಸ್ ಹೇಳಿದ್ದರು.

ಹೊರಗಿದ್ದುಕೊಂಡೇ ಮಠದ ಆಡಳಿತ

ಚಿತ್ರದುರ್ಗ ಜಿಲ್ಲೆ ಪ್ರವೇಶಿಸದಂತೆ ಮುರುಘಾಶ್ರೀಗೆ ಹೈಕೋರ್ಟ್ ಷರತ್ತು ನೀಡಿದ ಹಿನ್ನಲೆ ಜಿಲ್ಲೆಯಿಂದ ಹೊರಗಿದ್ದುಕೊಂಡೇ ಮುರುಘಾ ಶ್ರೀಗಳು ಮಠದ ಆಡಳಿತವನ್ನು ನಡೆಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:58 pm, Thu, 21 December 23

Follow Us
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ