AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

POCSO Case 2ನೇ ಪೋಕ್ಸೋ ಪ್ರಕರಣದಲ್ಲೂ ಮುರುಘಾಶ್ರೀಗೆ ಸಿಗಲಿಲ್ಲ ಜಾಮೀನು

2ನೇ ಪೋಕ್ಸೋ ಪ್ರಕರಣದಲ್ಲೂ ಸಹ ಚಿತ್ರದುರ್ಗ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ, ಇದರಿಂದ ಶ್ರೀಗಳಿಗೆ ಜೈಲೇ ಗತಿಯಾಗಿದೆ.

POCSO Case 2ನೇ ಪೋಕ್ಸೋ ಪ್ರಕರಣದಲ್ಲೂ ಮುರುಘಾಶ್ರೀಗೆ ಸಿಗಲಿಲ್ಲ ಜಾಮೀನು
ಮುರುಘಾ ಶರಣರು
TV9 Web
| Edited By: |

Updated on: Dec 01, 2022 | 6:17 PM

Share

ಚಿತ್ರದುರ್ಗ: ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ 2ನೇ ಪೋಕ್ಸೋ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾಶ್ರೀ ಜಾಮೀನು ಅರ್ಜಿ ವಜಾಗೊಂಡಿದೆ.  2ನೇ ಪೋಕ್ಸೋ ಪ್ರಕರಣದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರ(Shivamurthy Sharanaru ) ಜಾಮೀನು ಅರ್ಜಿ ವಜಾಗೊಳಿಸಿ ಚಿತ್ರದುರ್ಗ (Chitradurga) 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು(ಡಿಸೆಂಬರ್ 01) ಆದೇಶ ಹೊರಡಿಸಿದೆ.

ಈಗಾಗಲೇ ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾ ಶ್ರೀಗಳ ವಿರುದ್ಧ ಅಕ್ಟೋಬರ್ 13ರಂದು 2ನೇ ಫೋಕ್ಸೋ ಕೇಸ್ ದಾಖಲಾಗಿತ್ತು. ಆಗಷ್ಟ್ 26ರಂದು 1ನೇ ಫೋಕ್ಸೋ ಪ್ರಕರಣ ದಾಖಲಾಗಿತ್ತು. ಬಳಿಕ ಮುರುಘಾಶ್ರೀಗಳನ್ನ ಸೆಪ್ಟೆಂಬರ್ 1ರಂದು ಪೊಲೀಸರು ಬಂಧಿಸಿದ್ದು,. ಕಳೆದ 3ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ಮುರುಘಾಶ್ರೀ ಕಾಮಚೇಷ್ಟೆ ಬಯಲಿಗೆಳೆದ ಒಡನಾಡಿ ಸಂಸ್ಥೆ ಬಾಯಿ ಮುಚ್ಚಿಸಲು 3 ಕೋಟಿ. ರೂ ಆಫರ್

ಮತ್ತೊಂದು ಆರೋಪ

ಮುರುಘಾ ಮಠದ ಹಾಸ್ಟೆಲ್​ನಲ್ಲಿ ವಾಸವಿದ್ದ 22 ಅನಾಥ ಮಕ್ಕಳು ನಾಪತ್ತೆಯಾಗಿರುವ ಗಂಭೀರ ಆರೋಪ ಕೇಳಿಬಂದಿದೆ. ನಾಪತ್ತೆಯಾಗಿರುವವರ ಪೈಕಿ 14 ಹೆಣ್ಣು ಹಾಗೂ 8 ಗಂಡು ಮಕ್ಕಳಿದ್ದಾರೆ. ಅನಾಥ ಮಕ್ಕಳು ಮಠಕ್ಕೆ ಸಿಕ್ಕಿದ್ದು ಹೇಗೆ? ಅನಾಥ ಮಕ್ಕಳನ್ನು ಸಾಕಲು ಸರ್ಕಾರದಿಂದ ಅನುಮತಿ ಪಡೆಯಲಾಗಿತ್ತೇ ಎಂಬ ಪ್ರಶ್ನೆಗಳು ಇದೀಗ ಉದ್ಭವಿಸಿವೆ. ‘ಬಸವ ಕುಟೀರ’ಕ್ಕೆ ಈ ಹಿಂದೆ ಸರ್ಕಾರದಿಂದ ಅನುದಾನ ಸಿಗುತ್ತಿತ್ತು. ಅದರೆ 2012ರಲ್ಲಿ ಈ ಅನುದಾನವನ್ನು ಶಿವಮೂರ್ತಿ ಮುರುಘಾ ಶರಣರು ನಿರಾಕರಿಸಿದ್ದರು. ಸರ್ಕಾರದ ಅನುದಾನ ಬಳಕೆ ಮಾಡಿಕೊಳ್ಳದ ಸಂಸ್ಥೆಯ ಬಗ್ಗೆ ಅಧಿಕಾರಿಗಳು ಹೆಚ್ಚು ಗಮನ ನೀಡುತ್ತಿರಲಿಲ್ಲ. ಹೀಗಾಗಿ ಮಕ್ಕಳು ನಾಪತ್ತೆಯಾದ ವಿಚಾರವೂ ತಡವಾಗಿ ಬೆಳಕಿಗೆ ಬಂದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ