AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಲೇ ಚಿತ್ರದುರ್ಗ! ಅಚ್ಚುಮೆಚ್ಚಿನ ಅಂಬಾರಿ ಆನೆ ಅರ್ಜುನನನ್ನು ಹೀಗೂ ಚಿರಸ್ಥಾಯಿಯಾಗಿ ನೆನಪು ಮಾಡಿಕೊಳ್ಳಬಹುದು

ಕೋಟೆನಾಡು ಚಿತ್ರದುರ್ಗದಲ್ಲಿ ಅಂಬಾರಿ ಆನೆ ಅರ್ಜುನ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ ಮೂಲಕ ಯುವಪಡೆ ವಿಶೇಷ ಗೌರವ ಸಲ್ಲಿಸಿದೆ.

ಭಲೇ ಚಿತ್ರದುರ್ಗ! ಅಚ್ಚುಮೆಚ್ಚಿನ ಅಂಬಾರಿ ಆನೆ ಅರ್ಜುನನನ್ನು ಹೀಗೂ ಚಿರಸ್ಥಾಯಿಯಾಗಿ ನೆನಪು ಮಾಡಿಕೊಳ್ಳಬಹುದು
ಅಚ್ಚುಮೆಚ್ಚಿನ ಅಂಬಾರಿ ಆನೆ ಅರ್ಜುನನನ್ನು ಹೀಗೂ ಚಿರಸ್ಥಾಯಿಯಾಗಿ ನೆನಪು ಮಾಡಿಕೊಳ್ಳಬಹುದು
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Dec 22, 2023 | 12:52 PM

Share

ವಿಶ್ವ ವಿಖ್ಯಾತ ಮೈಸೂರು ದಸರಾ ಅಂದಾಕ್ಷಣ ಅಂಬಾರಿ ಆನೆ ಅರ್ಜುನ ನೆನಪಾಗದೆ ಇರದು. ಇತ್ತೀಚೆಗೆ ಅರ್ಜುನ ಆನೆ ದಾರುಣ ಸಾವಿಗೀಡಾಗಿದ್ದು ನಾಡಿನ ಜನರ ಮನ ಮಿಡಿದಿದೆ. ಇದೇ ವೇಳೆ ಕೋಟೆನಾಡಿನಲ್ಲಿ ಅಂಬಾರಿ ಆನೆ ಅರ್ಜುನ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ ಮೂಲಕ ಸ್ಮರಿಸಿ ಗೌರವಿಸಲಾಗಿದೆ. ಈ ಕುರಿತು ವರದಿ.

ಇಲ್ಲಿದೆ. ಕೋಟೆನಾಡಿನಲ್ಲಿ ಅಂಬಾರಿ ಆನೆ ಅರ್ಜುನ ಹೆಸರಿನಲ್ಲಿ ಕ್ರಿಕೆಟ್ ಆಯೋಜನೆಯಾಗಿತ್ತು. ಕ್ರಿಕೆಟ್ ಪಂದ್ಯಾವಳಿಯಲ್ಲಿ ನಾಡಿನ ವಿವಿಧೆಡೆಯಿಂದ ತಂಡಗಳು ಭಾಗಿಯಾಗಿದ್ದವು. ಹೊನಲು-ಬೆಳಕಿನ ಪಂದ್ಯ ವೀಕ್ಷಿಸಲು ಕ್ರಿಕೆಟ್ ಪ್ರೇಮಿಗಳು ಜಮಾಯಿಸಿದ್ದರು. ಈ ದೃಶ್ಯಗಳು ಕಂಡು ಬಂದಿದ್ದು ಕೋಟೆನಾಡು ಚಿತ್ರದುರ್ಗ ನಗರದ ಹಳೇ ಮಾಧ್ಯಮಿಕ ಶಾಲಾ ಮೈದಾನದಲ್ಲಿ. ಹೌದು, ಕೋಟೆನಾಡಿನ ಜನರು ಮಾಜಿ ನಗರಸಭೆ ಅಧ್ಯಕ್ಷ ಬಿ. ಕಾಂತರಾಜ್ ನೇತೃತ್ವದಲ್ಲಿ ಅಂಬಾರಿ ಆನೆ ಅರ್ಜುನ ಕಪ್ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ ಮೂಲಕ ಅಂಬಾರಿ ಆನೆ ಅರ್ಜುನನ ಸ್ಮರಿಸಿ ಗೌರವ ಸಲ್ಲಿಸಿದ್ದಾರೆ.

ಇನ್ನು ಅಂಬಾರಿ ಆನೆ ಅರ್ಜುನ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಒಟ್ಟು 35 ತಂಡಗಳು ಭಾಗಿ ಆಗಿವೆ. ಚಿತ್ರದುರ್ಗ ಜಿಲ್ಲೆಯ 19 ತಂಡಗಳು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಯ 16 ತಂಡಗಳು ಭಾಗಿ ಆಗಿವೆ. ಅಂಬಾರಿ ಆನೆ ಅರ್ಜುನ್ ಕಪ್ ವಿನ್ನರ್ ಟೀಮ್ ಗೆ 2ಲಕ್ಷ ರೂಪಾಯಿ ಮತ್ತು ಪಾರಿತೋಷಕ ಹಾಗೂ ರನ್ನರ್ ಅಪ್ ಗೆ ಒಂದೂವರೆ ಲಕ್ಷ ರೂಪಾಯಿ ಮತ್ತು ಪಾರಿತೋಷಕ ನೀಡಲಾಗುತ್ತಿದೆ. ಮೂರು ದಿನಗಳ ಕಾಲ ನಡೆಯುವ ಈ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ನಾಳೆ ಸಂಜೆ ನಡೆಯಲಿದೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದಲ್ಲಿ ಅಂಬಾರಿ ಆನೆ ಅರ್ಜುನ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ ಮೂಲಕ ಯುವಪಡೆ ವಿಶೇಷ ಗೌರವ ಸಲ್ಲಿಸಿದೆ. ಕ್ರಿಕೆಟ್ ಪಂದ್ಯಾವಳಿ ವೀಕ್ಷಣೆಗೆ ಬಂದ ಅನೇಕರು ಯುವಕರ ಈ ವಿಶೇಷ ಪ್ರಯತ್ನಕ್ಕೆ ಭೇಷ್ ಎನ್ನುತ್ತಿದ್ದಾರೆ.

ಇನ್ನಷ್ಟು ಕರ್ನಾಟಕ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ