AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಲೇ ಚಿತ್ರದುರ್ಗ! ಅಚ್ಚುಮೆಚ್ಚಿನ ಅಂಬಾರಿ ಆನೆ ಅರ್ಜುನನನ್ನು ಹೀಗೂ ಚಿರಸ್ಥಾಯಿಯಾಗಿ ನೆನಪು ಮಾಡಿಕೊಳ್ಳಬಹುದು

ಕೋಟೆನಾಡು ಚಿತ್ರದುರ್ಗದಲ್ಲಿ ಅಂಬಾರಿ ಆನೆ ಅರ್ಜುನ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ ಮೂಲಕ ಯುವಪಡೆ ವಿಶೇಷ ಗೌರವ ಸಲ್ಲಿಸಿದೆ.

ಭಲೇ ಚಿತ್ರದುರ್ಗ! ಅಚ್ಚುಮೆಚ್ಚಿನ ಅಂಬಾರಿ ಆನೆ ಅರ್ಜುನನನ್ನು ಹೀಗೂ ಚಿರಸ್ಥಾಯಿಯಾಗಿ ನೆನಪು ಮಾಡಿಕೊಳ್ಳಬಹುದು
ಅಚ್ಚುಮೆಚ್ಚಿನ ಅಂಬಾರಿ ಆನೆ ಅರ್ಜುನನನ್ನು ಹೀಗೂ ಚಿರಸ್ಥಾಯಿಯಾಗಿ ನೆನಪು ಮಾಡಿಕೊಳ್ಳಬಹುದು
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Dec 22, 2023 | 12:52 PM

Share

ವಿಶ್ವ ವಿಖ್ಯಾತ ಮೈಸೂರು ದಸರಾ ಅಂದಾಕ್ಷಣ ಅಂಬಾರಿ ಆನೆ ಅರ್ಜುನ ನೆನಪಾಗದೆ ಇರದು. ಇತ್ತೀಚೆಗೆ ಅರ್ಜುನ ಆನೆ ದಾರುಣ ಸಾವಿಗೀಡಾಗಿದ್ದು ನಾಡಿನ ಜನರ ಮನ ಮಿಡಿದಿದೆ. ಇದೇ ವೇಳೆ ಕೋಟೆನಾಡಿನಲ್ಲಿ ಅಂಬಾರಿ ಆನೆ ಅರ್ಜುನ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ ಮೂಲಕ ಸ್ಮರಿಸಿ ಗೌರವಿಸಲಾಗಿದೆ. ಈ ಕುರಿತು ವರದಿ.

ಇಲ್ಲಿದೆ. ಕೋಟೆನಾಡಿನಲ್ಲಿ ಅಂಬಾರಿ ಆನೆ ಅರ್ಜುನ ಹೆಸರಿನಲ್ಲಿ ಕ್ರಿಕೆಟ್ ಆಯೋಜನೆಯಾಗಿತ್ತು. ಕ್ರಿಕೆಟ್ ಪಂದ್ಯಾವಳಿಯಲ್ಲಿ ನಾಡಿನ ವಿವಿಧೆಡೆಯಿಂದ ತಂಡಗಳು ಭಾಗಿಯಾಗಿದ್ದವು. ಹೊನಲು-ಬೆಳಕಿನ ಪಂದ್ಯ ವೀಕ್ಷಿಸಲು ಕ್ರಿಕೆಟ್ ಪ್ರೇಮಿಗಳು ಜಮಾಯಿಸಿದ್ದರು. ಈ ದೃಶ್ಯಗಳು ಕಂಡು ಬಂದಿದ್ದು ಕೋಟೆನಾಡು ಚಿತ್ರದುರ್ಗ ನಗರದ ಹಳೇ ಮಾಧ್ಯಮಿಕ ಶಾಲಾ ಮೈದಾನದಲ್ಲಿ. ಹೌದು, ಕೋಟೆನಾಡಿನ ಜನರು ಮಾಜಿ ನಗರಸಭೆ ಅಧ್ಯಕ್ಷ ಬಿ. ಕಾಂತರಾಜ್ ನೇತೃತ್ವದಲ್ಲಿ ಅಂಬಾರಿ ಆನೆ ಅರ್ಜುನ ಕಪ್ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ ಮೂಲಕ ಅಂಬಾರಿ ಆನೆ ಅರ್ಜುನನ ಸ್ಮರಿಸಿ ಗೌರವ ಸಲ್ಲಿಸಿದ್ದಾರೆ.

ಇನ್ನು ಅಂಬಾರಿ ಆನೆ ಅರ್ಜುನ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಒಟ್ಟು 35 ತಂಡಗಳು ಭಾಗಿ ಆಗಿವೆ. ಚಿತ್ರದುರ್ಗ ಜಿಲ್ಲೆಯ 19 ತಂಡಗಳು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಯ 16 ತಂಡಗಳು ಭಾಗಿ ಆಗಿವೆ. ಅಂಬಾರಿ ಆನೆ ಅರ್ಜುನ್ ಕಪ್ ವಿನ್ನರ್ ಟೀಮ್ ಗೆ 2ಲಕ್ಷ ರೂಪಾಯಿ ಮತ್ತು ಪಾರಿತೋಷಕ ಹಾಗೂ ರನ್ನರ್ ಅಪ್ ಗೆ ಒಂದೂವರೆ ಲಕ್ಷ ರೂಪಾಯಿ ಮತ್ತು ಪಾರಿತೋಷಕ ನೀಡಲಾಗುತ್ತಿದೆ. ಮೂರು ದಿನಗಳ ಕಾಲ ನಡೆಯುವ ಈ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ನಾಳೆ ಸಂಜೆ ನಡೆಯಲಿದೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದಲ್ಲಿ ಅಂಬಾರಿ ಆನೆ ಅರ್ಜುನ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ ಮೂಲಕ ಯುವಪಡೆ ವಿಶೇಷ ಗೌರವ ಸಲ್ಲಿಸಿದೆ. ಕ್ರಿಕೆಟ್ ಪಂದ್ಯಾವಳಿ ವೀಕ್ಷಣೆಗೆ ಬಂದ ಅನೇಕರು ಯುವಕರ ಈ ವಿಶೇಷ ಪ್ರಯತ್ನಕ್ಕೆ ಭೇಷ್ ಎನ್ನುತ್ತಿದ್ದಾರೆ.

ಇನ್ನಷ್ಟು ಕರ್ನಾಟಕ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More