AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಲೇ ಚಿತ್ರದುರ್ಗ! ಅಚ್ಚುಮೆಚ್ಚಿನ ಅಂಬಾರಿ ಆನೆ ಅರ್ಜುನನನ್ನು ಹೀಗೂ ಚಿರಸ್ಥಾಯಿಯಾಗಿ ನೆನಪು ಮಾಡಿಕೊಳ್ಳಬಹುದು

ಕೋಟೆನಾಡು ಚಿತ್ರದುರ್ಗದಲ್ಲಿ ಅಂಬಾರಿ ಆನೆ ಅರ್ಜುನ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ ಮೂಲಕ ಯುವಪಡೆ ವಿಶೇಷ ಗೌರವ ಸಲ್ಲಿಸಿದೆ.

ಭಲೇ ಚಿತ್ರದುರ್ಗ! ಅಚ್ಚುಮೆಚ್ಚಿನ ಅಂಬಾರಿ ಆನೆ ಅರ್ಜುನನನ್ನು ಹೀಗೂ ಚಿರಸ್ಥಾಯಿಯಾಗಿ ನೆನಪು ಮಾಡಿಕೊಳ್ಳಬಹುದು
ಅಚ್ಚುಮೆಚ್ಚಿನ ಅಂಬಾರಿ ಆನೆ ಅರ್ಜುನನನ್ನು ಹೀಗೂ ಚಿರಸ್ಥಾಯಿಯಾಗಿ ನೆನಪು ಮಾಡಿಕೊಳ್ಳಬಹುದು
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Dec 22, 2023 | 12:52 PM

Share

ವಿಶ್ವ ವಿಖ್ಯಾತ ಮೈಸೂರು ದಸರಾ ಅಂದಾಕ್ಷಣ ಅಂಬಾರಿ ಆನೆ ಅರ್ಜುನ ನೆನಪಾಗದೆ ಇರದು. ಇತ್ತೀಚೆಗೆ ಅರ್ಜುನ ಆನೆ ದಾರುಣ ಸಾವಿಗೀಡಾಗಿದ್ದು ನಾಡಿನ ಜನರ ಮನ ಮಿಡಿದಿದೆ. ಇದೇ ವೇಳೆ ಕೋಟೆನಾಡಿನಲ್ಲಿ ಅಂಬಾರಿ ಆನೆ ಅರ್ಜುನ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ ಮೂಲಕ ಸ್ಮರಿಸಿ ಗೌರವಿಸಲಾಗಿದೆ. ಈ ಕುರಿತು ವರದಿ.

ಇಲ್ಲಿದೆ. ಕೋಟೆನಾಡಿನಲ್ಲಿ ಅಂಬಾರಿ ಆನೆ ಅರ್ಜುನ ಹೆಸರಿನಲ್ಲಿ ಕ್ರಿಕೆಟ್ ಆಯೋಜನೆಯಾಗಿತ್ತು. ಕ್ರಿಕೆಟ್ ಪಂದ್ಯಾವಳಿಯಲ್ಲಿ ನಾಡಿನ ವಿವಿಧೆಡೆಯಿಂದ ತಂಡಗಳು ಭಾಗಿಯಾಗಿದ್ದವು. ಹೊನಲು-ಬೆಳಕಿನ ಪಂದ್ಯ ವೀಕ್ಷಿಸಲು ಕ್ರಿಕೆಟ್ ಪ್ರೇಮಿಗಳು ಜಮಾಯಿಸಿದ್ದರು. ಈ ದೃಶ್ಯಗಳು ಕಂಡು ಬಂದಿದ್ದು ಕೋಟೆನಾಡು ಚಿತ್ರದುರ್ಗ ನಗರದ ಹಳೇ ಮಾಧ್ಯಮಿಕ ಶಾಲಾ ಮೈದಾನದಲ್ಲಿ. ಹೌದು, ಕೋಟೆನಾಡಿನ ಜನರು ಮಾಜಿ ನಗರಸಭೆ ಅಧ್ಯಕ್ಷ ಬಿ. ಕಾಂತರಾಜ್ ನೇತೃತ್ವದಲ್ಲಿ ಅಂಬಾರಿ ಆನೆ ಅರ್ಜುನ ಕಪ್ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ ಮೂಲಕ ಅಂಬಾರಿ ಆನೆ ಅರ್ಜುನನ ಸ್ಮರಿಸಿ ಗೌರವ ಸಲ್ಲಿಸಿದ್ದಾರೆ.

ಇನ್ನು ಅಂಬಾರಿ ಆನೆ ಅರ್ಜುನ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಒಟ್ಟು 35 ತಂಡಗಳು ಭಾಗಿ ಆಗಿವೆ. ಚಿತ್ರದುರ್ಗ ಜಿಲ್ಲೆಯ 19 ತಂಡಗಳು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಯ 16 ತಂಡಗಳು ಭಾಗಿ ಆಗಿವೆ. ಅಂಬಾರಿ ಆನೆ ಅರ್ಜುನ್ ಕಪ್ ವಿನ್ನರ್ ಟೀಮ್ ಗೆ 2ಲಕ್ಷ ರೂಪಾಯಿ ಮತ್ತು ಪಾರಿತೋಷಕ ಹಾಗೂ ರನ್ನರ್ ಅಪ್ ಗೆ ಒಂದೂವರೆ ಲಕ್ಷ ರೂಪಾಯಿ ಮತ್ತು ಪಾರಿತೋಷಕ ನೀಡಲಾಗುತ್ತಿದೆ. ಮೂರು ದಿನಗಳ ಕಾಲ ನಡೆಯುವ ಈ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ನಾಳೆ ಸಂಜೆ ನಡೆಯಲಿದೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದಲ್ಲಿ ಅಂಬಾರಿ ಆನೆ ಅರ್ಜುನ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ ಮೂಲಕ ಯುವಪಡೆ ವಿಶೇಷ ಗೌರವ ಸಲ್ಲಿಸಿದೆ. ಕ್ರಿಕೆಟ್ ಪಂದ್ಯಾವಳಿ ವೀಕ್ಷಣೆಗೆ ಬಂದ ಅನೇಕರು ಯುವಕರ ಈ ವಿಶೇಷ ಪ್ರಯತ್ನಕ್ಕೆ ಭೇಷ್ ಎನ್ನುತ್ತಿದ್ದಾರೆ.

ಇನ್ನಷ್ಟು ಕರ್ನಾಟಕ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ