AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಲೇ ಚಿತ್ರದುರ್ಗ! ಅಚ್ಚುಮೆಚ್ಚಿನ ಅಂಬಾರಿ ಆನೆ ಅರ್ಜುನನನ್ನು ಹೀಗೂ ಚಿರಸ್ಥಾಯಿಯಾಗಿ ನೆನಪು ಮಾಡಿಕೊಳ್ಳಬಹುದು

ಕೋಟೆನಾಡು ಚಿತ್ರದುರ್ಗದಲ್ಲಿ ಅಂಬಾರಿ ಆನೆ ಅರ್ಜುನ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ ಮೂಲಕ ಯುವಪಡೆ ವಿಶೇಷ ಗೌರವ ಸಲ್ಲಿಸಿದೆ.

ಭಲೇ ಚಿತ್ರದುರ್ಗ! ಅಚ್ಚುಮೆಚ್ಚಿನ ಅಂಬಾರಿ ಆನೆ ಅರ್ಜುನನನ್ನು ಹೀಗೂ ಚಿರಸ್ಥಾಯಿಯಾಗಿ ನೆನಪು ಮಾಡಿಕೊಳ್ಳಬಹುದು
ಅಚ್ಚುಮೆಚ್ಚಿನ ಅಂಬಾರಿ ಆನೆ ಅರ್ಜುನನನ್ನು ಹೀಗೂ ಚಿರಸ್ಥಾಯಿಯಾಗಿ ನೆನಪು ಮಾಡಿಕೊಳ್ಳಬಹುದು
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Dec 22, 2023 | 12:52 PM

Share

ವಿಶ್ವ ವಿಖ್ಯಾತ ಮೈಸೂರು ದಸರಾ ಅಂದಾಕ್ಷಣ ಅಂಬಾರಿ ಆನೆ ಅರ್ಜುನ ನೆನಪಾಗದೆ ಇರದು. ಇತ್ತೀಚೆಗೆ ಅರ್ಜುನ ಆನೆ ದಾರುಣ ಸಾವಿಗೀಡಾಗಿದ್ದು ನಾಡಿನ ಜನರ ಮನ ಮಿಡಿದಿದೆ. ಇದೇ ವೇಳೆ ಕೋಟೆನಾಡಿನಲ್ಲಿ ಅಂಬಾರಿ ಆನೆ ಅರ್ಜುನ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ ಮೂಲಕ ಸ್ಮರಿಸಿ ಗೌರವಿಸಲಾಗಿದೆ. ಈ ಕುರಿತು ವರದಿ.

ಇಲ್ಲಿದೆ. ಕೋಟೆನಾಡಿನಲ್ಲಿ ಅಂಬಾರಿ ಆನೆ ಅರ್ಜುನ ಹೆಸರಿನಲ್ಲಿ ಕ್ರಿಕೆಟ್ ಆಯೋಜನೆಯಾಗಿತ್ತು. ಕ್ರಿಕೆಟ್ ಪಂದ್ಯಾವಳಿಯಲ್ಲಿ ನಾಡಿನ ವಿವಿಧೆಡೆಯಿಂದ ತಂಡಗಳು ಭಾಗಿಯಾಗಿದ್ದವು. ಹೊನಲು-ಬೆಳಕಿನ ಪಂದ್ಯ ವೀಕ್ಷಿಸಲು ಕ್ರಿಕೆಟ್ ಪ್ರೇಮಿಗಳು ಜಮಾಯಿಸಿದ್ದರು. ಈ ದೃಶ್ಯಗಳು ಕಂಡು ಬಂದಿದ್ದು ಕೋಟೆನಾಡು ಚಿತ್ರದುರ್ಗ ನಗರದ ಹಳೇ ಮಾಧ್ಯಮಿಕ ಶಾಲಾ ಮೈದಾನದಲ್ಲಿ. ಹೌದು, ಕೋಟೆನಾಡಿನ ಜನರು ಮಾಜಿ ನಗರಸಭೆ ಅಧ್ಯಕ್ಷ ಬಿ. ಕಾಂತರಾಜ್ ನೇತೃತ್ವದಲ್ಲಿ ಅಂಬಾರಿ ಆನೆ ಅರ್ಜುನ ಕಪ್ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ ಮೂಲಕ ಅಂಬಾರಿ ಆನೆ ಅರ್ಜುನನ ಸ್ಮರಿಸಿ ಗೌರವ ಸಲ್ಲಿಸಿದ್ದಾರೆ.

ಇನ್ನು ಅಂಬಾರಿ ಆನೆ ಅರ್ಜುನ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಒಟ್ಟು 35 ತಂಡಗಳು ಭಾಗಿ ಆಗಿವೆ. ಚಿತ್ರದುರ್ಗ ಜಿಲ್ಲೆಯ 19 ತಂಡಗಳು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಯ 16 ತಂಡಗಳು ಭಾಗಿ ಆಗಿವೆ. ಅಂಬಾರಿ ಆನೆ ಅರ್ಜುನ್ ಕಪ್ ವಿನ್ನರ್ ಟೀಮ್ ಗೆ 2ಲಕ್ಷ ರೂಪಾಯಿ ಮತ್ತು ಪಾರಿತೋಷಕ ಹಾಗೂ ರನ್ನರ್ ಅಪ್ ಗೆ ಒಂದೂವರೆ ಲಕ್ಷ ರೂಪಾಯಿ ಮತ್ತು ಪಾರಿತೋಷಕ ನೀಡಲಾಗುತ್ತಿದೆ. ಮೂರು ದಿನಗಳ ಕಾಲ ನಡೆಯುವ ಈ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ನಾಳೆ ಸಂಜೆ ನಡೆಯಲಿದೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದಲ್ಲಿ ಅಂಬಾರಿ ಆನೆ ಅರ್ಜುನ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ ಮೂಲಕ ಯುವಪಡೆ ವಿಶೇಷ ಗೌರವ ಸಲ್ಲಿಸಿದೆ. ಕ್ರಿಕೆಟ್ ಪಂದ್ಯಾವಳಿ ವೀಕ್ಷಣೆಗೆ ಬಂದ ಅನೇಕರು ಯುವಕರ ಈ ವಿಶೇಷ ಪ್ರಯತ್ನಕ್ಕೆ ಭೇಷ್ ಎನ್ನುತ್ತಿದ್ದಾರೆ.

ಇನ್ನಷ್ಟು ಕರ್ನಾಟಕ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು