AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ಭೀಕರ ಬರಗಾಲ: ಬರ ಪೀಡಿತ ಜಿಲ್ಲೆ ಎಂದು ಘೋಷಿಸಿ ಸೈಲೆಂಟ್ ಆದ ಸರ್ಕಾರ, ಆಕ್ರೋಶಗೊಂಡ ರೈತರು

Chitradurga News: ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಇಲ್ಲದೇ ಭೀಕರ ಬರಗಾಲ ತಾಂಡವವಾಡುತ್ತಿದೆ. ಹಾಗಾಗಿ ರೈತಾಪಿ ವರ್ಗ ಬಿತ್ತಿದ ಬೆಳೆ ಕೈಗೆ ಸಿಗದೆ ಕಂಗಾಲಾಗಿ ಕುಳಿತಿದ್ದಾರೆ. ಆದರೆ ಸರ್ಕಾರ ಮಾತ್ರ ಬರ ಪೀಡಿತ ಜಿಲ್ಲೆ ಎಂದು ಘೋಷಿಸಿ ಸೈಲೆಂಟಾಗಿರುವುದು ರೈತರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಚಿತ್ರದುರ್ಗದಲ್ಲಿ ಭೀಕರ ಬರಗಾಲ: ಬರ ಪೀಡಿತ ಜಿಲ್ಲೆ ಎಂದು ಘೋಷಿಸಿ ಸೈಲೆಂಟ್ ಆದ ಸರ್ಕಾರ, ಆಕ್ರೋಶಗೊಂಡ ರೈತರು
ಶೇಂಗಾ ಬೆಳೆ
ಬಸವರಾಜ ಮುದನೂರ್
| Edited By: |

Updated on: Oct 02, 2023 | 1:58 PM

Share

ಚಿತ್ರದುರ್ಗ, ಅಕ್ಟೋಬರ್​ 02: ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಭೀಕರ ಬರಗಾಲ (drought) ತಾಂಡವವಾಡುತ್ತಿದೆ. ರೈತಾಪಿ ವರ್ಗ ಬಿತ್ತಿದ ಬೆಳೆ ಕೈಗೆ ಸಿಗದೆ ಕಂಗಾಲಾಗಿ ಕುಳಿತಿದೆ. ಜಮೀನಿನಲ್ಲೇ ಒಣಗಿ ಹೋದ ಬೆಳೆ ಜಾನುವಾರುಗಳ ಪಾಲಾಗಿವೆ. ಸಾಲಸೋಲ ಮಾಡಿ ಬಿತ್ತಿ ಬೆಳೆದ ಬೆಳೆ ಕೈಗೆ ಸಿಗದೆ ರೈತರು ಕಂಗಾಲಾಗಿದ್ದಾರೆ. ಹೂವು, ಶೇಂಗಾ, ರಾಗಿ, ಮೆಕ್ಕೆಜೋಳ ಬೆಳೆಗಳು ಹಾಳಾಗಿವೆ. ಆದರೆ ಸರ್ಕಾರ ಮಾತ್ರ ಬರ ಪೀಡಿತ ಜಿಲ್ಲೆ ಎಂದು ಘೋಷಿಸಿ ಸೈಲೆಂಟಾಗಿರುವುದು ರೈತರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಜಿಲ್ಲೆಯಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಶೇಂಗಾ, ನಲವತ್ತು ಸಾವಿರ ಹೆಕ್ಟೇರ್​ನಲ್ಲಿ ಮೆಕ್ಕೆಜೋಳ, ನೂರಾರು ಎಕರೆ ಪ್ರದೇಶದಲ್ಲಿ ಹೂವು, ರಾಗಿ ಮತ್ತಿತರೆ ಬೆಳೆ ಬೆಳೆಯಲಾಗುತ್ತದೆ. ಆದರೆ ಈ ವರ್ಷ ಭೀಕರ ಬರಗಾಲ ಎದುರಾಗಿದ್ದು, ಬಹುತೇಕ ಬೆಳೆಗಳು ಹಾನಿಗೊಳಗಾಗಿವೆ. ಸಾಲಸೋಲ ಕೃಷಿ ಕಾಯಕದಲ್ಲಿ ತೊಡಗಿದ್ದ ರೈತ ಮುಂದಿನ ಗತಿ ನೆನೆದು ಕಂಗಾಲಾಗಿದ್ದಾನೆ. ಬಿತ್ತಿದ ಬೆಳೆ ಹಾಳಾಗಿದ್ದು ಕುರಿ-ಮೇಕೆ, ಜಾನುವಾರುಗಳಿಗೆ ಆಹಾರವನ್ನಾಗಿಸಿ ಸಂಕಟ ಪಡುವ ಸ್ಥಿತಿ ರೈತನಿಗೆ ಎದುರಾಗಿದೆ.

ಇದನ್ನೂ ಓದಿ: ಗದಗ: ಚೆಂಡು ಹೂವು ಬೆಳೆದು ಮಗಳಿಗೆ ಬಿಇ ಓದಿಸುವ ರೈತನ ಕನಸು ನುಚ್ಚು ನೂರು

ಈಗಾಗಲೇ ಸರ್ಕಾರ ಚಿತ್ರದುರ್ಗ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿದೆ. ಜಿಲ್ಲೆಯ ಆರು ತಾಲೂಕುಗಳನ್ನ ಬರ ಪೀಡಿತ ಪ್ರದೇಶದ ಪಟ್ಟಿಗೆ ಸೇರಿಸಲಾಗಿದೆ. ಆದರೆ ಬರದ ಜಿಲ್ಲೆ ಎಂದು ಘೋಷಿಸಿದ್ದಷ್ಟೇ ಆಗಿದೆ. ಹೊರತು ಪರಿಹಾರ ಕ್ರಮದ ಪ್ರಕ್ರಿಯೆ ನಡೆದಿಲ್ಲ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬರ ಪೀಡಿತ ತಾಲೂಕಿನಿಂದ ಮುಂಡರಗಿ ಕೈ ಬಿಟ್ಟಿದ್ದಕ್ಕೆ ಆಕ್ರೋಶ: ಹೋರಾಟದ ಎಚ್ಚರಿಕೆ ನೀಡಿದ ರೈತರು

ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಭೀಕರ ಬರಗಾಲಕ್ಕೆ ತುತ್ತಾಗಿದೆ. ರೈತಾಪಿ ವರ್ಗದ ಸಂಕಟ ಹೇಳ ತೀರದಾಗಿದೆ. ಆದರೆ ಸರ್ಕಾರ ಮಾತ್ರ ಬರದ ಜಿಲ್ಲೆ ಎಂದು ಘೋಷಿಸಿ ಪರಿಹಾರ ಕ್ರಮ ಕೈಗೊಳ್ಳದಿರುವುದು ರೈತಾಪಿ ವರ್ಗದಲ್ಲಿ ಆಕ್ರೋಶ ಮೂಡಿಸಿದೆ.

ಕುಸಿದ ಸೇವಂತಿಗೆ ಬೆಲೆ, ಹೂವಿನ ತೋಟ ನಾಶ

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ಮಳೆ ಕೊರತೆಯಿಂದಾಗಿ ಬರದ ಛಾಯೆ ಆವರಿಸಿದೆ. ರೈತರ ಮೇಲಿನ ಈ ಬರೆಯ ಮೇಲೆ ಬೆಲೆ ಕುಸಿತದ ಬರ ಬಿದ್ದಿದೆ. ಬೆಲೆ ಕುಸಿತಗೊಂಡ ಹಿನ್ನೆಲೆ ಕದಂಪೂರ ಗ್ರಾಮದ ರೈತರೊಬ್ಬರು ಸೇವಂತಿಗೆ ಹೂವಿನ ಕೃಷಿಯನ್ನು ನಾಶಗೊಳಿಸಿದ್ದಾರೆ.

ಹೂವಿನ ಬೆಲೆ ಮಾರುಕಟ್ಟೆಯಲ್ಲಿ ಪಾತಾಳಕ್ಕೆ ಕುಸಿದಿದ್ದು, ರೈತ ಅಕ್ಷರಶಃ ಕಂಗಾಲಾಗಿದ್ದಾನೆ. ಭೀಕರ ಬರಗಾಲ ಇದ್ದರೂ ಅಲ್ಪಸ್ವಲ್ಪ ನೀರಿನಲ್ಲಿ ಎರಡೂವರೆ ಎಕರೆ ಜಮೀನಿನಲ್ಲಿ ಸೇವಂತಿಗೆ ಹೂ ಬೆಳೆದಿದ್ದರು. ಆದರೆ, ಮಾರುಕಟ್ಟೆಯಲ್ಲಿ ಈ ಸೇವಂತಿಗೆ ಬೆಲೆ ಸಿಗುತ್ತಿಲ್ಲ. ‌ಹೀಗಾಗಿ ಮಾರುಕಟ್ಟೆಗೆ ಹೋದರೂ ಹತ್ತು ರೂಪಾಯಿ ಒಂದು ಕೆಜಿ ಸೇವಂತಿಗೆ ಮಾರಾಟವಾಗಿಲ್ಲ. ಇದೇ ಕಾರಣಕ್ಕೆ ಸಮೃದ್ಧವಾಗಿ ಬೆಳೆದ ಸೇವಂತಿಗೆ ಕೃಷಿಯನ್ನು ತಾನೇ ಟ್ರ್ಯಾಕ್ಟರ್ ಮೂಲಕ ನಾಶ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!