ಚಿತ್ರದುರ್ಗದಲ್ಲಿ ಭೀಕರ ಬರಗಾಲ: ಬರ ಪೀಡಿತ ಜಿಲ್ಲೆ ಎಂದು ಘೋಷಿಸಿ ಸೈಲೆಂಟ್ ಆದ ಸರ್ಕಾರ, ಆಕ್ರೋಶಗೊಂಡ ರೈತರು

Chitradurga News: ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಇಲ್ಲದೇ ಭೀಕರ ಬರಗಾಲ ತಾಂಡವವಾಡುತ್ತಿದೆ. ಹಾಗಾಗಿ ರೈತಾಪಿ ವರ್ಗ ಬಿತ್ತಿದ ಬೆಳೆ ಕೈಗೆ ಸಿಗದೆ ಕಂಗಾಲಾಗಿ ಕುಳಿತಿದ್ದಾರೆ. ಆದರೆ ಸರ್ಕಾರ ಮಾತ್ರ ಬರ ಪೀಡಿತ ಜಿಲ್ಲೆ ಎಂದು ಘೋಷಿಸಿ ಸೈಲೆಂಟಾಗಿರುವುದು ರೈತರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಚಿತ್ರದುರ್ಗದಲ್ಲಿ ಭೀಕರ ಬರಗಾಲ: ಬರ ಪೀಡಿತ ಜಿಲ್ಲೆ ಎಂದು ಘೋಷಿಸಿ ಸೈಲೆಂಟ್ ಆದ ಸರ್ಕಾರ, ಆಕ್ರೋಶಗೊಂಡ ರೈತರು
ಶೇಂಗಾ ಬೆಳೆ
Edited By:

Updated on: Oct 02, 2023 | 1:58 PM

ಚಿತ್ರದುರ್ಗ, ಅಕ್ಟೋಬರ್​ 02: ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಭೀಕರ ಬರಗಾಲ (drought) ತಾಂಡವವಾಡುತ್ತಿದೆ. ರೈತಾಪಿ ವರ್ಗ ಬಿತ್ತಿದ ಬೆಳೆ ಕೈಗೆ ಸಿಗದೆ ಕಂಗಾಲಾಗಿ ಕುಳಿತಿದೆ. ಜಮೀನಿನಲ್ಲೇ ಒಣಗಿ ಹೋದ ಬೆಳೆ ಜಾನುವಾರುಗಳ ಪಾಲಾಗಿವೆ. ಸಾಲಸೋಲ ಮಾಡಿ ಬಿತ್ತಿ ಬೆಳೆದ ಬೆಳೆ ಕೈಗೆ ಸಿಗದೆ ರೈತರು ಕಂಗಾಲಾಗಿದ್ದಾರೆ. ಹೂವು, ಶೇಂಗಾ, ರಾಗಿ, ಮೆಕ್ಕೆಜೋಳ ಬೆಳೆಗಳು ಹಾಳಾಗಿವೆ. ಆದರೆ ಸರ್ಕಾರ ಮಾತ್ರ ಬರ ಪೀಡಿತ ಜಿಲ್ಲೆ ಎಂದು ಘೋಷಿಸಿ ಸೈಲೆಂಟಾಗಿರುವುದು ರೈತರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಜಿಲ್ಲೆಯಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಶೇಂಗಾ, ನಲವತ್ತು ಸಾವಿರ ಹೆಕ್ಟೇರ್​ನಲ್ಲಿ ಮೆಕ್ಕೆಜೋಳ, ನೂರಾರು ಎಕರೆ ಪ್ರದೇಶದಲ್ಲಿ ಹೂವು, ರಾಗಿ ಮತ್ತಿತರೆ ಬೆಳೆ ಬೆಳೆಯಲಾಗುತ್ತದೆ. ಆದರೆ ಈ ವರ್ಷ ಭೀಕರ ಬರಗಾಲ ಎದುರಾಗಿದ್ದು, ಬಹುತೇಕ ಬೆಳೆಗಳು ಹಾನಿಗೊಳಗಾಗಿವೆ. ಸಾಲಸೋಲ ಕೃಷಿ ಕಾಯಕದಲ್ಲಿ ತೊಡಗಿದ್ದ ರೈತ ಮುಂದಿನ ಗತಿ ನೆನೆದು ಕಂಗಾಲಾಗಿದ್ದಾನೆ. ಬಿತ್ತಿದ ಬೆಳೆ ಹಾಳಾಗಿದ್ದು ಕುರಿ-ಮೇಕೆ, ಜಾನುವಾರುಗಳಿಗೆ ಆಹಾರವನ್ನಾಗಿಸಿ ಸಂಕಟ ಪಡುವ ಸ್ಥಿತಿ ರೈತನಿಗೆ ಎದುರಾಗಿದೆ.

ಇದನ್ನೂ ಓದಿ: ಗದಗ: ಚೆಂಡು ಹೂವು ಬೆಳೆದು ಮಗಳಿಗೆ ಬಿಇ ಓದಿಸುವ ರೈತನ ಕನಸು ನುಚ್ಚು ನೂರು

ಈಗಾಗಲೇ ಸರ್ಕಾರ ಚಿತ್ರದುರ್ಗ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿದೆ. ಜಿಲ್ಲೆಯ ಆರು ತಾಲೂಕುಗಳನ್ನ ಬರ ಪೀಡಿತ ಪ್ರದೇಶದ ಪಟ್ಟಿಗೆ ಸೇರಿಸಲಾಗಿದೆ. ಆದರೆ ಬರದ ಜಿಲ್ಲೆ ಎಂದು ಘೋಷಿಸಿದ್ದಷ್ಟೇ ಆಗಿದೆ. ಹೊರತು ಪರಿಹಾರ ಕ್ರಮದ ಪ್ರಕ್ರಿಯೆ ನಡೆದಿಲ್ಲ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬರ ಪೀಡಿತ ತಾಲೂಕಿನಿಂದ ಮುಂಡರಗಿ ಕೈ ಬಿಟ್ಟಿದ್ದಕ್ಕೆ ಆಕ್ರೋಶ: ಹೋರಾಟದ ಎಚ್ಚರಿಕೆ ನೀಡಿದ ರೈತರು

ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಭೀಕರ ಬರಗಾಲಕ್ಕೆ ತುತ್ತಾಗಿದೆ. ರೈತಾಪಿ ವರ್ಗದ ಸಂಕಟ ಹೇಳ ತೀರದಾಗಿದೆ. ಆದರೆ ಸರ್ಕಾರ ಮಾತ್ರ ಬರದ ಜಿಲ್ಲೆ ಎಂದು ಘೋಷಿಸಿ ಪರಿಹಾರ ಕ್ರಮ ಕೈಗೊಳ್ಳದಿರುವುದು ರೈತಾಪಿ ವರ್ಗದಲ್ಲಿ ಆಕ್ರೋಶ ಮೂಡಿಸಿದೆ.

ಕುಸಿದ ಸೇವಂತಿಗೆ ಬೆಲೆ, ಹೂವಿನ ತೋಟ ನಾಶ

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ಮಳೆ ಕೊರತೆಯಿಂದಾಗಿ ಬರದ ಛಾಯೆ ಆವರಿಸಿದೆ. ರೈತರ ಮೇಲಿನ ಈ ಬರೆಯ ಮೇಲೆ ಬೆಲೆ ಕುಸಿತದ ಬರ ಬಿದ್ದಿದೆ. ಬೆಲೆ ಕುಸಿತಗೊಂಡ ಹಿನ್ನೆಲೆ ಕದಂಪೂರ ಗ್ರಾಮದ ರೈತರೊಬ್ಬರು ಸೇವಂತಿಗೆ ಹೂವಿನ ಕೃಷಿಯನ್ನು ನಾಶಗೊಳಿಸಿದ್ದಾರೆ.

ಹೂವಿನ ಬೆಲೆ ಮಾರುಕಟ್ಟೆಯಲ್ಲಿ ಪಾತಾಳಕ್ಕೆ ಕುಸಿದಿದ್ದು, ರೈತ ಅಕ್ಷರಶಃ ಕಂಗಾಲಾಗಿದ್ದಾನೆ. ಭೀಕರ ಬರಗಾಲ ಇದ್ದರೂ ಅಲ್ಪಸ್ವಲ್ಪ ನೀರಿನಲ್ಲಿ ಎರಡೂವರೆ ಎಕರೆ ಜಮೀನಿನಲ್ಲಿ ಸೇವಂತಿಗೆ ಹೂ ಬೆಳೆದಿದ್ದರು. ಆದರೆ, ಮಾರುಕಟ್ಟೆಯಲ್ಲಿ ಈ ಸೇವಂತಿಗೆ ಬೆಲೆ ಸಿಗುತ್ತಿಲ್ಲ. ‌ಹೀಗಾಗಿ ಮಾರುಕಟ್ಟೆಗೆ ಹೋದರೂ ಹತ್ತು ರೂಪಾಯಿ ಒಂದು ಕೆಜಿ ಸೇವಂತಿಗೆ ಮಾರಾಟವಾಗಿಲ್ಲ. ಇದೇ ಕಾರಣಕ್ಕೆ ಸಮೃದ್ಧವಾಗಿ ಬೆಳೆದ ಸೇವಂತಿಗೆ ಕೃಷಿಯನ್ನು ತಾನೇ ಟ್ರ್ಯಾಕ್ಟರ್ ಮೂಲಕ ನಾಶ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us