AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭವಿಷ್ಯ ಹೇಳುವ ನೆಪದಲ್ಲಿ ಉಂಗುರ ಕದ್ದು ಪರಾರಿ: ನಾಲ್ವರು ಸಾಧು ವೇಷಧಾರಿಗಳು ಸೇರಿ ಚಾಲಕನ ಬಂಧನ

ಚಿತ್ರದುರ್ಗ ತಾಲೂಕಿನ ಚಿಕ್ಕಗೊಂಡನಹಳ್ಳಿ ಬಳಿ ಓರ್ವ ರೈತನ ಉಂಗುರ ಕದ್ದಿದ್ದ ಮಧ್ಯಪ್ರದೇಶ ಮೂಲದ ಐವರು ಸಾಧು ವೇಷಧಾರಿಗಳನ್ನು ಪೊಲೀಸರು ಬಂಧಿಸಿರುವಂತಹ ಘಟನೆ ನಡೆದಿದೆ. ಭವಿಷ್ಯ ಹೇಳುವ ನೆಪದಲ್ಲಿ ಉಂಗುರ ಕದ್ದು ಆರೋಪಿಗಳು ಪರಾರಿಯಾಗಿದ್ದರು. ಕಾರ್ಯಾಚರಣೆ ನಡೆಸಿ ತುರುವನೂರು ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಭವಿಷ್ಯ ಹೇಳುವ ನೆಪದಲ್ಲಿ ಉಂಗುರ ಕದ್ದು ಪರಾರಿ: ನಾಲ್ವರು ಸಾಧು ವೇಷಧಾರಿಗಳು ಸೇರಿ ಚಾಲಕನ ಬಂಧನ
ಬಂಧಿತರು
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Sep 03, 2025 | 8:18 PM

Share

ಚಿತ್ರದುರ್ಗ, ಸೆಪ್ಟೆಂಬರ್​ 03: ಭವಿಷ್ಯ ಹೇಳುವ ನೆಪದಲ್ಲಿ ರೈತನ ಉಂಗುರ (ring) ಕದ್ದ ಮಧ್ಯಪ್ರದೇಶ ಮೂಲದ ಐವರು ಸಾಧು ವೇಷಧಾರಿಗಳನ್ನು ಪೊಲೀಸರು ಬಂಧಿಸಿರುವಂತಹ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಚಿಕ್ಕಗೊಂಡನಹಳ್ಳಿ ಬಳಿ ನಡೆದಿದೆ. ಕಮಲನಾಥ್, ಸಂತೋಷ್ ನಾಥ್, ಚೈನ್ ನಾಥ್ ಚೌಹಾಣ್, ಶ್ರವಣ್ ಜೋಗಿ, ಚಾಲಕ ಟೋನಿಯಾ ಬಂಧಿತರು.

ನಡೆದಿದ್ದೇನು?

ರಾಷ್ಟ್ರೀಯ ಹೆದ್ದಾರಿ 50ರ ಬಳಿ ರೈತ ರವಿಕುಮಾರ್ ನಿಂತಿದ್ದರು. ಕಾರಿನಲ್ಲಿ ಕೂರಿಸಿ ಭವಿಷ್ಯ ಹೇಳುವ ನೆಪದಲ್ಲಿ ರವಿಕುಮಾರ್ ಕೈಯಲ್ಲಿದ್ದ ಉಂಗುರ ಕಸಿದು ಬಾಯಲ್ಲಿ ಹಾಕಿಕೊಂಡಿದ್ದರು. ನಂತರ ರೈತ ರವಿಕುಮಾರ್​ನನ್ನು ಕಾರಿನಿಂದ ಇಳಿಸಿ ಐವರು ಪರಾರಿ ಆಗಿದ್ದರು.

ಇದನ್ನೂ ಓದಿ: ಸಿಬಿಐ ನಿವೃತ್ತ ಎಸ್​ಪಿಯ 97ಲಕ್ಷ ರೂ. ಸಮೇತ ಬಾಡಿಗೆ ಕಾರು ಚಾಲಕ ಪರಾರಿ: ಕೆಲವೇ ಗಂಟೆಯಲ್ಲಿ ಸಿನಿಮೀಯ ರೀತಿಯಲ್ಲಿ ಬಂಧನ

ತುರುವನೂರು ಠಾಣೆ ಪೊಲೀಸರಿಗೆ ರವಿಕುಮಾರ್ ಮಾಹಿತಿ ನೀಡಿದ್ದರು. ಕಾರ್ಯಾಚರಣೆ ನಡೆಸಿ ಸಾಧು ವೇಷದಲ್ಲಿರುವ ನಾಲ್ವರು ಸೇರಿದಂತೆ ಓರ್ವ ಚಾಲಕನನ್ನು ಬಂಧಿಸಿದ್ದಾರೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ ಬಳಿಕ ಪೊಲೀಸರು ನ್ಯಾಯಾಂಗ ವಶಕ್ಕೆ ನೀಡಲಿದ್ದಾರೆ.

ಮನೆಯಲ್ಲಿ ಮಾಲಿಕರು ಇದ್ದರೂ ಹಣ, ಚಿನ್ನಾಭರಣಗಳ ಕದ್ದು ಪರಾರಿಯಾದ ಕಳ್ಳ

ಮನೆಯಲ್ಲಿ ಮಾಲಿಕರು ಇದ್ದರೂ ಹಣ ಚಿನ್ನಾಭರಣಗಳ ಕಳ್ಳತನ ಮಾಡಿರುವಂತಹ ಘಟನೆ ಚಿಕ್ಕಬಳ್ಳಾಪುರ ನಗರದ ಚಾಮರಾಜಪೇಟೆಯಲ್ಲಿ ನಡೆದಿದೆ. ಉತ್ತಮ್ ಎನ್ನುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ಬೆಳಗಾವಿ: ಪಿಸ್ಟಲ್ ಹಿಡಿದು ಚಿನ್ನದಂಗಡಿಗೆ ನುಗ್ಗಿದ ಕಳ್ಳರು ಮಾಲೀಕ ಕಿರುಚಿದೊಡೆ ಕಾಲಿಗೆ ಬುದ್ಧಿ ಹೇಳಿದರು!

ದಂಪತಿ ಮನೆಯ ಮೇಲಿನ ರೂಮ್​ನಲ್ಲಿದ್ದರು. ಉತ್ತಮ್ ತಾಯಿ ಬಾಗಿಲು ಮುಚ್ಚದೆ ಸ್ನಾನದ ಮನೆಗೆ ಹೋಗಿದ್ದರು. ಒಳ ಬಂದ ಕಳ್ಳ, ಮನೆಯ ಬಿರುವಿನಲ್ಲಿದ್ದ 85 ಸಾವಿರ ರೂ. ನಗದು ಸೇರಿ 25 ಗ್ರಾಂ ಚಿನ್ನಾಭರಣ ಕದ್ದು ಎಸ್ಕೆಪ್ ಆಗಿದ್ದಾನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ