AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭವಿಷ್ಯ ಹೇಳುವ ನೆಪದಲ್ಲಿ ಉಂಗುರ ಕದ್ದು ಪರಾರಿ: ನಾಲ್ವರು ಸಾಧು ವೇಷಧಾರಿಗಳು ಸೇರಿ ಚಾಲಕನ ಬಂಧನ

ಚಿತ್ರದುರ್ಗ ತಾಲೂಕಿನ ಚಿಕ್ಕಗೊಂಡನಹಳ್ಳಿ ಬಳಿ ಓರ್ವ ರೈತನ ಉಂಗುರ ಕದ್ದಿದ್ದ ಮಧ್ಯಪ್ರದೇಶ ಮೂಲದ ಐವರು ಸಾಧು ವೇಷಧಾರಿಗಳನ್ನು ಪೊಲೀಸರು ಬಂಧಿಸಿರುವಂತಹ ಘಟನೆ ನಡೆದಿದೆ. ಭವಿಷ್ಯ ಹೇಳುವ ನೆಪದಲ್ಲಿ ಉಂಗುರ ಕದ್ದು ಆರೋಪಿಗಳು ಪರಾರಿಯಾಗಿದ್ದರು. ಕಾರ್ಯಾಚರಣೆ ನಡೆಸಿ ತುರುವನೂರು ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಭವಿಷ್ಯ ಹೇಳುವ ನೆಪದಲ್ಲಿ ಉಂಗುರ ಕದ್ದು ಪರಾರಿ: ನಾಲ್ವರು ಸಾಧು ವೇಷಧಾರಿಗಳು ಸೇರಿ ಚಾಲಕನ ಬಂಧನ
ಬಂಧಿತರು
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Sep 03, 2025 | 8:18 PM

Share

ಚಿತ್ರದುರ್ಗ, ಸೆಪ್ಟೆಂಬರ್​ 03: ಭವಿಷ್ಯ ಹೇಳುವ ನೆಪದಲ್ಲಿ ರೈತನ ಉಂಗುರ (ring) ಕದ್ದ ಮಧ್ಯಪ್ರದೇಶ ಮೂಲದ ಐವರು ಸಾಧು ವೇಷಧಾರಿಗಳನ್ನು ಪೊಲೀಸರು ಬಂಧಿಸಿರುವಂತಹ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಚಿಕ್ಕಗೊಂಡನಹಳ್ಳಿ ಬಳಿ ನಡೆದಿದೆ. ಕಮಲನಾಥ್, ಸಂತೋಷ್ ನಾಥ್, ಚೈನ್ ನಾಥ್ ಚೌಹಾಣ್, ಶ್ರವಣ್ ಜೋಗಿ, ಚಾಲಕ ಟೋನಿಯಾ ಬಂಧಿತರು.

ನಡೆದಿದ್ದೇನು?

ರಾಷ್ಟ್ರೀಯ ಹೆದ್ದಾರಿ 50ರ ಬಳಿ ರೈತ ರವಿಕುಮಾರ್ ನಿಂತಿದ್ದರು. ಕಾರಿನಲ್ಲಿ ಕೂರಿಸಿ ಭವಿಷ್ಯ ಹೇಳುವ ನೆಪದಲ್ಲಿ ರವಿಕುಮಾರ್ ಕೈಯಲ್ಲಿದ್ದ ಉಂಗುರ ಕಸಿದು ಬಾಯಲ್ಲಿ ಹಾಕಿಕೊಂಡಿದ್ದರು. ನಂತರ ರೈತ ರವಿಕುಮಾರ್​ನನ್ನು ಕಾರಿನಿಂದ ಇಳಿಸಿ ಐವರು ಪರಾರಿ ಆಗಿದ್ದರು.

ಇದನ್ನೂ ಓದಿ: ಸಿಬಿಐ ನಿವೃತ್ತ ಎಸ್​ಪಿಯ 97ಲಕ್ಷ ರೂ. ಸಮೇತ ಬಾಡಿಗೆ ಕಾರು ಚಾಲಕ ಪರಾರಿ: ಕೆಲವೇ ಗಂಟೆಯಲ್ಲಿ ಸಿನಿಮೀಯ ರೀತಿಯಲ್ಲಿ ಬಂಧನ

ತುರುವನೂರು ಠಾಣೆ ಪೊಲೀಸರಿಗೆ ರವಿಕುಮಾರ್ ಮಾಹಿತಿ ನೀಡಿದ್ದರು. ಕಾರ್ಯಾಚರಣೆ ನಡೆಸಿ ಸಾಧು ವೇಷದಲ್ಲಿರುವ ನಾಲ್ವರು ಸೇರಿದಂತೆ ಓರ್ವ ಚಾಲಕನನ್ನು ಬಂಧಿಸಿದ್ದಾರೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ ಬಳಿಕ ಪೊಲೀಸರು ನ್ಯಾಯಾಂಗ ವಶಕ್ಕೆ ನೀಡಲಿದ್ದಾರೆ.

ಮನೆಯಲ್ಲಿ ಮಾಲಿಕರು ಇದ್ದರೂ ಹಣ, ಚಿನ್ನಾಭರಣಗಳ ಕದ್ದು ಪರಾರಿಯಾದ ಕಳ್ಳ

ಮನೆಯಲ್ಲಿ ಮಾಲಿಕರು ಇದ್ದರೂ ಹಣ ಚಿನ್ನಾಭರಣಗಳ ಕಳ್ಳತನ ಮಾಡಿರುವಂತಹ ಘಟನೆ ಚಿಕ್ಕಬಳ್ಳಾಪುರ ನಗರದ ಚಾಮರಾಜಪೇಟೆಯಲ್ಲಿ ನಡೆದಿದೆ. ಉತ್ತಮ್ ಎನ್ನುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ಬೆಳಗಾವಿ: ಪಿಸ್ಟಲ್ ಹಿಡಿದು ಚಿನ್ನದಂಗಡಿಗೆ ನುಗ್ಗಿದ ಕಳ್ಳರು ಮಾಲೀಕ ಕಿರುಚಿದೊಡೆ ಕಾಲಿಗೆ ಬುದ್ಧಿ ಹೇಳಿದರು!

ದಂಪತಿ ಮನೆಯ ಮೇಲಿನ ರೂಮ್​ನಲ್ಲಿದ್ದರು. ಉತ್ತಮ್ ತಾಯಿ ಬಾಗಿಲು ಮುಚ್ಚದೆ ಸ್ನಾನದ ಮನೆಗೆ ಹೋಗಿದ್ದರು. ಒಳ ಬಂದ ಕಳ್ಳ, ಮನೆಯ ಬಿರುವಿನಲ್ಲಿದ್ದ 85 ಸಾವಿರ ರೂ. ನಗದು ಸೇರಿ 25 ಗ್ರಾಂ ಚಿನ್ನಾಭರಣ ಕದ್ದು ಎಸ್ಕೆಪ್ ಆಗಿದ್ದಾನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ