AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ಕೇಸಿನಿಂದ ಮನನೊಂದು 2019ರಲ್ಲೇ ಐವರು ಆತ್ಮಹತ್ಯೆ: ಈಗ ಅಸ್ಥಿಪಂಜರ ಪತ್ತೆ: ಎಸ್ಪಿ ಹೇಳಿದ್ದೇನು?

ಚಿತ್ರದುರ್ಗದಲ್ಲಿ ಒಂದೇ ಮನೆಯಲ್ಲಿ ಐವರ ಅಸ್ಥಿಪಂಜರ ಪತ್ತೆ ಪ್ರಕರಣ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತೆ ಎಂದು ಚಿತ್ರದುರ್ಗ ಎಸ್‌ಪಿ ಧರ್ಮೇಂದರ್ ಕುಮಾರ್ ಮೀನಾ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲ ದಿನಗಳಿಂದ ಜಗನ್ನಾಥರೆಡ್ಡಿ ಮನೆಯ ಬಾಗಿಲು ತೆರೆದಿತ್ತು. ಮೃತಪಟ್ಟು ಹಲವು ವರ್ಷಗಳಾದರೂ ಯಾರಿಗೂ ತಿಳಿದಿಲ್ಲ. ಆತ್ಮಹತ್ಯೆ, ಕೊಲೆ, ಆರೋಗ್ಯ ಸಮಸ್ಯೆ ಸೇರಿ ಎಲ್ಲಾ ಆಯಾಮದಲ್ಲೂ ತನಿಖೆ ಮಾಡಲಾಗುತ್ತಿದೆ ಎಂದಿದ್ದಾರೆ.

1 ಕೇಸಿನಿಂದ ಮನನೊಂದು 2019ರಲ್ಲೇ ಐವರು ಆತ್ಮಹತ್ಯೆ: ಈಗ ಅಸ್ಥಿಪಂಜರ ಪತ್ತೆ: ಎಸ್ಪಿ ಹೇಳಿದ್ದೇನು?
ಘಟನೆ ನಡೆದ ಮನೆ, ಚಿತ್ರದುರ್ಗ ಎಸ್‌ಪಿ ಧರ್ಮೇಂದರ್ ಕುಮಾರ್ ಮೀನಾ
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಗಂಗಾಧರ​ ಬ. ಸಾಬೋಜಿ

Updated on: Dec 29, 2023 | 7:25 PM

ಚಿತ್ರದುರ್ಗ, ಡಿಸೆಂಬರ್​ 29: ನಗರದ ಚಳ್ಳಕೆರೆ (Challakere) ಗೇಟ್​ ಸಮೀಪವಿರುವ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಮನೆಯಲ್ಲಿ ಐವರ ಅಸ್ಥಿಪಂಜರ (Skeleton) ಪತ್ತೆ ಆಗಿವೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಎಸ್‌ಪಿ ಧರ್ಮೇಂದರ್ ಕುಮಾರ್ ಮೀನಾ ಪ್ರತಿಕ್ರಿಯಿಸಿದ್ದು, ಪ್ರಕರಣದ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತೆ. ಕೆಲ ದಿನಗಳಿಂದ ಜಗನ್ನಾಥರೆಡ್ಡಿ ಮನೆಯ ಬಾಗಿಲು ತೆರೆದಿತ್ತು. ನಿನ್ನೆ ಸಂಜೆ ವೇಳೆ ಅಸ್ಥಿಪಂಜರ ಪತ್ತೆ ಎಂದು ಸ್ಥಳೀಯರಿಂದ ಮಾಹಿತಿ ದೊರೆತಿದೆ. ಈ ಸಂಬಂಧ ಜಗನ್ನಾಥರೆಡ್ಡಿ ಸಂಬಂಧಿ ಪವನ್​ ಎಂಬುವವರು ಆತ್ಮಹತ್ಯೆಗೆ ಶರಣಾಗಿರುವ ಅನುಮಾನವಿದೆ ಎಂದು ದೂರು ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಮನೆಯಲ್ಲಿ ಚೀಟಿಯೊಂದು ಸಿಕ್ಕಿದೆ, ಪರಿಶೀಲನೆ ನಡೆಸುತ್ತಿದ್ದೇವೆ. ಪುತ್ರ ನರೇಂದ್ರರೆಡ್ಡಿ ವಿರುದ್ಧ ಬಿಡದಿ ಠಾಣೆಯಲ್ಲಿ ದರೋಡೆ ಕೇಸ್ ಇತ್ತು. ಜಗನ್ನಾಥರೆಡ್ಡಿ ಕುಟುಂಬ 3-4 ವರ್ಷದಿಂದ ಯಾರಿಗೂ ಕಾಣಿಸಿಕೊಂಡಿಲ್ಲ. ಹತ್ತು ವರ್ಷಗಳಿಂದಲೂ ಸಂಬಂಧಿಕರು, ಸ್ನೇಹಿತರಿಂದ ದೂರವಾಗಿದ್ದರು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ 5 ಅಸ್ಥಿಪಂಜರ ಸಿಕ್ಕ ಪ್ರಕರಣ: ಆತ್ಮಹತ್ಯೆ ಮಾಡಿಕೊಂಡಿತಾ ಜಗನ್ನಾಥರೆಡ್ಡಿ ಕುಟುಂಬ?

2019ರ ಜನವರಿಯಲ್ಲಿ ಮನೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಮೃತಪಟ್ಟು ಹಲವು ವರ್ಷಗಳಾದರೂ ಯಾರಿಗೂ ತಿಳಿದಿಲ್ಲ. ಆತ್ಮಹತ್ಯೆ, ಕೊಲೆ, ಆರೋಗ್ಯ ಸಮಸ್ಯೆ ಸೇರಿ ಎಲ್ಲಾ ಆಯಾಮದಲ್ಲೂ ತನಿಖೆ ಮಾಡಲಾಗುತ್ತಿದ್ದು, ನಾಳೆ ಮರಣೋತ್ತರ ಪರೀಕ್ಷೆ ನಡೆಯಲಿದೆ, ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ದರೋಡೆ ಕೇಸ್‌ನಲ್ಲಿ ಭಾಗಿ

ಸದ್ಯ ಪೊಲೀಸರು ಡೆತ್‌ನೋಟ್ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಜಗನ್ನಾಥರೆಡ್ಡಿ ಪುತ್ರ ನರೇಂದ್ರರೆಡ್ಡಿ ವಿರುದ್ಧ ರಾಬರಿ ಕೇಸ್ ದಾಖಲಾಗಿತ್ತು. 2013ರಲ್ಲಿ ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದ ನರೇಂದ್ರರೆಡ್ಡಿ, ಗೆಳೆಯರ ಜೊತೆ ತೆರಳಿ ದರೋಡೆ ಕೇಸ್‌ನಲ್ಲಿ ಭಾಗಿ ಆಗಿದ್ದ.

ಇದನ್ನೂ ಓದಿ: ಚಿತ್ರದುರ್ಗ: ಪಾಳುಬಿದ್ದ ಮನೆಯಲ್ಲಿ ನಿಗೂಢ ಐದು ಅಸ್ಥಿಪಂಜರ ಪತ್ತೆ

2013ರಲ್ಲಿ ಬಿಡದಿ ಬಳಿ ವಾಹನ ತಡೆದು ದರೋಡೆ ಮಾಡಿದ್ದರು. ದರೋಡೆ ಕೇಸ್‌ನಲ್ಲಿ ಕೆಲ ದಿನ ಜೈಲುಪಾಲಾಗಿದ್ದ. ಪುತ್ರನ ವಿರುದ್ಧದ ಕೇಸ್‌ನಿಂದ ನೊಂದು 2019ರಲ್ಲಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುವುದು ಸದ್ಯ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್