ಬಿಸಿಲ ಬೇಗೆಗೆ ಬಾಡುತ್ತಿರುವ ಹೂವುಗಳು; ಹೂ ಬೆಳೆ ಸಂರಕ್ಷಣೆಗೆ ಹಳೇ ಸೀರೆಗಳ ಮೊರೆ ಹೋದ ರೈತರು

ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ದಾಟಿದೆ. ಪರಿಣಾಮ ಹೂವಿನ ಬೆಳೆಗಾರರು ಕಷ್ಟಪಟ್ಟು ಬೆಳೆದ ಹೂವು ಸಹ ಬಾಡುವಂತಾಗಿದೆ. ಹೀಗಾಗಿ, ಹೂವಿನ ಬೆಳೆ ರಕ್ಷಣೆಗೆ ರೈತಾಪಿ ವರ್ಗ ಹಳೇ ಸೀರೆಗಳ ಮೊರೆ ಹೋಗಿದೆ.

ಬಿಸಿಲ ಬೇಗೆಗೆ ಬಾಡುತ್ತಿರುವ ಹೂವುಗಳು; ಹೂ ಬೆಳೆ ಸಂರಕ್ಷಣೆಗೆ ಹಳೇ ಸೀರೆಗಳ ಮೊರೆ ಹೋದ ರೈತರು
ಚಿತ್ರದುರ್ಗದಲ್ಲಿ ಹೂ ಬೆಳೆ ಸಂರಕ್ಷಣೆಗೆ ಹಳೇ ಸೀರೆಗಳ ಮೊರೆ ಹೋದ ರೈತರು
Edited By: ಕಿರಣ್ ಹನುಮಂತ್​ ಮಾದಾರ್

Updated on: Mar 12, 2024 | 9:05 PM

ಚಿತ್ರದುರ್ಗ, ಮಾ.12: ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಿದೆ. 32 ಡಿಗ್ರಿ ಸೆಲ್ಸಿಯಸ್ ಇರಬೇಕಿದ್ದ ತಾಪಮಾನ 37ಡಿಗ್ರಿ ಸೆಲ್ಸಿಯಸ್ ದಾಟಿದೆ. ಹೀಗಾಗಿ, ಹೂವಿನ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಚಿತ್ರದುರ್ಗ ತಾಲೂಕಿನ ಹುಣಸೇಕಟ್ಟೆ, ಮದಕರಿಪುರ, ದೊಡ್ಡ ಸಿದ್ದವ್ವನಹಳ್ಳಿ, ಗೋನೂರು ಭಾಗದಲ್ಲಿ ರೈತಾಪಿ ವರ್ಗ ಹೂವಿನ ಬೆಳೆ(flower crops) ಯನ್ನೇ ಅವಲಂಬಿಸಿ ಬದುಕು ಕಟ್ಟಿಕೊಂಡಿದ್ದಾರೆ. ಆದ್ರೆ, ಈವರ್ಷ ಕಷ್ಟಪಟ್ಟು ಕೊಳವೆಬಾವಿ ನೀರಿನ ಮೂಲಕ ಬೆಳೆ ಉಳಿಸಿಕೊಂಡರೂ ಸಹ ಸೂರ್ಯನ ಕೋಪಕ್ಕೆ ಹೂಬೆಳೆ ಬಾಡುವ ಸ್ಥಿತಿ ನಿರ್ಮಾಣ ಆಗಿದೆ. ಹೀಗಾಗಿ, ಹಳೇ ಸೀರೆಗಳನ್ನು ಸಂಗ್ರಹಿಸಿ ಹೂ ಬೆಳೆಗೆ ಹೊದಿಕೆ ಮಾಡಿಕೊಂಡು ಸಂರಕ್ಷಣೆಗೆ ರೈತರು ಹರಸಾಹಸ ಪಡುತ್ತಿದ್ದಾರೆ.

ಇನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ನೂರಾರು ಎಕರೆ ಪ್ರದೇಶದಲ್ಲಿ ಸೇವಂತಿಗೆ, ಮಲ್ಲಿಗೆ, ಕನಕಾಂಬರ ಸೇರಿದಂತೆ
ವಿವಿಧ ಹೂವುಗಳನ್ನು ರೈತರು ಬೆಳೆಯುತ್ತಾರೆ. ಹಬ್ಬ ಹರಿದಿನ, ಮದುವೆ ಸೀಸನ್​ನಲ್ಲಿ ಹೂವಿನ ಬೆಳೆಗೆ ಬೇಡಿಕೆ ಇರುತ್ತದೆ.
ಈ ವರ್ಷ ಮಳೆ ಇಲ್ಲದಿದ್ದರೂ ಸಹ ಕೆಲ ರೈತರು ಕಷ್ಟಪಟ್ಟು ಹೂವಿನ ಬೆಳೆ ತೆಗೆದಿದ್ದಾರೆ. ಆದ್ರೆ, ಹೆಚ್ಚಿದ ಬಿಸಿಲಿನ ತಾಪಮಾನದ
ಪರಿಣಾಮ ಹೂಬೆಳೆ ಹಾಳಾಗುತ್ತಿದೆ. ಹೀಗಾಗಿ, ಸರ್ಕಾರ ಈ ಬಗ್ಗೆ ಗಮನಹರಿಸಿ ಸೂಕ್ತ ಪರಿಹಾರ ನೀಡಬೇಕೆಂದು ರೈತರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಹೆದ್ದಾರಿ ಡಿವೈಡರ್ ಮೇಲೆ ಈ ವಿಶೇಷ ಹೂವಿನ ಗಿಡ ಮಾತ್ರ ನೆಡಲಾಗುತ್ತದೆ ಯಾಕೆ ಗೊತ್ತಾ? ಇದರ ಹಿಂದಿದೆ ವೈಜ್ಞಾನಿಕ ಕಾರಣ 

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಹೂವಿನ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬಾರದ ಸ್ಥಿತಿ ನಿರ್ಮಾಣ ಆಗಿದೆ. ಹೀಗಾಗಿ, ಅನೇಕ ರೈತರು ಹೂಬೆಳೆ ಉಳಿಸಿಕೊಳ್ಳಲು ಸೀರೆಯ ಹೊದಿಕೆಯ
ಮೊರೆ ಹೋಗಿದ್ದಾರೆ. ಹೀಗಾಗಿ, ಸರ್ಕಾರ ಹೂಬೆಳೆಗಾರರ ಸಂಕಷ್ಟ ಅರಿತು ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕೆಂಬುದು ರೈತರ ಆಗ್ರಹವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us