AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಭಾರೀ ಗೋಲ್​​ಮಾಲ್

ಚಿತ್ರದುರ್ಗ ತಾಲೂಕು ಹಿಂದುಳಿವ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 2022-23ರಲ್ಲಿ ಭಾರೀ ಗೋಲ್​​ಮಾಲ್ ನಡೆದಿದೆ. ಒಟ್ಟು ಎಂಟು ಕೋಟಿ 36 ಲಕ್ಷ 1 ಸಾವಿರ 412 ರೂಪಾಯಿ ಸಮಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದು ಖರ್ಚು ಮಾಡಲಾಗಿದೆ. ಆ ಮೂಲಕ ಕೆ.ಟಿ.ಪಿ.ಪಿ ನಿಯಮವನ್ನು ಅಧಿಕಾರಿಗಳು ಉಲ್ಲಂಘಿಸಿದ್ದಾರೆ.

ಚಿತ್ರದುರ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಭಾರೀ ಗೋಲ್​​ಮಾಲ್
ಚಿತ್ರದುರ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಭಾರೀ ಗೋಲ್​​ಮಾಲ್
ಬಸವರಾಜ ಮುದನೂರ್, ಚಿತ್ರದುರ್ಗ
| Updated By: Ganapathi Sharma|

Updated on: Oct 21, 2023 | 6:06 PM

Share

ಚಿತ್ರದುರ್ಗ, ಅಕ್ಟೋಬರ್ 21: ಭ್ರಷ್ಟಾಚಾರ ರಹಿತ ಆಡಳಿತ ಎಂಬುದು ಕೇವಲ ಘೋಷಣೆಗೆ ಮಾತ್ರ ಸೀಮಿತವಾದಂತಾಗಿದೆ. ವಿವಿಧ ಇಲಾಖೆಗಳಲ್ಲಿ ಎಗ್ಗಿಲ್ಲದೆ ಬ್ರಹ್ಮಾಂಡ ಬ್ರಷ್ಟಾಚಾರ (Corruption) ನಡೆಯುತ್ತಲೇ ಇದೆ. ಈ ಮಾತಿಗೆ ಸಾಕ್ಷಿಯೆಂಬಂತೆ ಚಿತ್ರದುರ್ಗದಲ್ಲಿ (Chitradurga) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಆಡಳಿತಾತ್ಮಕ ಅನುಮೋದನೆ ಪಡೆಯದೆ ಎಂಟೂವರೆ ಕೋಟಿ ರೂಪಾಯಿ ಹಣ ಖರ್ಚು ಮಾಡಿದ್ದು ಹಣ ದುರ್ಬಳಕೆ ನಡೆಸಿದ ಆರೋಪ ಕೇಳಿ ಬಂದಿದೆ.

ಚಿತ್ರದುರ್ಗ ತಾಲೂಕು ಹಿಂದುಳಿವ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 2022-23ರಲ್ಲಿ ಭಾರೀ ಗೋಲ್​​ಮಾಲ್ ನಡೆದಿದೆ. ಒಟ್ಟು ಎಂಟು ಕೋಟಿ 36 ಲಕ್ಷ 1 ಸಾವಿರ 412 ರೂಪಾಯಿ ಸಮಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದು ಖರ್ಚು ಮಾಡಲಾಗಿದೆ. ಆ ಮೂಲಕ ಕೆ.ಟಿ.ಪಿ.ಪಿ ನಿಯಮವನ್ನು ಅಧಿಕಾರಿಗಳು ಉಲ್ಲಂಘಿಸಿದ್ದಾರೆ. ವಿದ್ಯಾರ್ಥಿ ನಿಲಯಗಳ ಆಹಾರ ವೆಚ್ಚ, ಮಾನವ ಸೇವೆ ಸಂಸ್ಥೆಗಳಿಗೆ ಬಿಲ್ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಖರ್ಚು ಮಾಡಲಾಗಿದೆ. ಆದ್ರೆ, ಅಧಿಕಾರಿಗಳು ವೈಯಕ್ತಿಕ ಖಾತೆಗೆ ಹಣ ಹಾಕಿಕೊಂಡು ದುರ್ಬಳಕೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಜಿಲ್ಲಾ ಪಂಚಾಯತಿ ಸಿಇಓ, ಜಿಲ್ಲಾಧಿಕಾರಿ ಮತ್ತು ಸರ್ಕಾರಕ್ಕೆ ದೂರು ಸಲ್ಲಿಸಿದ್ದೇನೆ. ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದೆ ನಿರ್ಲಕ್ಷ ತೋರಿದ್ದು ಲೋಕಾಯುಕ್ತದ ಮೊರೆ ಹೋಗಿದ್ದೇನೆ ಎಂದು ರೈತ ಮುಖಂಡ ಕೊಂಚೆ ಶಿವರುದ್ರಪ್ಪ ಹೇಳಿದ್ದಾರೆ.

ಇನ್ನು ಈಗಾಗಲೇ ಕೋಟೆನಾಡು ಚಿತ್ರದುರ್ಗದಲ್ಲೇ ಕೇಂದ್ರ ಕಚೇರಿ ಹೊಂದಿರುವ ಬಯಲುಸೀಮೆ ಅಭಿವೃದ್ಧಿ ಮಂಡಳಿಯಲ್ಲೂ ಸಹ ಇದೇ ರೀತಿ ಪ್ರಕರಣ ನಡೆದಿತ್ತು. ಆಡಳಿತಾತ್ಮಕ ಅನುಮೋದನೆ ಪಡೆಯದೆ ನೂರಾರು ಕೋಟಿ ವೆಚ್ಚದ ವರ್ಕ್ ಆರ್ಡರ್ ನೀಡಿದ ಪ್ರಕರಣ ಭಾರೀ ಸುದ್ದಿ ಆಗಿತ್ತು. ಇದೀಗ ಚಿತ್ರದುರ್ಗದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿದೆ. ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂಬುದು ಇವ್ರ ಆಗ್ರಹ.

ಇದನ್ನೂ ಓದಿ: ಮೊಬೈಲ್ ಕಳೆದುಕೊಂಡ ಯುವಕ, ಹತ್ತು ದಿನ ಅದನ್ನು ಬಿಟ್ಟಿರಲಾರದೆ ನರಳಿ, ಕೋಟೆನಾಡಿನಲ್ಲಿ ಆತ್ಮಹತ್ಯೆಗೆ ಶರಣಾದ

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ತಾಲೂಕು ಹಿಂದುಳಿವ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಭಾರೀ ಗೋಲ್ ಮಾಲ್ ನಡೆದಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಟಿವಿ9 ಜಿಲ್ಲಾಧಿಕಾರಿ ದಿವ್ಯಪ್ರಭು ಮತ್ತು ಜಿಲ್ಲಾ ಪಂಚಾಯತಿ ಸಿಇಓ ಸೋಮಶೇಖರ್ ಅವ್ರನ್ನು ಫೋನ್ ಮೂಲಕ ಸಂಪರ್ಕಿಸಿ ಕೇಳಿದಾಗ ದೂರು ಸ್ವೀಕರಿಸಿ ಪರಿಶೀಲಿಸಿದ್ದು ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ವರದಿ ಪರಿಶೀಲಿಸಿ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!