AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ‌ಗಣತಿ ವರದಿಯನ್ನು ಸ್ವೀಕಾರ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗದ ಮಾದಾರ ಚನ್ನಯ್ಯ ಮಠದ ಬಳಿ ಮೈದಾನದಲ್ಲಿ ನಡೆದ ಶೋಷಿತರ ಜಾಗೃತಿ ​​ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಾತಿ‌ಗಣತಿ ವರದಿಯನ್ನು ಸ್ವೀಕಾರ ಮಾಡುತ್ತೇನೆ. ಲೋಪದೋಷ ಇದ್ದರೆ ತಜ್ಞರ ಸಲಹೆ ಪಡೆಯುತ್ತೇನೆ. ಕಾಂತರಾಜು ಸಮಿತಿ ಮಾಡಿದ್ದು ನಾನೇ. ನಾನು ಸಿಎಂ ಸ್ಥಾನದಿಂದ ಇಳಿಯುವಾಗ ವರದಿ ಪೂರ್ಣ ಆಗಿರಲಿಲ್ಲ ಎಂದು ಹೇಳಿದ್ದಾರೆ.

ಜಾತಿ‌ಗಣತಿ ವರದಿಯನ್ನು ಸ್ವೀಕಾರ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
ಸುನಿಲ್​ ಎಮ್​ ಹೆಚ್​
| Edited By: |

Updated on: Jan 28, 2024 | 4:31 PM

Share

ಚಿತ್ರದುರ್ಗ, ಜನವರಿ 28: ಜಾತಿ‌ಗಣತಿ ವರದಿಯನ್ನು ಸ್ವೀಕಾರ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ನಗರದ ಮಾದಾರ ಚನ್ನಯ್ಯ ಮಠದ ಬಳಿ ಮೈದಾನದಲ್ಲಿ ನಡೆದ ಶೋಷಿತರ ಜಾಗೃತಿ ​​ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂತರಾಜು ಸಮಿತಿ ಮಾಡಿದ್ದು ನಾನೇ. ನಾನು ಸಿಎಂ ಸ್ಥಾನದಿಂದ ಇಳಿಯುವಾಗ ವರದಿ ಪೂರ್ಣ ಆಗಿರಲಿಲ್ಲ. ಮಾಜಿ ಸಿಎಂಗಳಾದ ಹೆಚ್​ಡಿ. ಕುಮಾರಸ್ವಾಮಿ‌ ಮತ್ತು ಬಸವರಾಜ ಬೊಮ್ಮಾಯಿ ವರದಿ ಪಡೆಯಲಿಲ್ಲ. ಈಗ ಜಯಪ್ರಕಾಶ್ ಹೆಗ್ಡೆ ವರದಿ ಕೊಡುತ್ತಾರೆ. ನೀವು ವರದಿ ಕೊಡಿ ಅಂತ ನಾನು ಹೇಳಿದ್ದೇನೆ. ಲೋಪದೋಷ ಇದ್ದರೆ ತಜ್ಞರ ಸಲಹೆ ಪಡೆಯುತ್ತೇನೆ ಎಂದು ಹೇಳಿದ್ದಾರೆ.

ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ರಾಹುಲ್ ಗಾಂಧಿ ಕೂಡ ಹೇಳಿದ್ದಾರೆ ಪಕ್ಷ ಅಧಿಕಾರಕ್ಕೆ ಬಂದ್ದರೆ ಎಲ್ಲ ರಾಜ್ಯಗಳಲ್ಲಿ ಮಾಡುತ್ತೇವೆ ಅಂದಿದ್ದಾರೆ. ನೀವು ಕೊಟ್ಟ ಎಲ್ಲ ಬೇಡಿಕೆಗಳಿಗೆ ಸಹಮತ ಇದೆ. ಕ್ಯಾಬಿನೆಟ್​ನಲ್ಲಿ ಇಟ್ಟು ತೀರ್ಮಾನ ಮಾಡುತ್ತೇವೆ. ನಾನು ಯಾವಾಗಲೂ ನಿಮ್ಮ ಪರ ಇರುತ್ತೇನೆ. ದ್ರೌಪದಿ ಮುರ್ಮ ಅವರನ್ನ ಪಾರ್ಲಿಮೆಂಟ್ ಉದ್ಘಾಟನೆಗೆ ಕರೆಯಲಿಲ್ಲ. ರಾಮಂದಿರ ಉದ್ಘಾಟನೆಗೂ ಕರೆಯಲಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಕೆಲವು ಶಕ್ತಿಗಳು ನನ್ನನ್ನು ವಿರೋಧ ಮಾಡುತ್ತಿವೆ

ಇದೊಂದು ಐತಿಹಾಸಿಕ ಸಮಾವೇಶ. ಶೋಷಣೆ ನಡೆಯುತ್ತಲೇ ಇದೆ, ಇದಕ್ಕೆ ಜಾತಿ ವ್ಯವಸ್ಥೆಯೇ ಕಾರಣ. ಈ ಜಾತಿ ವ್ಯವಸ್ಥೆಯಿಂದ ನಿರಂತರವಾಗಿ ಶೋಷಣೆ ನಡೆದಿದೆ. ಸಂವಿಧಾನದಿಂದಾಗಿ ಶೋಷಣೆ ಕಡಿಮೆಯಾಗಿದೆ. ಮೀಸಲಾತಿಯನ್ನ ಆರ್​​ಎಸ್​ಎಸ್, ಬಿಜೆಪಿ ವಿರೋಧ ಮಾಡುತ್ತಿದೆ. ಕೆಲವು ಶಕ್ತಿಗಳು ನನ್ನನ್ನು ವಿರೋಧ ಮಾಡುತ್ತಿವೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​​ನಲ್ಲಿ ತಲ್ಲಣ ಸೃಷ್ಟಿಸಿದ ಶಮನೂರು ಶಿವಶಂಕರಪ್ಪ ಹೇಳಿಕೆ, ಕ್ರಮಕ್ಕೆ ಒತ್ತಾಯ

ಕುರಿ ಕಾಯುವವನ ಮಗ ಸಿಎಂ ಆದ ಅಂತಾ ವಿರೋಧ ಮಾಡುತ್ತಾರೆ. 14 ಬಜೆಟ್ ಮಂಡಿಸಿದವನು ನಾನು. ಅನ್ನಭಾಗ್ಯ, ಶೂಭಾಗ್ಯ, ಪಶು ಭಾಗ್ಯ ಕೊಟ್ಟಿದ್ದು ತಪ್ಪೇ? ಇವತ್ತು ಐದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದು ತಪ್ಪೇ? ಇದಕ್ಕೆ ನನ್ನನ್ನ ವಿರೋಧ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದು ಸರ್ಕಾರ, ಪಕ್ಷದ ಕಾರ್ಯಕ್ರಮವಲ್ಲ. ಸಮಾಜದಲ್ಲಿ ಶೋಷಿತರು ಸಿಂಹಪಾಲಿದ್ದಾರೆ. ಶತಶತಮಾನಗಳಿಂದ ಶೋಷಣೆಗೊಳಗಾಗಿದ್ದಾರೆ. ಶತಮಾನಗಳಿಂದ ದೌರ್ಜನ್ಯಕ್ಕೊಳಗಾಗಿದ್ದಾರೆ. ಸಮಾಜದಲ್ಲಿ ಶೋಷಣೆ ನಡೆಯುತ್ತಲೇ ಇದೆ. ಇದಕ್ಕೆ ಕಾರಣ ಜಾತಿ ವ್ಯವಸ್ಥೆ. ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಹಾಗಾಗಿ ಸಮಾಜದಲ್ಲಿ ಅಸಮಾನತೆ ಕಾಣುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​ ಯಾರಿಗೆ? ಸುಳಿವು ನೀಡಿದ ಆರ್​ ಅಶೋಕ್​​

ಈ ಜಾತಿ ವ್ಯವಸ್ಥೆಯಿಂದ ನಿರಂತರ ಶೋಷಣೆ ನಡೆದಿದೆ. ಈಗಲೂ‌ ನಡೆದಿರುವುದನ್ನ ಮರೆಯಲು ಸಾಧ್ಯವಿಲ್ಲ. ಅಂಬೇಡ್ಕರ್ ಸಂವಿಧಾನವನ್ನ ಕೊಟ್ಟರು. ಸರ್ವರಿಗೂ‌ ಸಮಪಾಲು ಅಂತ ಕೊಟ್ಟರು. ಜಾತಿ ವ್ಯವಸ್ಥೆಯಿಂದಾಗಿ‌ ಶೋಷಣೆ ಹೆಚ್ಚಾಗಿದೆ. ಇದನ್ನ ತಡೆಯುವುದಕ್ಕೆ ಅಂಬೇಡ್ಕರ್ ಮುಂದಾದರು. ಸಂವಿಧಾನದಿಂದಾಗಿ ಶೋಷಣೆ ಕಡಿಮೆಯಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ