AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ನೂತನ ವೃತ್ತಗಳು, ಹೊಸ ವಿಗ್ರಹಗಳ ಸ್ಥಾಪನೆ; ಕ್ಯಾರೆ ಎನ್ನದ ಜಿಲ್ಲಾಡಳಿತ

ಕೋಟೆನಾಡು ಚಿತ್ರದುರ್ಗ ನಗರದಲ್ಲಿ ನೂತನ ವೃತ್ತಗಳು, ಹೊಸ ವಿಗ್ರಹಗಳ ಸ್ಥಾಪನೆ ನಡೆಯುತ್ತಲೇ ಇದೆ. ಯಾವುದೇ ನಿಯಮ ಪಾಲಿಸದೆ ಹೊಸ ಸರ್ಕಲ್​ಗಳು ಹುಟ್ಟಿಕೊಳ್ಳುತ್ತಿವೆ. ಆದ್ರೂ, ನಗರಸಭೆ ಮತ್ತು ಜಿಲ್ಲಾಡಳಿತ ಮಾತ್ರ ಸೈಲೆಂಟಾಗಿದೆ. 

ಚಿತ್ರದುರ್ಗದಲ್ಲಿ ನೂತನ ವೃತ್ತಗಳು, ಹೊಸ ವಿಗ್ರಹಗಳ ಸ್ಥಾಪನೆ; ಕ್ಯಾರೆ ಎನ್ನದ ಜಿಲ್ಲಾಡಳಿತ
ಚಿತ್ರದುರ್ಗ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Dec 10, 2023 | 8:18 PM

Share

ಚಿತ್ರದುರ್ಗ, ಡಿ.10: ಕೋಟೆನಾಡು ಚಿತ್ರದುರ್ಗ(Chitradurga)ದಲ್ಲಿ ಪರವಾನಿಗೆ ಇಲ್ಲದೆ ರಾತೋರಾತ್ರಿ ಶ್ರೀಕೃಷ್ಣ ವೃತ್ತ ರಚನೆ, ಕೃಷ್ಣ ವಿಗ್ರಹ(Statue)ಸ್ಥಾಪನೆಯಾಗುತ್ತಿದೆ. ಆದರೆ, ನಗರಸಭೆ ಮತ್ತು ಜಿಲ್ಲಾಡಳಿತ ಜಾಣ ಮೌನ ವಹಿಸಿದೆ. ಕೆಲ ತಿಂಗಳ ಹಿಂದಷ್ಟೇ ಮಾಳಪ್ಪನಹಟ್ಟಿ ಬಳಿ ರಾತೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪಿಸಿ ಹೊಸ ವೃತ್ತ ರಚನೆ ಮಾಡಲಾಗಿತ್ತು. ಇದೀಗ ಹೊಳಲ್ಕೆರೆ ರಸ್ತೆಯಲ್ಲಿ ಶ್ರೀಕೃಷ್ಣ ವಿಗ್ರಹ ಸ್ಥಾಪಿಸಿ, ಶ್ರೀಕೃಷ್ಣ ವೃತ್ತ ಸ್ಥಾಪನೆ ಆಗಿದೆ. ಆದ್ರೆ, ನೂತನ ವಿಗ್ರಹ ಸ್ಥಾಪನೆಗೆ ಅನುಮತಿ ಪಡೆಯಬೇಕೆಂಬ ನಿಯಮವಿದ್ದರೂ ಸಹ ಅಧಿಕಾರಿಗಳು ಸೈಲೆಂಟಾಗಿದ್ದಾರೆ.

ಇನ್ನು ವಿಗ್ರಹ ಸ್ಥಾಪಿಸಿದ ಬಳಿಕ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಶ್ನಿಸುತ್ತಾರಾದರು, ಬಳಿಕ ಯಾವುದೇ ಕ್ರಮ ಮಾತ್ರ ಕೈಗೊಂಡಿಲ್ಲ. ಈ ಕುರಿತು ಯಾದವ ಸಮುದಾಯದ ಮುಖಂಡರಾದ ಉಗ್ರೇಶ್ ಮಾತನಾಡಿ ‘ ಚಿತ್ರದುರ್ಗದಲ್ಲಿ ಎಲ್ಲಾ ಸಮುದಾಯದವರು ಸಾಂಸ್ಕೃತಿಕ ನಾಯಕರ ವಿಗ್ರಹ ಸ್ಥಾಪಿಸಿ ವೃತ್ತ ರಚಿಸಿದ್ದಾರೆ. ಅಂತೆಯೇ ಯಾದವ ಸಮುದಾಯ ಹೆಚ್ಚಾಗಿರುವ ದುರ್ಗದಲ್ಲೇ ಶ್ರೀಕೃಷ್ಣ ವೃತ್ತ, ಪುಥ್ಥಳಿ ಇಲ್ಲದ ಕಾರಣ ಶ್ರೀಕೃಷ್ಣ ವಿಗ್ರಹ ಸ್ಥಾಪಿಸಿ ವೃತ್ತ ಸ್ಥಾಪಿಸಿದ್ದೇವೆ ಎನ್ನುತ್ತಿದ್ದಾರೆ.

ಇದನ್ನೂ ಓದಿ:ಹಾಸನದಲ್ಲಿ ಸಂಗೊಳ್ಳಿ ರಾಯಣ್ಣ ಕಂಚಿನ ಪ್ರತಿಮೆ ಅನಾವರಣ; ಸಿದ್ದರಾಮಯ್ಯ ನೋಡಲು ಓಡಿ ಬಂದ ಅಭಿಮಾನಿಗಳು

ರಾತೋರಾತ್ರಿ ಶ್ರೀಕೃಷ್ಣ ವಿಗ್ರಹ ಸ್ಥಾಪನೆ ಆಗಿದ್ದು, ಶ್ರೀಕೃಷ್ಣ ಯಾದವ ಮಠದ ಕೃಷ್ಣ ಯಾದವಾನಂದ ಶ್ರೀ ಪೂಜೆ ಸಲ್ಲಿಸಿ ಚಾಲನೆ ನೀಡಿದ್ದಾರೆ. ಇಷ್ಟೇಲ್ಲಾ ಆದರೂ ನಗರಸಭೆ ಮತ್ತು ಜಿಲ್ಲಾಡಳಿತ ಮಾತ್ರ ಯಾವುದೇ ಕ್ರಮ ಕೈಗೊಳ್ಳದೆ ಸೈಲೆಂಟಾಗಿದೆ. ಘಟನೆ ಕುರಿತು ಯಾದವ ಮುಖಂಡರನ್ನು ಕೇಳಿದ್ರೆ, ‘ಈ ಹಿಂದೆ ಬಿ.ಕಾಂತರಾಜ್ ನಗರಸಭೆ ಅದ್ಯಕ್ಷರಾಗಿದ್ದ ವೇಳೆಯೇ ನಾವು ಪರವಾನಿಗೆ ಕೇಳಿದ್ದೆವು. ಏಳೆಂಟು ವರ್ಷದ ಹಿಂದೆಯೇ ನಮಗೆ ಪರವಾನಿಗೆ ನೀಡಲಾಗಿತ್ತು. ಹೀಗಾಗಿ, ಶ್ರೀಕೃಷ್ಣ ವೃತ್ತ ರಚಿಸಿ ಶ್ರೀಕೃಷ್ಣ ಪ್ರತಿಮೆ ಸ್ಥಾಪಿಸಿದ್ದೇವೆ. ಜಿಲ್ಲಾಡಳಿತ ಮತ್ತು ಸರ್ಕಾರ ಸಹಕರಿಸಿಬೇಕು ಎನ್ನುತ್ತಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ನಗರದಲ್ಲಿ ರಾತೋರಾತ್ರಿ ಹೊಸ ವೃತ್ತಗಳು, ಹೊಸ ವಿಗ್ರಹಗಳು ಸ್ಥಾಪನೆ ಆಗುತ್ತಿವೆ. ಆದ್ರೆ, ನಗರಸಭೆ ಮತ್ತು ಜಿಲ್ಲಾಡಳಿತ ಮಾತ್ರ ಸೈಲೆಂಟಾಗಿದೆ. ಹೀಗಾಗಿ, ಮುಂದೊಂದು ದಿನ ಹೊಸ ವೃತ್ತ, ಹೊಸ ಪುಥ್ಥಳಿ ನಿರ್ಮಾಣದ ವಿಚಾರದಲ್ಲೇ ವಿವಾದ ಹುಟ್ಟಿದರೂ ಆಶ್ಚರ್ಯವಿಲ್ಲ. ಹೀಗಾಗಿ, ಜಿಲ್ಲಾಡಳಿತ ನಿಯಮಾನುಸಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದೇ ಎಂಬುದನ್ನು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ