AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ನೂತನ ವೃತ್ತಗಳು, ಹೊಸ ವಿಗ್ರಹಗಳ ಸ್ಥಾಪನೆ; ಕ್ಯಾರೆ ಎನ್ನದ ಜಿಲ್ಲಾಡಳಿತ

ಕೋಟೆನಾಡು ಚಿತ್ರದುರ್ಗ ನಗರದಲ್ಲಿ ನೂತನ ವೃತ್ತಗಳು, ಹೊಸ ವಿಗ್ರಹಗಳ ಸ್ಥಾಪನೆ ನಡೆಯುತ್ತಲೇ ಇದೆ. ಯಾವುದೇ ನಿಯಮ ಪಾಲಿಸದೆ ಹೊಸ ಸರ್ಕಲ್​ಗಳು ಹುಟ್ಟಿಕೊಳ್ಳುತ್ತಿವೆ. ಆದ್ರೂ, ನಗರಸಭೆ ಮತ್ತು ಜಿಲ್ಲಾಡಳಿತ ಮಾತ್ರ ಸೈಲೆಂಟಾಗಿದೆ. 

ಚಿತ್ರದುರ್ಗದಲ್ಲಿ ನೂತನ ವೃತ್ತಗಳು, ಹೊಸ ವಿಗ್ರಹಗಳ ಸ್ಥಾಪನೆ; ಕ್ಯಾರೆ ಎನ್ನದ ಜಿಲ್ಲಾಡಳಿತ
ಚಿತ್ರದುರ್ಗ
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 10, 2023 | 8:18 PM

ಚಿತ್ರದುರ್ಗ, ಡಿ.10: ಕೋಟೆನಾಡು ಚಿತ್ರದುರ್ಗ(Chitradurga)ದಲ್ಲಿ ಪರವಾನಿಗೆ ಇಲ್ಲದೆ ರಾತೋರಾತ್ರಿ ಶ್ರೀಕೃಷ್ಣ ವೃತ್ತ ರಚನೆ, ಕೃಷ್ಣ ವಿಗ್ರಹ(Statue)ಸ್ಥಾಪನೆಯಾಗುತ್ತಿದೆ. ಆದರೆ, ನಗರಸಭೆ ಮತ್ತು ಜಿಲ್ಲಾಡಳಿತ ಜಾಣ ಮೌನ ವಹಿಸಿದೆ. ಕೆಲ ತಿಂಗಳ ಹಿಂದಷ್ಟೇ ಮಾಳಪ್ಪನಹಟ್ಟಿ ಬಳಿ ರಾತೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪಿಸಿ ಹೊಸ ವೃತ್ತ ರಚನೆ ಮಾಡಲಾಗಿತ್ತು. ಇದೀಗ ಹೊಳಲ್ಕೆರೆ ರಸ್ತೆಯಲ್ಲಿ ಶ್ರೀಕೃಷ್ಣ ವಿಗ್ರಹ ಸ್ಥಾಪಿಸಿ, ಶ್ರೀಕೃಷ್ಣ ವೃತ್ತ ಸ್ಥಾಪನೆ ಆಗಿದೆ. ಆದ್ರೆ, ನೂತನ ವಿಗ್ರಹ ಸ್ಥಾಪನೆಗೆ ಅನುಮತಿ ಪಡೆಯಬೇಕೆಂಬ ನಿಯಮವಿದ್ದರೂ ಸಹ ಅಧಿಕಾರಿಗಳು ಸೈಲೆಂಟಾಗಿದ್ದಾರೆ.

ಇನ್ನು ವಿಗ್ರಹ ಸ್ಥಾಪಿಸಿದ ಬಳಿಕ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಶ್ನಿಸುತ್ತಾರಾದರು, ಬಳಿಕ ಯಾವುದೇ ಕ್ರಮ ಮಾತ್ರ ಕೈಗೊಂಡಿಲ್ಲ. ಈ ಕುರಿತು ಯಾದವ ಸಮುದಾಯದ ಮುಖಂಡರಾದ ಉಗ್ರೇಶ್ ಮಾತನಾಡಿ ‘ ಚಿತ್ರದುರ್ಗದಲ್ಲಿ ಎಲ್ಲಾ ಸಮುದಾಯದವರು ಸಾಂಸ್ಕೃತಿಕ ನಾಯಕರ ವಿಗ್ರಹ ಸ್ಥಾಪಿಸಿ ವೃತ್ತ ರಚಿಸಿದ್ದಾರೆ. ಅಂತೆಯೇ ಯಾದವ ಸಮುದಾಯ ಹೆಚ್ಚಾಗಿರುವ ದುರ್ಗದಲ್ಲೇ ಶ್ರೀಕೃಷ್ಣ ವೃತ್ತ, ಪುಥ್ಥಳಿ ಇಲ್ಲದ ಕಾರಣ ಶ್ರೀಕೃಷ್ಣ ವಿಗ್ರಹ ಸ್ಥಾಪಿಸಿ ವೃತ್ತ ಸ್ಥಾಪಿಸಿದ್ದೇವೆ ಎನ್ನುತ್ತಿದ್ದಾರೆ.

ಇದನ್ನೂ ಓದಿ:ಹಾಸನದಲ್ಲಿ ಸಂಗೊಳ್ಳಿ ರಾಯಣ್ಣ ಕಂಚಿನ ಪ್ರತಿಮೆ ಅನಾವರಣ; ಸಿದ್ದರಾಮಯ್ಯ ನೋಡಲು ಓಡಿ ಬಂದ ಅಭಿಮಾನಿಗಳು

ರಾತೋರಾತ್ರಿ ಶ್ರೀಕೃಷ್ಣ ವಿಗ್ರಹ ಸ್ಥಾಪನೆ ಆಗಿದ್ದು, ಶ್ರೀಕೃಷ್ಣ ಯಾದವ ಮಠದ ಕೃಷ್ಣ ಯಾದವಾನಂದ ಶ್ರೀ ಪೂಜೆ ಸಲ್ಲಿಸಿ ಚಾಲನೆ ನೀಡಿದ್ದಾರೆ. ಇಷ್ಟೇಲ್ಲಾ ಆದರೂ ನಗರಸಭೆ ಮತ್ತು ಜಿಲ್ಲಾಡಳಿತ ಮಾತ್ರ ಯಾವುದೇ ಕ್ರಮ ಕೈಗೊಳ್ಳದೆ ಸೈಲೆಂಟಾಗಿದೆ. ಘಟನೆ ಕುರಿತು ಯಾದವ ಮುಖಂಡರನ್ನು ಕೇಳಿದ್ರೆ, ‘ಈ ಹಿಂದೆ ಬಿ.ಕಾಂತರಾಜ್ ನಗರಸಭೆ ಅದ್ಯಕ್ಷರಾಗಿದ್ದ ವೇಳೆಯೇ ನಾವು ಪರವಾನಿಗೆ ಕೇಳಿದ್ದೆವು. ಏಳೆಂಟು ವರ್ಷದ ಹಿಂದೆಯೇ ನಮಗೆ ಪರವಾನಿಗೆ ನೀಡಲಾಗಿತ್ತು. ಹೀಗಾಗಿ, ಶ್ರೀಕೃಷ್ಣ ವೃತ್ತ ರಚಿಸಿ ಶ್ರೀಕೃಷ್ಣ ಪ್ರತಿಮೆ ಸ್ಥಾಪಿಸಿದ್ದೇವೆ. ಜಿಲ್ಲಾಡಳಿತ ಮತ್ತು ಸರ್ಕಾರ ಸಹಕರಿಸಿಬೇಕು ಎನ್ನುತ್ತಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ನಗರದಲ್ಲಿ ರಾತೋರಾತ್ರಿ ಹೊಸ ವೃತ್ತಗಳು, ಹೊಸ ವಿಗ್ರಹಗಳು ಸ್ಥಾಪನೆ ಆಗುತ್ತಿವೆ. ಆದ್ರೆ, ನಗರಸಭೆ ಮತ್ತು ಜಿಲ್ಲಾಡಳಿತ ಮಾತ್ರ ಸೈಲೆಂಟಾಗಿದೆ. ಹೀಗಾಗಿ, ಮುಂದೊಂದು ದಿನ ಹೊಸ ವೃತ್ತ, ಹೊಸ ಪುಥ್ಥಳಿ ನಿರ್ಮಾಣದ ವಿಚಾರದಲ್ಲೇ ವಿವಾದ ಹುಟ್ಟಿದರೂ ಆಶ್ಚರ್ಯವಿಲ್ಲ. ಹೀಗಾಗಿ, ಜಿಲ್ಲಾಡಳಿತ ನಿಯಮಾನುಸಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದೇ ಎಂಬುದನ್ನು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ
ಚೀನಾಗೆ ಹೋಗಿ ಭಯೋತ್ಪಾದನೆ ವಿರುದ್ಧ ಗುಡುಗಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಚೀನಾಗೆ ಹೋಗಿ ಭಯೋತ್ಪಾದನೆ ವಿರುದ್ಧ ಗುಡುಗಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಆಗ್ರಾ-ಲಕ್ನೋ ಎಕ್ಸ್​​ಪ್ರೆಸ್​ವೇನಿಂದ ಕೆಳಗೆ ಉರುಳಿದ ಡಬಲ್ ಡೆಕ್ಕರ್ ಬಸ್
ಆಗ್ರಾ-ಲಕ್ನೋ ಎಕ್ಸ್​​ಪ್ರೆಸ್​ವೇನಿಂದ ಕೆಳಗೆ ಉರುಳಿದ ಡಬಲ್ ಡೆಕ್ಕರ್ ಬಸ್