AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟೆನಾಡು ಚಿತ್ರದುರ್ಗದಲ್ಲಿ ಮತ್ತೊಮ್ಮೆ ಬರದ ಛಾಯೆ; ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರ ಬಂದ್ರೆ, ಬರ ಖಚಿತ ಎಂಬ ನಂಬಿಕೆ

ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಬಿರು ಬಿಸಿಲು ಜೋರಾಗಿದೆ. ಮುಂಗಾರು ಮಳೆ ಬಹುತೇಕ ವಿಫಲಗೊಂಡಿದೆ. ಹೀಗಾಗಿ, ಮತ್ತೊಮ್ಮೆ ಬರದ ಛಾಯೆ ಮನೆ ಮೂಡಿದ್ದು, ಬಿತ್ತನೆ ಕುಂಠಿತಗೊಂಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಎದುರಾಗುತ್ತದೆಂಬ ನಂಬಿಕೆ ಜನರಲ್ಲಿದ್ದು, ಬರದ ಭೀತಿ ಮೂಡಿದೆ.

ಕೋಟೆನಾಡು ಚಿತ್ರದುರ್ಗದಲ್ಲಿ ಮತ್ತೊಮ್ಮೆ ಬರದ ಛಾಯೆ; ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರ ಬಂದ್ರೆ, ಬರ ಖಚಿತ ಎಂಬ ನಂಬಿಕೆ
ಚಿತ್ರದುರ್ಗ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: May 18, 2023 | 9:45 AM

Share

ಚಿತ್ರದುರ್ಗ: ಕೋಟೆನಾಡಿನಲ್ಲಿ ಬಹುತೇಕ ಕೈಕೊಟ್ಟಿರುವ ಮುಂಗಾರು ಮಳೆ. ಮಳೆ ಇಲ್ಲದ ಕಾರಣ ಜಿಲ್ಲೆಯಲ್ಲಿ ಬಿತ್ತನೆ ಕುಂಠಿತ, ಬರಗಾಲದ ಭೀತಿಯಲ್ಲಿ ಮುಗಿಲತ್ತ ಮುಖ ಮಾಡಿ ಕುಳಿತ ರೈತಾಪಿ ವರ್ಗ. ಹೌದು, ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಮುಂಗಾರು ಮಳೆ ಬಹುತೇಕ ವಿಫಲವಾಗಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಮುಂಗಾರು ವೇಳೆ ಅತಿವೃಷ್ಠಿ ಆಗಿತ್ತು. ಆದ್ರೆ, ಈ ವರ್ಷ ಮುಂಗಾರು ಮಳೆ ಬಹುತೇಕ ವಿಫಲವಾಗಿದೆ. ಹೀಗಾಗಿ, ಇಷ್ಟೊತ್ತಿಗೆ ಹೊಸದುರ್ಗ ಭಾಗದಲ್ಲಿ ಎಳ್ಳು, ಹೆಸರು ಹಾಗೂ ಚಿತ್ರದುರ್ಗ ಭಾಗದಲ್ಲಿ ಹತ್ತಿ, ಸೂರ್ಯಕಾಂತಿ, ಈರುಳ್ಳಿ ಬಿತ್ತನೆ ಆಗಬೇಕಿತ್ತು. ಆದ್ರೆ, ಮುಂಗಾರು ಮಳೆ ಕೈಕೊಟ್ಟಿದ್ದು ಭೂಮಿ ಹದಗೊಳ್ಳದ ಕಾರಣ ಬಿತ್ತನೆ ಕುಂಠಿತವಾಗಿದೆ.

ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದ ಸಂದರ್ಭದಲ್ಲಿ ಬರಗಾಲ ಎಂಬ ನಂಬಿಕೆ ಜನರದ್ದು

ಮಳೆಗಾಗಿ ರೈತರು ವರುಣದೇವನತ್ತ ಮುಖ ಮಾಡಿ ಕೂಡುವಂತಾಗಿದೆ. ಆದ್ರೆ, ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದ ಸಂದರ್ಭದಲ್ಲಿ ಬರಗಾಲ ಎದುರಾಗುತ್ತದೆಂಬ ನಂಬಿಕೆ ಜನರಲ್ಲಿದೆ. ಈ ಸಲ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಮುಂಗಾರು ಮಳೆ ಕೈಕೊಟ್ಟಿರುವ ಕಾರಣ ಬರಗಾಲ ಎದುರಾಗುತ್ತದೆಯೇ ಎಂಬ ಭೀತಿ ರೈತರಲ್ಲಿ ಮೂಡಿದೆ ಎಂಬುದು ರೈತ ಮುಖಂಡರ ಅಭಿಪ್ರಾಯವಾಗಿದೆ. ಇನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ಹೊಸದುರ್ಗ, ಚಿತ್ರದುರ್ಗ ಸೇರಿದಂತೆ ಬಹುತೇಕ ಕಡೆ ಇಷ್ಟೊತ್ತಿಗೆ ರೈತಾಪಿ ವರ್ಗ ಕೃಷಿ ಚಟುವಟಿಕೆಯಲ್ಲಿ ತೊಡಗಬೇಕಿತ್ತು. ಆದ್ರೆ, ಮುಂಗಾರು ಮಳೆ ಕೈಕೊಟ್ಟಿರುವ ಕಾರಣ ರೈತರು ಕೈಕಟ್ಟಿ ಕೂರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ:ಬೀದರ್​: ಆಲಿಕಲ್ಲು ಮಳೆಗೆ ದಾಳಿಂಬೆ ಬೆಳೆ ಹಾನಿ, ಕಂಗಾಲಾದ ರೈತ ಸಹಾಯದ ನಿರೀಕ್ಷೆಯಲ್ಲಿ

ಮೋಡ ಕಟ್ಟುತ್ತಿದೆ ಆದ್ರೆ, ಮಳೆಹನಿ ಮಾತ್ರ ಧರೆಗೆ ಸುರಿಯುತ್ತಿಲ್ಲ

ಇನ್ನು ದಿನವು ಮೋಡ ಕಟ್ಟುತ್ತಿದೆ ಆದ್ರೆ, ಮಳೆಹನಿ ಮಾತ್ರ ಧರೆಗೆ ಸುರಿಯುತ್ತಿಲ್ಲ ಎಂದು ರೈತರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಾರೆಯಾಗಿ ಕೋಟೆನಾಡು ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟಿದೆ. ಮತ್ತೊಮ್ಮೆ ಬರಗಾಲದ ಛಾಯೆ ಮೂಡಿದ್ದು, ಬರಗಾಲದ ಭೀತಿಯಲ್ಲಿರುವ ರೈತಾಪಿ ವರ್ಗ ಸಂಕಷ್ಟಕ್ಕೆ ಸಿಲುಕಿದೆ. ವರುಣದೇವ ಬಯಲುಸೀಮೆಯ ರೈತರ ಮೇಲೆ ಕರುಣೆ ತೋರಿ ರೈತರ ಬದುಕು ಹಸನಾಗಿಸಬೇಕೆಂಬುದು ಕೃಷಿಕರ ಪ್ರಾರ್ಥನೆಯಾಗಿದೆ.

ವರದಿ: ಬಸವರಾಜ ಮುದನೂರ್ ಟಿವಿ9 ಚಿತ್ರದುರ್ಗ

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು