AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಡಳಿತಾಧಿಕಾರಿ ನೇಮಕವಾಗಿದೆ; ಇನ್ನೇನು ಹಸ್ತಕ್ಷೇಪ ಮಾಡಬೇಡಿ -ಮುರುಘಾ ಶರಣಗೆ ಜಡ್ಜ್​​ ಕೋಮಲಾ ಖಡಕ್ ಆದೇಶ

Murugha Sharana Swamiji: ಮುರುಘಾಮಠದ ಪೀಠಾಧ್ಯಕ್ಷ, SJM ವಿದ್ಯಾಪೀಠದ ಅಧ್ಯಕ್ಷರಾಗಿರುವ ಮುರುಘಾಶ್ರೀ ಧಾರ್ಮಿಕ ಕೇಂದ್ರ ದುರ್ಬಳಕೆ 1988 ಕಾಯ್ದೆ ಅನ್ವಯಗೊಳಿಸದ ಹಿನ್ನೆಲೆ ಸರ್ಕಾರಿ ವಕೀಲೆ ನಾಗವೇಣಿ ವಾದ ಮಂಡಿಸಿದ್ದರು.

ಆಡಳಿತಾಧಿಕಾರಿ ನೇಮಕವಾಗಿದೆ; ಇನ್ನೇನು ಹಸ್ತಕ್ಷೇಪ ಮಾಡಬೇಡಿ -ಮುರುಘಾ ಶರಣಗೆ ಜಡ್ಜ್​​ ಕೋಮಲಾ ಖಡಕ್ ಆದೇಶ
murugha shree, NIA
TV9 Web
| Edited By: |

Updated on:Dec 15, 2022 | 4:48 PM

Share

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ (POCSO) ಚಿತ್ರದುರ್ಗದ (Chitradurga) ಮುರುಘಾ ಸ್ವಾಮೀಜಿ (Murugha Sharana Swamiji) ಜೈಲುಪಾಲಾಗಿದ್ದು, ಮುರುಘಾ ಮಠದಲ್ಲಿ ಆಡಳಿತಾತ್ಮಕ ಸಮಸ್ಯೆ ತಲೆದೋರಬಾರದು ಎಂದು ಸರ್ಕಾರವು ಆಡಳಿತಾಧಿಕಾರಿಯನ್ನು ನೇಮಿಸಿದೆ. ಇದರ ಬೆನ್ನಿಗೆ ಮಠ ಮತ್ತು SJM ವಿದ್ಯಾಪೀಠದ ಆಡಳಿತದಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡದಂತೆ ಪ್ರಕರಣದ ಮೊದಲ ಆರೋಪಿ ಡಾ. ಶಿವಮೂರ್ತಿ ಮುರುಘಾ ಶರಣಗೆ ನ್ಯಾಯಾಲಯ ಆದೇಶಿಸಿದೆ. ಪ್ರಕರಣದ ವಿಚಾರಣೆ ಮುಗಿಯುವವರೆಗೂ ಹಸ್ತಕ್ಷೇಪ ಮಾಡದಂತೆ ಆದೇಶದಲ್ಲಿ ತಿಳಿಸಲಾಗಿದೆ. ಚಿತ್ರದುರ್ಗ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಬಿ.ಕೆ. ಕೋಮಲಾ (Judge BK Komala, IInd Addl District & Sessions Court ) ಅವರಿಂದ ಈ ಆದೇಶ ಹೊರಬಿದ್ದಿದೆ.

ಇದನ್ನೂ ಓದಿ:  ಮಹಿಳೆಯರಿಗಾಗಿ ಪ್ರತ್ಯೇಕ ‘ಆಯುಷ್ಮತಿ ಕ್ಲಿನಿಕ್‌ : ಆರೋಗ್ಯ ಸಚಿವ ಸುಧಾಕರ್‌ ಪ್ರಕಟ

ಮುರುಘಾಮಠದ ಪೀಠಾಧ್ಯಕ್ಷ (Murugha Sharana Swamiji), SJM ವಿದ್ಯಾಪೀಠದ ಅಧ್ಯಕ್ಷರಾಗಿರುವ ಮುರುಘಾಶ್ರೀ ಧಾರ್ಮಿಕ ಕೇಂದ್ರ ದುರ್ಬಳಕೆ 1988 ಕಾಯ್ದೆ ಅನ್ವಯಗೊಳಿಸಿದ ಹಿನ್ನೆಲೆ ಸರ್ಕಾರಿ ವಕೀಲೆ ನಾಗವೇಣಿ ವಾದ ಮಂಡಿಸಿದ್ದರು. ಮಠದ ಪೀಠಾಧ್ಯಕ್ಷ ಸ್ಥಾನದಿಂದ ವಜಾಗೊಳಿಸುವಂತೆ ವಾದ ಮಂಡಿಸಿದ್ದಾರೆ.

ಮುರುಘಾ ಮಠ ಅಧೀನ ಸಂಸ್ಥೆ ಎಸ್​​ಜೆಎಂ ವಿದ್ಯಾಪೀಠದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಉದ್ಯಮಿ ಭರತ್ ನೇಮಕ

ಚಿತ್ರದುರ್ಗ ಮುರುಘಾ ಮಠದ ಅಧೀನ ಸಂಸ್ಥೆಯಾಗಿರುವ ಎಸ್​​ಜೆಎಂ ವಿದ್ಯಾಪೀಠದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಭರತ್​ ಅವರನ್ನು ನೇಮಕ ಮಾಡಲಾಗಿದೆ. ವಿದೇಶದಲ್ಲಿ ಕಾರ್ಯ ನಿರ್ವಹಿಸಿರುವ ಚಿತ್ರದುರ್ಗ ಮೂಲದ ಉದ್ಯಮಿ ಭರತ್ ಕುಮಾರ್ ಅವರು ಮುರುಘಾ ಮಠದ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಮುರುಘಾಮಠದ ಪೂಜಾ ಕೈಂಕರ್ಯ ಉಸ್ತುವಾರಿ ಬಸವಪ್ರಭು ಶ್ರೀಗಳು, ಎಸ್​​ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎಸ್​.ಬಿ.ವಸ್ತ್ರದಮಠ ಉಪಸ್ಥಿತರಿದ್ದರು.

ಮುರುಘಾಶ್ರೀ ವಜಾಕ್ಕೆ ಹೆಚ್ಚಿದ ಒತ್ತಡ

ಫೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮುರುಘಾಶ್ರೀಯನ್ನು ಚಿತ್ರದುರ್ಗ ಮುರುಘಾಮಠದ ಪೀಠಾದ್ಯಕ್ಷ ಸ್ಥಾನದಿಂದ‌‌ ವಜಾ ಮಾಡಲು ಒತ್ತಡ ಹೆಚ್ಚಾಗಿದೆ. ಹೀಗಾಗಿ ಇಂದು ಚಿತ್ರದುರ್ಗದಲ್ಲಿ ವೀರಶೈವ ಲಿಂಗಾಯತ ಸಮಾಜದ ಸಭೆ ನಡೆಯಲಿದೆ. ಮಾಜಿ ಸಚಿವ ಎಚ್.ಏಕಾಂತಯ್ಯ ನೇತೃತ್ವದಲ್ಲಿ ಚಿತ್ರದುರ್ಗ ತಾಲೂಕಿನ ಸಿಬಾರ ಬಳಿಯ ಎಸ್.ನಿಜಲಿಂಗಪ್ಪ ಸ್ಮಾರಕ ಆವರಣದಲ್ಲಿ ಸಭೆ ನಡೆಯಲಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 4:28 pm, Thu, 15 December 22

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ