ಚಿತ್ರದುರ್ಗ: ಲೋಕಾಯುಕ್ತ ಬಲೆಗೆ ಬಿದ್ದ ಭೂ ದಾಖಲೆ ಅಧಿಕಾರಿ ಕಾರು ಚಾಲಕ; ಹಣ ಪಡೆಯಲು ಮಾಡಿದ್ದ

ಸರ್ಕಾರಿ ಕೆಲಸ ದೇವರ ಕೆಲಸ ಎನ್ನುವ ಮಾತಿದೆ. ಆದರೆ, ಆ ಮಾತಿಗೆ ಕೆಲವು ಅಧಿಕಾರಿಗಳು ಚ್ಯುತಿ ತರುತ್ತಿದ್ದಾರೆ. ಜನಸಾಮಾನ್ಯರ ಕೆಲಸ ಮಾಡಿಕೊಡಬೇಕಾದ ಅಧಿಕಾರಿಗಳೆ ಲಂಚ ತೆಗೆದುಕೊಳ್ಳುತ್ತಿದ್ದಾರೆ. ಅದರಂತೆ ಚಿತ್ರದುರ್ಗದ ಜಿಲ್ಲೆಯ ಚಳ್ಳಕೆರೆ ಪಟ್ಟಣದ ಭೂ ದಾಖಲೆ ಇಲಾಖೆ ಉಪನಿರ್ದೇಶಕ ಲಂಚಕ್ಕೆ ಭೇಡಿಕೆಯಿಟ್ಟು ಸಿಕ್ಕಿಬಿದ್ದ ಘಟನೆ ನಡೆದಿದೆ.

ಚಿತ್ರದುರ್ಗ: ಲೋಕಾಯುಕ್ತ ಬಲೆಗೆ ಬಿದ್ದ ಭೂ ದಾಖಲೆ ಅಧಿಕಾರಿ ಕಾರು ಚಾಲಕ; ಹಣ ಪಡೆಯಲು ಮಾಡಿದ್ದ
ಲೋಕಾಯುಕ್ತ ಬಲೆಗೆ ಬಿದ್ದ ಭೂ ಅಧಿಕಾರಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Feb 02, 2024 | 8:25 PM

ಚಿತ್ರದುರ್ಗ, ಫೆ.02: ಭೂ ದಾಖಲೆ ಅಧಿಕಾರಿ ಕಾರು ಚಾಲಕ ಕಿರಣ್ ಲೋಕಾಯುಕ್ತ (Lokayukta) ಬಲೆಗೆ ಬಿದ್ದ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ನಡೆದಿದೆ. ಪಹಣಿ ಪ್ರತ್ಯೇಕಗೊಳಿಸಲು ಭೂ ದಾಖಲೆ ಇಲಾಖೆ ಉಪನಿರ್ದೇಶಕ ಗಂಗಯ್ಯ ಎಂಬುವವರು 15ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಓಬಳಾಪುರದ ಜಯಣ್ಣ ಎಂಬುವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಈ ಹಿನ್ನಲೆ ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ಹಾಗೂ ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಚಾಲಕ ಕಿರಣ್ ಮೂಲಕ ಮುಂಗಡ 10 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಚಾಲಕ ಕಿರಣ್ ಸಿಕ್ಕಿಬಿದ್ದರೆ, ಅಧಿಕಾರಿ ಗಂಗಯ್ಯ ಪರಾರಿಯಾಗಿದ್ದಾರೆ.

ಇಬ್ಬರು KAS ಅಧಿಕಾರಿಗಳನ್ನು ವರ್ಗಾವಣೆಮಾಡಿ ಸರ್ಕಾರ ಆದೇಶ

ಬೆಂಗಳೂರು: ಇಬ್ಬರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕುವೆಂಪು ವಿಶ್ವವಿದ್ಯಾಲಯ ಕುಲಸಚಿವ, ಹೆಚ್​ಬಿ ವಿಜಯಕುಮಾರ್ ಹಾಗೂ ಮಂಗಳೂರು ವಿಶ್ವವಿದ್ಯಾಲಯ ಕುಲಸಚಿವ ರಾಜು ಮೊಗವೀರ ಅವರನ್ನು ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ:Lokayukta Raid: ಲೋಕಾಯುಕ್ತ ದಾಳಿಗೆ ಬೆಸ್ಕಾಂ ಇಇ ಚನ್ನಕೇಶವ ಶಾಕ್: ಬಿಪಿಯಲ್ಲಿ ಏರುಪೇರು

ಟಿಪ್ಪು ಭಾವಚಿತ್ರಕ್ಕೆ ಅಪಮಾನ ಪ್ರಕರಣ; ಇಬ್ಬರು ಕಾನ್ಸ್​​ಟೇಬಲ್​ಗಳು ಅಮಾನತು

ರಾಯಚೂರು: ಜಿಲ್ಲೆಯ ಸಿರವಾರದಲ್ಲಿ ಟಿಪ್ಪು ಭಾವಚಿತ್ರಕ್ಕೆ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದಡಿ ಇಬ್ಬರು ಕಾನ್ಸ್​​ಟೇಬಲ್​ಗಳು ಅಮಾನತು ಮಾಡಿ ರಾಯಚೂರು ಎಸ್​​ಪಿ ಬಿ.ನಿಖಿಲ್ ಆದೇಶಿಸಿದ್ದಾರೆ. ಸಿರವಾರ ಠಾಣೆಯ ಕಾನ್ಸ್​ಟೇಬಲ್​ಗಳಾದ ಇಸ್ಮಾಯಿಲ್, ರೇವಣಸಿದ್ದ ಎಂಬುವವರು ಘಟನೆ ನಡೆದಾಗ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಕರ್ತವ್ಯಲೋಪ ಎಸಗಿದ ಹಿನ್ನಲೆ ಅಮಾನತುಗೊಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us