AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರುಘಾಶ್ರೀ ಪೋಕ್ಸೋ ಕೇಸ್​​: ಮನೆಯಿಂದ ನಾಪತ್ತೆಯಾಗಿದ್ದ ಸಂತ್ರಸ್ತೆ ಒಡನಾಡಿ ಸಂಸ್ಥೆಯಲ್ಲಿ ಪತ್ತೆ

ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಸಂತ್ರಸ್ತ ಬಾಲಕಿ ನಾಪತ್ತೆಯಾಗಿದ್ದು, ಇದೀಗ ಒಡನಾಡಿ ಸಂಸ್ಥೆಯಲ್ಲಿ ಪ್ರತ್ಯಕ್ಷಳಾಗಿದ್ದಾಳೆ. ಚಿತ್ರದುರ್ಗ ಮುರುಘಾ ಮಠದ ಮಠಾಧೀಶ ಡಾ. ಶಿವಮೂರ್ತಿ ಶರಣರಿಂದ ಲೈಂಗಿಕ ದೌರ್ಜನ್ಯಕ್ಕೊಳಗಿ ದೂರು ನೀಡಿದ್ದ ಬಾಲಕಿ ಮನೆಯಿಂದ ನಾಪತ್ತೆಯಾಗಿದ್ದಳು. ಇದೀಗ ಬಂದ ಮಾಹಿತಿ ಪ್ರಕಾರ ಮೈಸೂರಿನ ಒಡನಾಡಿ ಎಂದು ತಿಳಿದುಬಂದಿದೆ.

ಮುರುಘಾಶ್ರೀ ಪೋಕ್ಸೋ ಕೇಸ್​​: ಮನೆಯಿಂದ ನಾಪತ್ತೆಯಾಗಿದ್ದ ಸಂತ್ರಸ್ತೆ ಒಡನಾಡಿ ಸಂಸ್ಥೆಯಲ್ಲಿ ಪತ್ತೆ
ಮುರುಘಾಶ್ರೀ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: May 28, 2024 | 5:56 PM

Share

ಚಿತ್ರದುರ್ಗ, (ಮೇ 28): ನಾಮಪತ್ತೆಯಾಗಿದ್ದ ಚಿತ್ರದುರ್ಗದ ಮುರುಘಾ ಮಠದ(chitradurga murugha mutt swamiji,)  ಮಠಾಧೀಶ ಡಾ. ಶಿವಮೂರ್ತಿ ಶರಣರ ಪೋಕ್ಸೋ ಪ್ರಕರಣದ ಸಂತ್ರಸ್ತ ಬಾಲಕಿ ಪತ್ತೆಯಾಗಿದ್ದಾಳೆ. ​​ ಸಂತ್ರಸ್ತ ಬಾಲಕಿ ನಾಮಪತ್ತೆಯಾಗಿದ್ದಾಳೆ ಎಂದು ಆಕೆಯ ಚಿಕ್ಕಪ್ಪ ಮೇ 24ರಂದು ಮಹಿಳಾ ಠಾಣೆಗೆ ದೂರು ನೀಡಿದ್ದರು. ಆದ್ರೆ,  ಸಂತ್ರಸ್ತ ಬಾಲಕಿ, ಮೈಸೂರಿನ ಒಡನಾಡಿ ಸಂಸ್ಥೆಯಲ್ಲಿ ಪತ್ತೆಯಾಗಿದ್ದಾಳೆ.  ಈ ಬಗ್ಗೆ ಮೈಸೂರಿನ ಒಡನಾಡಿ ಸಂಸ್ಥೆಯು ಚಿತ್ರದುರ್ಗದ ಮಹಿಳಾ ಪೊಲೀಸ್ ಠಾಣೆಗೆ ಮಾಹಿತಿ ನೀಡಿದೆ. ಮುರುಘಾಶ್ರೀ ಬೆಂಬಲಿಗರಿಂದ ಸಂತ್ರಸ್ತೆ ಚಿಕ್ಕಪ್ಪನ ಮೂಲಕ ಬಾಲಕಿಗೆ ಒತ್ತಡ ಹಾಕುತ್ತಿದ್ದರಿಂದ ಆಕೆ ಮನೆಬಿಟ್ಟು ಹೋಗಿದ್ದಾಳೆ ಎಂದು ತಿಳಿದುಬಂದಿದೆ.

ಸಂತ್ರಸ್ತೆ ಬಾಲಕಿ ತಮ್ಮ ಬಳಿ ಬಂದಿದ್ದಾಳೆ ಎಂದು ಒಡನಾಡಿ ಸಂಸ್ಥೆ, ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಗೆ ಮಾಹಿತಿ ನೀಡಿದೆ. ಅಲ್ಲದೇ ಮುರುಘಾ ಶರಣರ ವಿರುದ್ಧದ ಪೋಕ್ಸೋ ಪ್ರಕರಣ ಸಂಬಂಧ​​ ಶ್ರೀಗಳ ಬೆಂಬಲಿಗರು ಸಂತ್ರಸ್ತೆ ಚಿಕ್ಕಪ್ಪನ ಮೂಲಕ ಬಾಲಕಿ ಮೇಲೆ ಒತ್ತಡ ಹೇರಲಾರಂಭಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಬಾಲಕಿ ಸಹ ಪೊಲೀಸರು, ಸಿಡಬ್ಲ್ಯುಸಿ ಎದುರು ತನ್ನ ಮೇಲೆ ಬರುತ್ತಿರುವ ಒತ್ತಡಗಳ ಬಗ್ಗೆ ಅಳಲು ತೋಡಿಕೊಂಡಿದ್ದಾಳೆ ಎನ್ನುವ ಮಾಹಿತಿ  ತಿಳಿದುಬಂದಿದೆ.

ಇದನ್ನೂ ಓದಿ: Chitradurga Murugha Mutt Swamiji: ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

ಮಠದ ಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪವನ್ನು ಹೊತ್ತಿರುವ ಮುರುಘಾ ಶ್ರೀ ಪ್ರಕರಣ ನ್ಯಾಯಾಲಯದಲ್ಲಿನ್ನೂ ವಿಚಾರಣೆಯ ಹಂತದಲ್ಲಿದೆ. ಏ. 22ರಂದು ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಗಳಿಗೆ ಹೈಕೋರ್ಟ್ ನೀಡಿದ್ದಂತ ಷರತ್ತು ಬದ್ದ ಜಾಮೀನಿಗೆ ನಾಲ್ಕು ತಿಂಗಳು ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಮುರುಘಾ ಶರಣರಿಗೆ ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಏಪ್ರಿಲ್ 29ರಂದು ಮಧ್ಯಾಹ್ನ 2.20ಕ್ಕೆ ಚಿತ್ರದುರ್ಗದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅಲ್ಲದೇ ಜಿಲ್ಲಾ ನ್ಯಾಯಾಲಯಕ್ಕೆ ಮುರುಘಾ ಮಠದ ಶಿವಮೂರ್ತಿ ಶರಣಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More