AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಹಣ ಡಬಲ್​ ಮಾಡಿಕೊಡುವುದಾಗಿ ನಂಬಿಸಿ ನೂರಾರು ಜನರಿಂದ 4.79 ಕೋಟಿ ವಂಚನೆ

60 ದಿನದಲ್ಲಿ ಹಣ ಡಬಲ್​ ಮಾಡಿಕೊಡುವುದಾಗಿ ನಂಬಿಸಿ 106 ಜನರಿಂದ ಒಟ್ಟು 4.79 ಕೋಟಿ ವಂಚಿಸಿ ವಂಚಕ ಎಸ್ಕೇಪ್ ಆಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಈ ಬಗ್ಗೆ ವಂಚನೆಗೊಳಗಾದ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರಿನ ರೈಲ್ವೆ ನೌಕರ ರಮೇಶಪ್ಪ ಎಂಬುವವರು ಠಾಣೆಗೆ ದೂರು ನೀಡಿದ್ದಾರೆ. ಚಿತ್ರದುರ್ಗ‌ CEN ಠಾಣೆ ಸಿಪಿಐ ವೆಂಕಟೇಶ ನೇತೃತ್ವದಲ್ಲಿ ತನಿಖೆ ಮುಂದುವರೆದಿದೆ.

ಚಿತ್ರದುರ್ಗ: ಹಣ ಡಬಲ್​ ಮಾಡಿಕೊಡುವುದಾಗಿ ನಂಬಿಸಿ ನೂರಾರು ಜನರಿಂದ 4.79 ಕೋಟಿ ವಂಚನೆ
ಆರೋಪಿ ಕೋಡೆ ರಮಣಯ್ಯ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Feb 15, 2024 | 8:02 AM

Share

ಚಿತ್ರದುರ್ಗ, ಫೆ.15: ಹಣ ಅಂದ್ರೆ ಹೆಣ ಕೂಡ ಬಾಯಿ ಬಿಡುತ್ತೆ ಎಂಬ ಮಾತಿದೆ. ಏಕೆಂದರೆ ಜನ ಅಷ್ಟರ ಮಟ್ಟಿಗೆ ಹಣಕ್ಕೆ ಬೆಲೆ ಕೊಡುತ್ತಿದ್ದಾರೆ. ಆದರೇ ಜನರ ಅನಿವಾರ್ಯತೆಯನ್ನೇ ಬಂಡವಾಳ ಮಾಡಿಕೊಂಡ ವಂಚಕರು ಹಣವನ್ನು ಡಬಲ್ ಮಾಡಿಕೊಡುತ್ತೇವೆ ಎಂದು ಆಸೆ ಹುಟ್ಟಿಸಿ ಬಳಿಕ ಅವರ ಹಣ ಪಡೆದು ವಂಚನೆ (Money Double) ಮಾಡುತ್ತಿದ್ದಾರೆ. ರಾಜ್ಯದಲ್ಲಿ ಇಂತಹ ವಂಚಕರ ಜಾಲ ದೊಡ್ಡದಿದೆ. ಸದ್ಯ ಚಿತ್ರದುರ್ಗ ಜಿಲ್ಲೆಯಲ್ಲಿ ಕೋಟಿ ಕೋಟಿ ವಂಚಿಸಿರುವ ಘಟನೆ ನಡೆದಿದೆ(Cheating).

ಆಂಧ್ರ ಮೂಲದ ಕೋಡೆ ರಮಣಯ್ಯ ಎಂಬ ವ್ಯಕ್ತಿ ಕ್ರೌಡ್ ಕ್ಲಬ್ ಇಂಟರ್​​ನ್ಯಾಷನಲ್ ಕಂಪನಿ ಹೆಸರಲ್ಲಿ 60 ದಿನದಲ್ಲಿ ಹಣ ಡಬಲ್​ ಮಾಡಿಕೊಡುವುದಾಗಿ ನಂಬಿಸಿ ವಂಚನೆ ಮಾಡಿದ್ದಾನೆ. ಈ ಘಟನೆ ಸಂಬಂಧ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿ.15ರಂದು ದಾಖಲಾದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರಿನ ರೈಲ್ವೆ ನೌಕರ ರಮೇಶಪ್ಪ ಎಂಬುವವರು ಠಾಣೆಗೆ ದೂರು ನೀಡಿದ್ದಾರೆ. ಆರೋಪಿಗಳು ರಮೇಶಪ್ಪ, ಸಂಬಂಧಿಕರು ಸೇರಿ 106 ಜನರಿಗೆ ವಂಚನೆ ಮಾಡಿರುವುದು ಪತ್ತೆಯಾಗಿದೆ.

ಆರೋಪಿಗಳು ರಮೇಶಪ್ಪ ಅವರ ಬಳಿ 1 ಲಕ್ಷ 4 ಸಾವಿರ ಹಣ ಪಡೆದು ವಂಚನೆ ಮಾಡಿದ್ದಾರೆ. ಇನ್ನು ಇವರು 106 ಜನರಿಂದ ಒಟ್ಟು 4.79 ಕೋಟಿ ವಂಚಿಸಿದ್ದಾರೆ. ಚಿಕ್ಕಜಾಜೂರು ಠಾಣೆಯಿಂದ ಚಿತ್ರದುರ್ಗದ CEN ಠಾಣೆಗೆ ಕೇಸ್ ವರ್ಗಾವಣೆಯಾಗಿದ್ದು ಚಿತ್ರದುರ್ಗ‌ CEN ಠಾಣೆ ಸಿಪಿಐ ವೆಂಕಟೇಶ ನೇತೃತ್ವದಲ್ಲಿ ತನಿಖೆ ಮುಂದುವರೆದಿದೆ.

ಇದನ್ನೂ ಓದಿ: ವಂಚನೆ ಪ್ರಕರಣ: ನಿರ್ಮಾಪಕ ಬಂಡ್ಲ ಗಣೇಶ್​ಗೆ ಜೈಲು ಶಿಕ್ಷೆ

ವಿದ್ಯುತ್ ತಂತಿ ಘರ್ಷಣೆಯಿಂದ ಕಬ್ಬಿನ ಗದ್ದೆ ಭಸ್ಮ

ವಿದ್ಯುತ್ ತಂತಿಗಳ ಘರ್ಷಣೆಯಿಂದ ಬೆಂಕಿ ಅವಘಡ ಸಂಭವಿಸಿದ್ದು, 15 ಎಕರೆ ಕಬ್ಬು ಬೆಳೆ ನಾಶವಾಗಿದೆ. ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಘಟನೆ ನಡೆದಿದ್ದು, ಕಟಾವಿಗೆ ಬಂದಿದ್ದ ಬೆಳೆಬೆಂಕಿಗಾಹುತಿಯಾಗಿದೆ. ನಿಂಗಪ್ಪ ಮಸಳಿ, ಬಾಬು ಮಸಳಿ ಹಾಗೂ ಮಲ್ಲಪ್ಪ ಮಸಳಿ ಎಂಬ ರೈತರಿಗೆ ಸೇರಿದ್ದ ಕಬ್ಬು ನಾಶವಾಗಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸ ಪಟ್ಟರು. ಆದ್ರೆ, ಅಷ್ಟರಲ್ಲಿ ಬೆಳೆ ಸುಟ್ಟು ಕರಕಲಾಗಿತ್ತು. ಇದ್ರಿಂದ ಹೆಸ್ಕಾ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ರು. ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?