AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲುಷಿತ ನೀರು ಸೇವಿಸಿ ದುರಂತ: ಮೃತರ ಸಂಖ್ಯೆ 6ಕ್ಕೆ ಏರಿಕೆ

Chitradurga News: ಆಗಷ್ಟ್ 1ರಿಂದ ಚಿತ್ರದುರ್ಗ ನಗರದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ ಈವರೆಗೆ ಐವರು ಸಾವಿಗೀಡಾಗಿದ್ದರು. ಆದರೆ ಇಂದು ಕರಿಬಸಪ್ಪ(35) ಎನ್ನುವವರು ಮೃತ ಪಟ್ಟಿದ್ದಾರೆ. ಹಾಗಾಗಿ ಸದ್ಯ ಮೃತರ ಸಂಖ್ಯೆ 6ಕ್ಕೆ ಏರಿಕೆ ಆಗಿದೆ.

ಕಲುಷಿತ ನೀರು ಸೇವಿಸಿ ದುರಂತ: ಮೃತರ ಸಂಖ್ಯೆ 6ಕ್ಕೆ ಏರಿಕೆ
ಮೃತ ಕರಿಬಸಪ್ಪ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Aug 07, 2023 | 4:20 PM

Share

ಚಿತ್ರದುರ್ಗ ಆಗಸ್ಟ್​ 07: ಕೋಟೆನಾಡಿನ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು (contaminated water) ಸೇವಿಸಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆ ಆಗಿದೆ. ಚಿತ್ರದುರ್ಗ ತಾಲೂಕಿನ ಚಿಕ್ಕಪುರದ ಕರಿಬಸಪ್ಪ(35) ಎನ್ನುವವರು ಇಂದು ಮೃತ ಪಟ್ಟಿದ್ದಾರೆ. ಜು.30, 31ರಂದು ಕವಾಡಿಗರಹಟ್ಟಿ ಸಂಬಂಧಿಕರ ಮನೆಯಲ್ಲಿದ್ದು, ಆಗಸ್ಟ್ 1ರಿಂದ ವಾಂತಿ, ಭೇದಿಯಿಂದ ಅಸ್ವಸ್ಥಗೊಂಡಿದ್ದರು. ಬಳಿಕ ಚಿತ್ರದುರ್ಗ ಜಿಲ್ಲಾಸ್ಪತ್ರೆ, ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ.

ಸೂಕ್ತ ಪರಿಹಾರ ಕ್ರಮಕ್ಕೆ ಮನವಿ

ಕವಾಡಿಗರಹಟ್ಟಿಯಲ್ಲಿ ನೀರು, ಆಹಾರ ಸೇವೆನೆಯಿಂದ ಸಾವನ್ನಪ್ಪಿದ್ದಾರೆ ಎಂದು ಮೃತ ಕರಿಬಸಪ್ಪ ಸಹೋದರ ಮಲ್ಲಿಕಾರ್ಜುನ್ ಮಾಹಿತಿ ನೀಡಿದ್ದಾರೆ. ಡಿಹೆಚ್ಓ ಡಾ.ರಂಗನಾಥ್​ಗೆ ಈ ಬಗ್ಗೆ ಸಂಬಂಧಿಕರು ಮಾಹಿತಿ ನೀಡಿದ್ದಾರೆ. ಸೂಕ್ತ ಪರಿಹಾರ ಕ್ರಮಕ್ಕೆ ಮೃತನ ಸಂಬಂಧಿಕರಿಂದ ಮನವಿ ಮಾಡಿದ್ದು, ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಡಿಹೆಚ್ಓ ಡಾ.ರಂಗನಾಥ್​ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಐವರು ಸಾವು; ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ – ಗುಂಡೂರಾವ್

ಆಗಸ್ಟ್​ 1 ರಂದು ಚಿತ್ರದುರ್ಗ ನಗರದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಮರಣ‌ ಮೃದಂಗವೇ ಬಾರಿಸಿತ್ತು. ಕಲುಷಿತ ನೀರು ಸೇವಿಸಿದ ಪರಿಣಾಮ ಈವರೆಗೆ 6 ಜನರು ಮೃತಪಟ್ಪಿದ್ದಾರೆ. ಓರ್ವ ಗರ್ಭಿಣಿಯ ಗರ್ಭಪಾತ ಸಂಭವಿಸಿದೆ. 206ಜನ ವಾಂತಿ ಬೇಧಿಯಿಂದ ಅಸ್ವಸ್ಥರಾಗಿ‌ ಚಿಕಿತ್ಸೆ ಪಡೆದಿದ್ದು 59ಜನ ಡಿಸ್ಚಾರ್ಜ್ ಆಗಿದ್ದಾರೆ.

ಪ್ರಕರಣ ಮರು ತನಿಖೆಯ ಭರವಸೆಯ ನೀಡಿದ ಪೌರಾಡಳಿತ ಸಚಿವ ರಹೀಂಖಾನ್

ನಿನ್ನೆ ಪೌರಾಡಳಿತ ಸಚಿವ ರಹೀಂಖಾನ್ ಕವಾಡಿಗರಹಟ್ಟಿಗೆ ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಶಾಸಕ ಕೆ.ಸಿ.ವಿರೇಂದ್ರ, ಡಿಸಿ ದಿವ್ಯಪ್ರಭು, ಪೌರಾಯುಕ್ತ ಶ್ರೀನಿವಾಸ್ ಸಾಥ್ ನೀಡಿದ್ದರು. ಈ ವೇಳೆ ಪ್ರತಿಕ್ರಿಯಿಸಿದ ಸಚಿವ ರಹೀಂಖಾನ್, ಪ್ರಕರಣ ಮರು ತನಿಖೆಯ ಭರವಸೆ ನೀಡಿದರು. ಅಂತೆಯೇ ಅಧಿಕಾರಿಗಳ ನಿರ್ಲಕ್ಷ ಆಗಿದೆ ಎಂದು ಒಪ್ಪಿಕೊಂಡಿದ್ದು, ಪೂರ್ಣ ತನಿಖೆಯ ಬಳಿಕ ಪೌರಯುಕ್ತ ಸೇರಿ ಇತರೆ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ಕಲುಷಿತ ನೀರು ಸೇವನೆ ಪ್ರಕರಣ: ಅಸ್ವಸ್ಥಗೊಂಡವರ ಸಂಖ್ಯೆ 185ಕ್ಕೆ ಏರಿಕೆ

ಮೃತರ ಕುಟುಂಬಕ್ಕೆ ತಲಾ 25ಲಕ್ಷ ಪರಿಹಾರ ಮತ್ತು ಸರ್ಕಾರಿ ನೌಕರಿ

ನಟ ಚೇತನ್ ಕವಾಡಿಗರಹಟ್ಟಿಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು. ಬಳಿಕ ಪ್ರತಿಕ್ರಿಯಿಸಿ ಸರ್ಕಾರದ ವೈಫಲ್ಯವೇ ಕಾರಣ. ಪ್ರಕರಣ ಮುಚ್ಚಿ ಹಾಕುವ ಹುನ್ನಾರ ನಡೆದಿದೆ ಎಂದು ಕಿಡಿ ಕಾರಿದ್ದರು.

ಬಿಜೆಪಿ ಶಾಸಕ ಸಿ.ಟಿ.ರವಿ ಬಸವೇಶ್ವರ ಆಸ್ಪತ್ರೆಗೆ ಭೇಟಿ ನೀಡಿದ್ದರು. ಬಳಿಕ ಪ್ರತಿಕ್ರಿಯಿಸಿ ಈ ರೀತಿಯ ಅನೇಕ ಪ್ರಕರಣದ ಬಳಿಕವೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಸಾವಿನ ಬಳಿಕ ಪರಿಹಾರ ಕೊಡುವುದು ಒಂದು ಭಾಗ. ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ಮೃತರ ಕುಟುಂಬಕ್ಕೆ ತಲಾ 25ಲಕ್ಷ ಪರಿಹಾರ ಮತ್ತು ಸರ್ಕಾರಿ ನೌಕರಿ ಕೊಡಬೇಕೆಂದು ಆಗ್ರಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:18 pm, Mon, 7 August 23

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ