AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ ಜಿಲ್ಲೆಯಲ್ಲಿ ವಾಮಾಚಾರದ ಭೀತಿ; ಜನರು ಓಡಾಡುವ ರಸ್ತೆಗಳಲ್ಲೇ ಲಿಂಬೆಹಣ್ಣು, ಕುಡಿಕೆ, ಕುಂಕುಮ

ಮೊಳಕಾಲ್ಮೂರು ಮಾತ್ರ ಅಲ್ಲದೆ ಚಿತ್ರದುರ್ಗ, ಚಳ್ಳಕೆರೆ ಭಾಗದಲ್ಲಿ ಇಂಥ ಘಟನೆಗಳು ಕಂಡು ಬರುತ್ತಿವೆ. ನಗರದ ಜೋಗಿಮಟ್ಟಿ ರಸ್ತೆ, ಹೊಳಲ್ಕೆರೆ ರಸ್ತೆಯ ಹೊರ ವಲಯದಲ್ಲಿ ಅನೇಕ ಕಡೆ ನಿಂಬೆಹಣ್ಣು ಮತ್ತಿತರೆ ವಸ್ತುಗಳು ಪತ್ತೆ ಆಗುತ್ತಿದ್ದು, ನಿತ್ಯ ಜನರಿಗೆ ಕಿರಿಕಿರಿ ಉಂಟು ಮಾಡುತ್ತಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ವಾಮಾಚಾರದ ಭೀತಿ; ಜನರು ಓಡಾಡುವ ರಸ್ತೆಗಳಲ್ಲೇ ಲಿಂಬೆಹಣ್ಣು, ಕುಡಿಕೆ, ಕುಂಕುಮ
ಚಿತ್ರದುರ್ಗ ಜಿಲ್ಲೆಯಲ್ಲಿ ವಾಮಾಚಾರದ ಭೀತಿ
TV9 Web
| Updated By: preethi shettigar|

Updated on: Aug 03, 2021 | 8:48 AM

Share

ಚಿತ್ರದುರ್ಗ: ಬುಡಕಟ್ಟು ಸಂಸ್ಕೃತಿಯ ತವರಾದ ಚಿತ್ರದುರ್ಗ ಜಿಲ್ಲೆಯಲ್ಲಿ ಅನೇಕ ಸಾಂಪ್ರದಾಯಿಕ ಆಚರಣೆಗಳು ಜಾರಿಯಲ್ಲಿವೆ. ಈ ಮಧ್ಯೆ ಕೆಲ ಕಿಡಿಗೇಡಿಗಳು ಜನರು ಓಡಾಡುವ ರಸ್ತೆಗಳಲ್ಲೇ ರಾತೋರಾತ್ರಿ ವಾಮಾಚಾರ, ಭಾನಾಮತಿ ಮಾಡುವ ಮೂಲಕ ಜನರಲ್ಲಿ ಭಯಭೀತಿ ಸೃಷ್ಟಿಸುತ್ತಿದ್ದಾರೆ. ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಪಿಚಾರಹಟ್ಟಿ ಗ್ರಾಮದ ಬಳಿ ನಾಲ್ಕು ರಸ್ತೆ ಸೇರುವ ಸ್ಥಳದಲ್ಲಿ ಅಮಾವಾಸ್ಯೆ ಬಂದರೆ ಸಾಕು ವಾಮಾಚಾರ ಮಾಡಲಾಗುತ್ತಿದೆ. ಲಿಂಬೆಹಣ್ಣು, ಕುಡಿಕೆ, ಕುಂಕುಮ, ಎಲೆ ಅಡಿಕೆ, ಕಪ್ಪು, ಕೆಂಪು ವಸ್ತ್ರ, ಗೊಂಬೆಗಳು ಪತ್ತೆ ಆಗುತ್ತಿವೆ. ಜನರು ನಿತ್ಯ ಸಂಚರಿಸುವ ರಸ್ತೆಗಳ ಮಧ್ಯೆಯೇ ಇಷ್ಟೆಲ್ಲಾ ಪತ್ತೆ ಆಗುತ್ತಿದ್ದು‌, ಇದು ಸಹಜವಾಗಿ ಜನರಲ್ಲಿ ಆತಂಕ ಸೃಷ್ಟಿಸುತ್ತಿದೆ.

ಪೀಚಾರಹಟ್ಟಿ, ಕೋನಸಾಗರ ಗ್ರಾಮಸ್ಥರು ಈ ಬಗ್ಗೆ ಈಗಾಗಲೇ ಮೊಳಕಾಲ್ಮೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ವಾಮಾಚಾರ, ಭಾನಾಮತಿ ಮೂಲಕ ಜನರಲ್ಲಿ ಭೀತಿ‌ ಸೃಷ್ಟಿಸುತ್ತಿರುವವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಮೊಳಕಾಲ್ಮೂರು ಮಾತ್ರ ಅಲ್ಲದೆ ಚಿತ್ರದುರ್ಗ, ಚಳ್ಳಕೆರೆ ಭಾಗದಲ್ಲಿ ಇಂಥ ಘಟನೆಗಳು ಕಂಡು ಬರುತ್ತಿವೆ. ನಗರದ ಜೋಗಿಮಟ್ಟಿ ರಸ್ತೆ, ಹೊಳಲ್ಕೆರೆ ರಸ್ತೆಯ ಹೊರ ವಲಯದಲ್ಲಿ ಅನೇಕ ಕಡೆ ನಿಂಬೆಹಣ್ಣು ಮತ್ತಿತರೆ ವಸ್ತುಗಳು ಪತ್ತೆ ಆಗುತ್ತಿದ್ದು, ನಿತ್ಯ ಜನರಿಗೆ ಕಿರಿಕಿರಿ ಉಂಟು ಮಾಡುತ್ತಿದೆ.

ಮೌಢ್ಯ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಕೆಲವರೂ ಭಾನಾಮತಿ ಮತ್ತು ವಾಮಾಚಾರದ ಮೂಲಕ ಜನರ ನೆಮ್ಮದಿ ಕೆಡಿಸುವ ಕೆಲಸ ನಡೆಸುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಇಲಾಖೆ ಮತ್ತು ಸಂಬಂಧಿತ ಅಧಿಕಾರಿಗಳು ಗಮನಹರಿಸಿ ಭೀತಿ ಸೃಷ್ಟಿಸುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕಿದೆ ಎಂಬುದು ಸ್ಥಳೀಯರ ಆಗ್ರಹವಾಗಿದೆ.

ಮೊಳಕಾಲ್ಮೂರು, ಚಿತ್ರದುರ್ಗ ಸೇರಿದಂತೆ ಅನೇಕ ಕಡೆ ವಾಮಾಚಾರ, ಭಾನಾಮತಿ ಮಾಡುವ ಕೆಲಸ ಕೆಲವರಿಂದ ನಡೆಯುತ್ತಿದೆ. ಮುಗ್ಧ ಜನರಲ್ಲಿ ಭೀತಿ ಸೃಷ್ಟಿಸಿ ಸಮಾಜದಲ್ಲಿ ನೆಮ್ಮದಿ‌ ಕೆಡಿಸಲಾಗುತ್ತಿದೆ. ಅಧಿಕಾರಿಗಳು ಇಂಥ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರ ಪ್ರತಾಪ್ ಜೋಗಿ ಆಗ್ರಹಿಸಿದ್ದಾರೆ.

ಕೋನಸಾಗರ ಗ್ರಾಮಸ್ಥರು ಗ್ರಾಮದ ಬಳಿ ರಸ್ತೆ ಮೇಲೆ ವಾಮಾಚಾರ ಮಾಡುತ್ತಿರುವುದು ಕಂಡು ಬರುತ್ತಿದೆ. ಇದರಿಂದ ಜನರಲ್ಲಿ ಭೀತಿ ಸೃಷ್ಟಿಯಾಗುತ್ತಿದೆ ಎಂದು ಮೊಳಕಾಲ್ಮೂರು ಠಾಣೆಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಜಿ.ರಾಧಿಕಾ ತಿಳಿಸಿದ್ದಾರೆ.

ಇದನ್ನೂ ಓದಿ:

ನೆಲಮಂಗಲದಲ್ಲಿ ವಾಮಾಚಾರ: 10 ವರ್ಷದ ಬಾಲಕಿಯ ಅಪಹರಣ, ಬಲಿಗೆ ಯತ್ನ; ಅರ್ಚಕ ಸೇರಿದಂತೆ ಐದು ಮಂದಿ ಅರೆಸ್ಟ್

ನಿಧಿ ಆಸೆಗಾಗಿ ದಾವಣಗೆರೆ ಹನುಮ ದೇವಾಲಯಕ್ಕೆ ವಾಮಾಚಾರ; ಗ್ರಾಮಸ್ಥರ ಆರೋಪ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ