AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ಚಡ್ಡಿ ಗ್ಯಾಂಗ್ ಹಾವಳಿಗೆ ಜನರು ತಲ್ಲಣ: ಬಂಧಿಸುವಲ್ಲಿ ಖಾಕಿ ವಿಫಲ?

ಇತ್ತೀಚೆಗೆ ಮುಧೋಳದಲ್ಲಿ ಮನೆ ಕಳ್ಳತನಕ್ಕೆ ಬಂದಿದ್ದ ಚಡ್ಡಿ ಗ್ಯಾಂಗ್​​​​ನನ್ನು ಓರ್ವ ಯುವತಿ ಅಮೆರಿಕದಲ್ಲಿ ಕುಳಿತು ತಪ್ಪಿಸಿದ್ದರು. ಇದೀಗ ಈ ಚಡ್ಡಿ ಗ್ಯಾಂಗ್​​ ಚಿತ್ರದುರ್ಗ ಜಿಲ್ಲೆಗೆ ಎಂಟ್ರಿಕೊಟ್ಟಿದೆ. ಮಾರಕಾಸ್ತ್ರ ಹಿಡಿದು ಕಳ್ಳತನಕ್ಕೆ ದರೋಡೆಕೋರರ ಯತ್ನಿಸಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆ ಆಗಿವೆ. ಈವರೆಗೆ ಪೊಲೀಸರು ಕ್ರಮಕೈಗೊಳ್ಳದಿರುವುದು ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ.

ಚಿತ್ರದುರ್ಗದಲ್ಲಿ ಚಡ್ಡಿ ಗ್ಯಾಂಗ್ ಹಾವಳಿಗೆ ಜನರು ತಲ್ಲಣ: ಬಂಧಿಸುವಲ್ಲಿ ಖಾಕಿ ವಿಫಲ?
ಸಂಗ್ರಹ ಚಿತ್ರ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Oct 12, 2025 | 4:49 PM

Share

ಚಿತ್ರದುರ್ಗ, ಅಕ್ಟೋಬರ್​ 12: ಜಿಲ್ಲೆಯಲ್ಲಿ ಕಳ್ಳರ ಹಾವಳಿ ಮಿತಿ ಮೀರಿದೆ. ಚಿತ್ರದುರ್ಗ (Chitradurga), ಚಳ್ಳಕೆರೆ, ಹಿರಿಯೂರು ತಾಲೂಕಿನಲ್ಲಿ ಚಡ್ಡಿ ಗ್ಯಾಂಗ್ (Chaddi Gang) ಪ್ರತ್ಯಕ್ಷವಾಗಿದೆ. ಚಡ್ಡಿ ಗ್ಯಾಂಗ್ ಕಳ್ಳತನಕ್ಕೆ ಯತ್ನಿಸಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆ ಆಗಿವೆ. ಆದರೆ ಪೊಲೀಸರು ಮಾತ್ರ ಆರೋಪಿಗಳ ಬಂಧಿಸದೇ ಇರುವುದು ಜನರಲ್ಲಿ ಭೀತಿ ಹೆಚ್ಚಿಸಿದೆ.

ಚಡ್ಡಿ ಗ್ಯಾಂಗ್ ಜಾಲ ಭೇದಿಸದ ಪೊಲೀಸ್​​: ಜನರು ಆಕ್ರೋಶ

ಜಿಲ್ಲೆಯ ಚಳ್ಳಕೆರೆ, ಹೊಳಲ್ಕೆರೆ ಮತ್ತು ಹಿರಿಯೂರಿನಲ್ಲಿ ಚಡ್ಡಿ ಗ್ಯಾಂಗ್​ ಆ್ಯಕ್ಟೀವ್​ ಆಗಿದ್ದು, ತನ್ನ ಕೈಚಳಕ ತೋರಿಸುತ್ತಿದೆ. ಮಾರಕಾಸ್ತ್ರ ಹಿಡಿದು ಕಳ್ಳತನಕ್ಕೆ ದರೋಡೆಕೋರರ ಯತ್ನಿಸಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆ ಆಗಿವೆ. ಈಗಾಗಲೇ ಚಡ್ಡಿ ಗ್ಯಾಂಗ್ ಕಳೆದ ಎರಡ್ಮೂರು ತಿಂಗಳಿಂದಲೂ ಆಗಾಗ ಪ್ರತ್ಯಕ್ಷ ಆಗಿದೆ. ಹೀಗಾಗಿ, ಜನರಲ್ಲಿ ಭೀತಿ ಉಂಟಾಗಿದೆ. ಹೀಗಿದ್ದರು ಪೊಲೀಸರು ಪಡೆ ಮಾತ್ರ ಚಡ್ಡಿ ಗ್ಯಾಂಗ್ ಜಾಲ ಭೇದಿಸುವ ಕೆಲಸ ಮಾಡದೇ ಇರುವುದು ಜನರ ಆಕ್ರೋಶಕ್ಕೆ ಕಾರಣ ಆಗಿದೆ.

ಇದನ್ನೂ ಓದಿ: ಮುಧೋಳದಲ್ಲಿ ರಾತ್ರೋರಾತ್ರಿ ಮನೆ ಕಳ್ಳತನಕ್ಕೆ ಬಂದ ಚಡ್ಡಿ ಗ್ಯಾಂಗ್: ಅಮೆರಿಕದಿಂದಲೇ ತಪ್ಪಿಸಿದ ಯುವತಿ!

ಇದನ್ನೂ ಓದಿ
Image
ಚಿನ್ನದ ಅಂಗಡಿ ಕದಿಯಲು ಬಂದ ಗ್ಯಾಂಗನ್ನೇ ಓಡಿಸಿದ ಮಹಿಳೆ!
Image
ಡಿಸಿಸಿ ಬ್ಯಾಂಕ್ ಚುನಾವಣೆ: ಲಾಂಗು, ಮಚ್ಚು ಹಿಡಿದು ಓಡಾಡ್ತಿರುವ ಪುಢಾರಿಗಳು!
Image
ಮುಧೋಳ ಕಳ್ಳತನ ಯತ್ನವನ್ನು ಅಮೆರಿಕದಿಂದಲೇ ತಪ್ಪಿಸಿದ ಯುವತಿ!
Image
ಅಮೆರಿಕದಲ್ಲಿ ಕೂತು ಬಾಗಲಕೋಟೆ ಮನೆ ಕಳ್ಳತನ ತಪ್ಪಿಸಿದ ಶೃತಿ: ಆಗಿದ್ದೇನು?

ಇನ್ನು ಚಡ್ಡಿ ಗ್ಯಾಂಗ್​​ನಿಂದ ಸರಗಳ್ಳತನ ಪ್ರಕರಣಗಳು, ಮನೆಗಳ್ಳತನ, ದರೋಡೆ ಯತ್ನ ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿವೆ. ಆದರೆ ಮೂರು ತಿಂಗಳಲ್ಲಿ ಅನೇಕ ಸಲ ಚಡ್ಡಿ ಗ್ಯಾಂಗ್ ಪ್ರತ್ಯಕ್ಷ ಆಗಿದ್ದರೂ ಖಾಕಿ ಬಂಧಿಸದೇ ಇರುವುದು ಜನರಲ್ಲಿ ಭೀತಿ ಜೊತೆಗೆ ಅನುಮಾನ ಮೂಡಿಸಿದೆ.

ಇದನ್ನೂ ಓದಿ: ಅಮೆರಿಕದಲ್ಲಿ ಕೂತು ಬಾಗಲಕೋಟೆ ಮನೆ ಕಳ್ಳತನ ತಪ್ಪಿಸಿದ ಶೃತಿ: ಆಗಿದ್ದೇನು?

ಈ ಬಗ್ಗೆ ಎಸ್​​ಪಿ ರಂಜಿತ್ ಅವರನ್ನು ಕೇಳಿದರೆ, ಈ ಬಗ್ಗೆ ಆಮೇಲೆ ಚರ್ಚಿಸೋಣ ಎಂದು ನುಣುಚಿಕೊಳ್ಳುತ್ತಾರೆ‌. ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದಲ್ಲಿ ಕಳ್ಳರ ಹಾವಳಿ ಹೇಳತೀರದಾಗಿದೆ. ಆದರೆ ಪೊಲೀಸರು ಮಾತ್ರ ದೂರು ದಾಖಲಿಸಿ ಸುಮ್ಮನಾಗುತ್ತಿದ್ದಾರೆ. ಚಡ್ಡಿ ಗ್ಯಾಂಗ್ ಬಂಧಿಸಿ ಜನರ ಭೀತಿ ದೂರು ಮಾಡಬೇಕಾದ ಖಾಕಿ ಸೈಲೆಂಟಾಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:48 pm, Sun, 12 October 25

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!