AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಕ್ಸೋ ಪ್ರಕರಣ: ಮುರುಘಾ ಶ್ರೀ ಸೇರಿ ಮೂವರ ವಿರುದ್ಧ ಆರೋಪ ದೃಢಪಟ್ಟಿದೆ -ಚಿತ್ರದುರ್ಗ ಎಸ್​ಪಿ

ಆದರೆ, ಎ3 ಮಠದ ಉತ್ತರಾಧಿಕಾರಿ ಮತ್ತು ಎ5 ಗಂಗಾಧರಯ್ಯ - ಇವರಿಬ್ಬರ ವಿರುದ್ಧ ಆರೋಪಗಳಿಗೆ ಈವರೆಗೆ ಸಾಕ್ಷ್ಯಾಧಾರ ಲಭ್ಯವಾಗಿಲ್ಲ. ತನಿಖೆ ಜಾರಿಯಲ್ಲಿದ್ದು ಸಾಕ್ಷ್ಯಾಧಾರ ಸಂಗ್ರಹ ಮಾಡುತ್ತಿದ್ದೇವೆ. ಸಾಕ್ಷ್ಯಾಧಾರ ಸಂಗ್ರಹಿಸಿ ಅಂತಿಮ ಚಾರ್ಜ್​​ಶೀಟ್​ ಸಲ್ಲಿಸುತ್ತೇವೆ ಎಂದು ಚಿತ್ರದುರ್ಗ ಎಸ್​ಪಿ ಸ್ಪಷ್ಟಪಡಿಸಿದ್ದಾರೆ.

ಪೋಕ್ಸೋ ಪ್ರಕರಣ: ಮುರುಘಾ ಶ್ರೀ ಸೇರಿ ಮೂವರ ವಿರುದ್ಧ ಆರೋಪ ದೃಢಪಟ್ಟಿದೆ -ಚಿತ್ರದುರ್ಗ ಎಸ್​ಪಿ
ಹೆಚ್ಚುತ್ತಿರುವ ಪೋಕ್ಸೋ ಕೇಸ್ -9ನೇ ತರಗತಿಯಿಂದ ಕಾಯ್ದೆ ಬಗ್ಗೆ ಶಿಕ್ಷಣ, ಪಠ್ಯ ರಚಿಸಲು ಹೈಕೋರ್ಟ್ ಸೂಚನೆ
TV9 Web
| Edited By: |

Updated on:Nov 07, 2022 | 6:27 PM

Share

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ (Protection of Children from Sexual Offences (POCSO) Act) ಜೈಲುಪಾಲಾಗಿರುವ ಮುರುಘಾ ಶರಣರ (Muruga Mutt seer Shivamurthy Murugha Sharanaru) ವಿರುದ್ಧ ಇಬ್ಬರು ಬಾಲಕಿಯರು ದೂರು ನೀಡಿದ್ದರು. ತನಿಖೆ ಭಾಗಶಃ ಪೂರ್ಣಗೊಂಡಿದ್ದು ಚಾರ್ಜ್​ಶೀಟ್​ ಸಲ್ಲಿಸಲಾಗಿದೆ ಎಂದು ಚಿತ್ರದುರ್ಗದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್​ ಹೇಳಿದ್ದಾರೆ. ಅಕ್ಟೋಬರ್​ 27ರಂದೇ ತನಿಖಾಧಿಕಾರಿ ಅನಿಲ್ ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ. 2ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ. ಚಾರ್ಜ್​ಶೀಟ್​ನ ಸಿಸಿ ನಂಬರ್​ ಬರುವುದು ಬಾಕಿಯಿದೆ. ಈ ಮಧ್ಯೆ, ಎ1 ಡಾ. ಶಿವಮೂರ್ತಿ ಮುರುಘಾ ಶರಣರು, ಎ2 ವಾರ್ಡನ್​ ರಶ್ಮಿ ಮತ್ತು ಎ4 ಪರಮಶಿವಯ್ಯ ವಿರುದ್ಧ ಆರೋಪಗಳು ದೃಢಪಟ್ಟಿವೆ ಎಂದು ಚಿತ್ರದುರ್ಗ ಎಸ್​ಪಿ (Chitradurga SP) ಹೇಳಿದ್ದಾರೆ.

ಆದರೆ, ಎ3 ಮಠದ ಉತ್ತರಾಧಿಕಾರಿ ಮತ್ತು ಎ5 ಗಂಗಾಧರಯ್ಯ – ಇವರಿಬ್ಬರ ವಿರುದ್ಧ ಆರೋಪಗಳಿಗೆ ಈವರೆಗೆ ಸಾಕ್ಷ್ಯಾಧಾರ ಲಭ್ಯವಾಗಿಲ್ಲ. ತನಿಖೆ ಜಾರಿಯಲ್ಲಿದ್ದು ಸಾಕ್ಷ್ಯಾಧಾರ ಸಂಗ್ರಹ ಮಾಡುತ್ತಿದ್ದೇವೆ. ಸಾಕ್ಷ್ಯಾಧಾರ ಸಂಗ್ರಹಿಸಿ ಅಂತಿಮ ಚಾರ್ಜ್​​ಶೀಟ್​ ಸಲ್ಲಿಸುತ್ತೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

2ನೇ ಫೊಕ್ಸೋ ಪ್ರಕರಣ ತನಿಖೆ ನಡೆದಿದೆ:

ತನಿಖಾಧಿಕಾರಿ ಡಿವೈಎಸ್ಪಿ ಅನಿಲ್ 27/10/2022ರಂದು 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ 2ನೇ ಫೊಕ್ಸೋ ಪ್ರಕರಣದಲ್ಲಿ ಈಗಾಗಲೇ ಸಂತ್ರಸ್ತರ ಹೇಳಿಕೆ ದಾಖಲಿಸಲಾಗಿದೆ. ಸಂತ್ರಸ್ತರ ಪೋಷಕರ ಹೇಳಿಕೆಗಳನ್ನೂ ದಾಖಲಿಸಲಾಗಿದೆ. ಎ1 ಮುರುಘಾಶ್ರೀ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗಿದೆ. ಸಂತ್ರಸ್ತರ ಹೇಳಿಕೆ ಆಧರಿಸಿ ಕೆಲವು ಬಾಲಕಿಯರ ಹೇಳಿಕೆ ಪಡೆದಿದ್ದೇವೆ ಎಂದು ಅವರು ಹೇಳಿದ್ದಾರೆ.

ಮುರುಘಾಶ್ರೀಗಳಿಂದ 15ಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:

ಮುರುಘಾಶ್ರೀಗಳಿಂದ 15ಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ದಾಖಲಾಗಿದೆ. ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಅವರನ್ನು ಕರೆಸಿ ಮಾಹಿತಿ ಕೇಳಿದ್ದೇವೆ. ಸಂತ್ರಸ್ತರ ಮಾಹಿತಿ ನೀಡಿದರೆ ತನಿಖೆ ನಡೆಸುತ್ತೇವೆಂದು ತಿಳಿಸಿದ್ದೇವೆ. ಒಡನಾಡಿ ಸಂಸ್ಥೆ, ಮಕ್ಕಳ ಕಲ್ಯಾಣ ಸಮಿತಿ ಸಹಯೋಗದಲ್ಲಿ ತನಿಖೆ ನಡೆಸುವುದಾಗಿ ಮನವಿ ಮಾಡಿದ್ದೇವೆ. ಕೆಲ ಮಾಹಿತಿಯನ್ನು ಒಡನಾಡಿ ಸಂಸ್ಥೆಯವರು ನೀಡಿದ್ದಾರೆ. ಮಾಹಿತಿ ಆಧಾರದ ಮೇಲೆ ನಾವು ತನಿಖೆಗೆ ತೆರಳಿದ್ದೆವು. ಆದರೆ ಸಂತ್ರಸ್ತ ಬಾಲಕಿ ಆ ಸ್ಥಳದಲ್ಲಿ ಸಿಕ್ಕಿಲ್ಲ. ಒಡನಾಡಿ ಸಂಸ್ಥೆಯವರಿಗೂ ಈ ಬಗ್ಗೆ ತಿಳಿಸಿದ್ದೇವೆ. ಸಂತ್ರಸ್ತೆಯರ ಮಾಹಿತಿ ಸಿಕ್ಕರೆ ಖಂಡಿತ ತನಿಖೆ ನಡೆಸುತ್ತೇವೆ ಎಂದು ದುರ್ಗದ ಎಸ್​ಪಿ ಹೇಳಿದರು.

ಮೊದಲ ಪ್ರಕರಣದ ಸಂತ್ರಸ್ತರು ಓರ್ವ ಬಾಲಕಿಯ ರೇಪ್ ಅಂಡ್ ಮರ್ಡರ್ ಆಗಿದೆ ಎಂದಿದ್ದರು. ಆದರೆ ಆಂಧ್ರ ವ್ಯಾಪ್ತಿಯಲ್ಲಿ ಆಕಸ್ಮಿಕ ಸಾವು ಘಟಿಸಿದ್ದು ತಿಳಿದಿದೆ. ರೈಲಿನಿಂದ ಬಿದ್ದು ಸಾವನ್ನಪ್ಪಿರುವ ವರದಿ ಆಗಿದೆ. ಇನ್ನು, ಮಠದಲ್ಲಿ ಡ್ರಗ್ಸ್ ಬಳಕೆ ಆರೋಪ ವಿಚಾರ ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ, ಎಲ್ಲಾ ಮಾಹಿತಿ ಹೇಳಲಾಗದು. ವೈದ್ಯಕೀಯ ಪರೀಕ್ಷೆಯ ಕೆಲ ವರದಿ ಇನ್ನೂ ಬರಬೇಕಿದೆ ಎಂದು ಅವರು ಹೇಳಿದರು.

Published On - 3:48 pm, Mon, 7 November 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ