AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಕ್ಸೋ ಪ್ರಕರಣ: ಮುರುಘಾ ಶ್ರೀ ಸೇರಿ ಮೂವರ ವಿರುದ್ಧ ಆರೋಪ ದೃಢಪಟ್ಟಿದೆ -ಚಿತ್ರದುರ್ಗ ಎಸ್​ಪಿ

ಆದರೆ, ಎ3 ಮಠದ ಉತ್ತರಾಧಿಕಾರಿ ಮತ್ತು ಎ5 ಗಂಗಾಧರಯ್ಯ - ಇವರಿಬ್ಬರ ವಿರುದ್ಧ ಆರೋಪಗಳಿಗೆ ಈವರೆಗೆ ಸಾಕ್ಷ್ಯಾಧಾರ ಲಭ್ಯವಾಗಿಲ್ಲ. ತನಿಖೆ ಜಾರಿಯಲ್ಲಿದ್ದು ಸಾಕ್ಷ್ಯಾಧಾರ ಸಂಗ್ರಹ ಮಾಡುತ್ತಿದ್ದೇವೆ. ಸಾಕ್ಷ್ಯಾಧಾರ ಸಂಗ್ರಹಿಸಿ ಅಂತಿಮ ಚಾರ್ಜ್​​ಶೀಟ್​ ಸಲ್ಲಿಸುತ್ತೇವೆ ಎಂದು ಚಿತ್ರದುರ್ಗ ಎಸ್​ಪಿ ಸ್ಪಷ್ಟಪಡಿಸಿದ್ದಾರೆ.

ಪೋಕ್ಸೋ ಪ್ರಕರಣ: ಮುರುಘಾ ಶ್ರೀ ಸೇರಿ ಮೂವರ ವಿರುದ್ಧ ಆರೋಪ ದೃಢಪಟ್ಟಿದೆ -ಚಿತ್ರದುರ್ಗ ಎಸ್​ಪಿ
ಹೆಚ್ಚುತ್ತಿರುವ ಪೋಕ್ಸೋ ಕೇಸ್ -9ನೇ ತರಗತಿಯಿಂದ ಕಾಯ್ದೆ ಬಗ್ಗೆ ಶಿಕ್ಷಣ, ಪಠ್ಯ ರಚಿಸಲು ಹೈಕೋರ್ಟ್ ಸೂಚನೆ
TV9 Web
| Updated By: ಸಾಧು ಶ್ರೀನಾಥ್​|

Updated on:Nov 07, 2022 | 6:27 PM

Share

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ (Protection of Children from Sexual Offences (POCSO) Act) ಜೈಲುಪಾಲಾಗಿರುವ ಮುರುಘಾ ಶರಣರ (Muruga Mutt seer Shivamurthy Murugha Sharanaru) ವಿರುದ್ಧ ಇಬ್ಬರು ಬಾಲಕಿಯರು ದೂರು ನೀಡಿದ್ದರು. ತನಿಖೆ ಭಾಗಶಃ ಪೂರ್ಣಗೊಂಡಿದ್ದು ಚಾರ್ಜ್​ಶೀಟ್​ ಸಲ್ಲಿಸಲಾಗಿದೆ ಎಂದು ಚಿತ್ರದುರ್ಗದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್​ ಹೇಳಿದ್ದಾರೆ. ಅಕ್ಟೋಬರ್​ 27ರಂದೇ ತನಿಖಾಧಿಕಾರಿ ಅನಿಲ್ ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ. 2ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ. ಚಾರ್ಜ್​ಶೀಟ್​ನ ಸಿಸಿ ನಂಬರ್​ ಬರುವುದು ಬಾಕಿಯಿದೆ. ಈ ಮಧ್ಯೆ, ಎ1 ಡಾ. ಶಿವಮೂರ್ತಿ ಮುರುಘಾ ಶರಣರು, ಎ2 ವಾರ್ಡನ್​ ರಶ್ಮಿ ಮತ್ತು ಎ4 ಪರಮಶಿವಯ್ಯ ವಿರುದ್ಧ ಆರೋಪಗಳು ದೃಢಪಟ್ಟಿವೆ ಎಂದು ಚಿತ್ರದುರ್ಗ ಎಸ್​ಪಿ (Chitradurga SP) ಹೇಳಿದ್ದಾರೆ.

ಆದರೆ, ಎ3 ಮಠದ ಉತ್ತರಾಧಿಕಾರಿ ಮತ್ತು ಎ5 ಗಂಗಾಧರಯ್ಯ – ಇವರಿಬ್ಬರ ವಿರುದ್ಧ ಆರೋಪಗಳಿಗೆ ಈವರೆಗೆ ಸಾಕ್ಷ್ಯಾಧಾರ ಲಭ್ಯವಾಗಿಲ್ಲ. ತನಿಖೆ ಜಾರಿಯಲ್ಲಿದ್ದು ಸಾಕ್ಷ್ಯಾಧಾರ ಸಂಗ್ರಹ ಮಾಡುತ್ತಿದ್ದೇವೆ. ಸಾಕ್ಷ್ಯಾಧಾರ ಸಂಗ್ರಹಿಸಿ ಅಂತಿಮ ಚಾರ್ಜ್​​ಶೀಟ್​ ಸಲ್ಲಿಸುತ್ತೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

2ನೇ ಫೊಕ್ಸೋ ಪ್ರಕರಣ ತನಿಖೆ ನಡೆದಿದೆ:

ತನಿಖಾಧಿಕಾರಿ ಡಿವೈಎಸ್ಪಿ ಅನಿಲ್ 27/10/2022ರಂದು 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ 2ನೇ ಫೊಕ್ಸೋ ಪ್ರಕರಣದಲ್ಲಿ ಈಗಾಗಲೇ ಸಂತ್ರಸ್ತರ ಹೇಳಿಕೆ ದಾಖಲಿಸಲಾಗಿದೆ. ಸಂತ್ರಸ್ತರ ಪೋಷಕರ ಹೇಳಿಕೆಗಳನ್ನೂ ದಾಖಲಿಸಲಾಗಿದೆ. ಎ1 ಮುರುಘಾಶ್ರೀ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗಿದೆ. ಸಂತ್ರಸ್ತರ ಹೇಳಿಕೆ ಆಧರಿಸಿ ಕೆಲವು ಬಾಲಕಿಯರ ಹೇಳಿಕೆ ಪಡೆದಿದ್ದೇವೆ ಎಂದು ಅವರು ಹೇಳಿದ್ದಾರೆ.

ಮುರುಘಾಶ್ರೀಗಳಿಂದ 15ಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:

ಮುರುಘಾಶ್ರೀಗಳಿಂದ 15ಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ದಾಖಲಾಗಿದೆ. ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಅವರನ್ನು ಕರೆಸಿ ಮಾಹಿತಿ ಕೇಳಿದ್ದೇವೆ. ಸಂತ್ರಸ್ತರ ಮಾಹಿತಿ ನೀಡಿದರೆ ತನಿಖೆ ನಡೆಸುತ್ತೇವೆಂದು ತಿಳಿಸಿದ್ದೇವೆ. ಒಡನಾಡಿ ಸಂಸ್ಥೆ, ಮಕ್ಕಳ ಕಲ್ಯಾಣ ಸಮಿತಿ ಸಹಯೋಗದಲ್ಲಿ ತನಿಖೆ ನಡೆಸುವುದಾಗಿ ಮನವಿ ಮಾಡಿದ್ದೇವೆ. ಕೆಲ ಮಾಹಿತಿಯನ್ನು ಒಡನಾಡಿ ಸಂಸ್ಥೆಯವರು ನೀಡಿದ್ದಾರೆ. ಮಾಹಿತಿ ಆಧಾರದ ಮೇಲೆ ನಾವು ತನಿಖೆಗೆ ತೆರಳಿದ್ದೆವು. ಆದರೆ ಸಂತ್ರಸ್ತ ಬಾಲಕಿ ಆ ಸ್ಥಳದಲ್ಲಿ ಸಿಕ್ಕಿಲ್ಲ. ಒಡನಾಡಿ ಸಂಸ್ಥೆಯವರಿಗೂ ಈ ಬಗ್ಗೆ ತಿಳಿಸಿದ್ದೇವೆ. ಸಂತ್ರಸ್ತೆಯರ ಮಾಹಿತಿ ಸಿಕ್ಕರೆ ಖಂಡಿತ ತನಿಖೆ ನಡೆಸುತ್ತೇವೆ ಎಂದು ದುರ್ಗದ ಎಸ್​ಪಿ ಹೇಳಿದರು.

ಮೊದಲ ಪ್ರಕರಣದ ಸಂತ್ರಸ್ತರು ಓರ್ವ ಬಾಲಕಿಯ ರೇಪ್ ಅಂಡ್ ಮರ್ಡರ್ ಆಗಿದೆ ಎಂದಿದ್ದರು. ಆದರೆ ಆಂಧ್ರ ವ್ಯಾಪ್ತಿಯಲ್ಲಿ ಆಕಸ್ಮಿಕ ಸಾವು ಘಟಿಸಿದ್ದು ತಿಳಿದಿದೆ. ರೈಲಿನಿಂದ ಬಿದ್ದು ಸಾವನ್ನಪ್ಪಿರುವ ವರದಿ ಆಗಿದೆ. ಇನ್ನು, ಮಠದಲ್ಲಿ ಡ್ರಗ್ಸ್ ಬಳಕೆ ಆರೋಪ ವಿಚಾರ ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ, ಎಲ್ಲಾ ಮಾಹಿತಿ ಹೇಳಲಾಗದು. ವೈದ್ಯಕೀಯ ಪರೀಕ್ಷೆಯ ಕೆಲ ವರದಿ ಇನ್ನೂ ಬರಬೇಕಿದೆ ಎಂದು ಅವರು ಹೇಳಿದರು.

Published On - 3:48 pm, Mon, 7 November 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?