AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ 1.50 ಕೋಟಿ ರೂ. ದರೋಡೆ ಪ್ರಕರಣ; 10 ಮಂದಿ ಅರೆಸ್ಟ್, ಲಕ್ಷಾಂತರ ಮೌಲ್ಯದ ವಸ್ತುಗಳು ಜಪ್ತಿ

2023ರ ಡಿಸೆಂಬರ್ 03ರಂದು ಈಚಲನಾಗೇನಹಳ್ಳಿ ಬಳಿ ಅಡಿಕೆ ವ್ಯಾಪಾರಿ ಇರ್ಫಾನುಲ್ಲಾ & ಜಾಕೀರ್ ಅವರನ್ನು ಅಡ್ಡಗಟ್ಟಿ ಒಂದೂವರೆ ಕೋಟಿ ದರೋಡೆ ಮಾಡಲಾಗಿತ್ತು. ಈ ಪ್ರಕರಣವನ್ನು ಭೇದಿಸಿ ಪೊಲೀಸರು 10 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 63.25 ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ.

ಚಿತ್ರದುರ್ಗ 1.50 ಕೋಟಿ ರೂ. ದರೋಡೆ ಪ್ರಕರಣ; 10 ಮಂದಿ ಅರೆಸ್ಟ್, ಲಕ್ಷಾಂತರ ಮೌಲ್ಯದ ವಸ್ತುಗಳು ಜಪ್ತಿ
ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: ಆಯೇಷಾ ಬಾನು|

Updated on: Jan 02, 2024 | 9:27 AM

Share

ಚಿತ್ರದುರ್ಗ, ಜ.02: ಚಿತ್ರದುರ್ಗದಲ್ಲಿ 1.50 ಕೋಟಿ ರೂ. ದರೋಡೆ (Robbery) ಆಗಿದ್ದ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸರು (Chitradurga Rural Police) ಭೇದಿಸಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು 10 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 63.25 ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ. ಹಾಗೂ ದರೋಡೆ ಮಾಡಿದ್ದ ಹಣದಲ್ಲಿ ಖರೀದಿಸಿದ್ದ 9 ಲಕ್ಷ ಮೌಲ್ಯದ ಕಾರು, 1.35 ಲಕ್ಷ ಮೌಲ್ಯದ ಬೈಕ್, ಕೃತ್ಯಕ್ಕೆ ಬಳಸಿದ್ದ ಕಾರು, 3 ಬೈಕ್ ವಶಕ್ಕೆ ಪಡೆಯಲಾಗಿದೆ.

2023ರ ಡಿಸೆಂಬರ್ 03ರಂದು ಈಚಲನಾಗೇನಹಳ್ಳಿ ಬಳಿ ಅಡಿಕೆ ವ್ಯಾಪಾರಿ ಇರ್ಫಾನುಲ್ಲಾ & ಜಾಕೀರ್ ಅವರನ್ನು ಅಡ್ಡಗಟ್ಟಿ ಒಂದೂವರೆ ಕೋಟಿ ದರೋಡೆ ಮಾಡಲಾಗಿತ್ತು. ಈ ಪ್ರಕರಣವನ್ನು ಭೇದಿಸಿ ಪೊಲೀಸರು 10 ಆರೋಪಿಗಳನ್ನು ಬಂಧಿಸಿದ್ದಾರೆ. ದಾವಣಗೆರೆಯ ಶಶಿಕಿರಣ್, ಮಂಜುನಾಥ್, ಪ್ರತಾಪ್ ಗೌಡ, ಕಿರಣ್, ಲಿಂಗರಾಜ್, ಬೆಂಗಳೂರಿನ ನವೀನ್, ಹುಸೇನ್, ಶ್ರೀನಿವಾಸ್, ಚಿತ್ರದುರ್ಗದ ಷಫಿವುಲ್ಲಾ, ಸಮೀರ್​​ ಬಾಷಾ ಬಂಧಿತರು. ಆರೋಪಿಗಳಿಂದ ಬೈಕ್, ಕಾರು, ನಗದು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಅಂತರ್ ರಾಜ್ಯ ದರೋಡೆಕೋರರ ಹೆಡೆ ಮುರಿ ಕಟ್ಟಿದ ಬೀದರ್ ಪೊಲೀಸ್: 94 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ

ಘಟನೆ ವಿವರ

ಡಿಸೆಂಬರ್ 3 ರಂದು ಚಿತ್ರದುರ್ಗ ತಾಲ್ಲೂಕು ಹೊಸಹಳ್ಳಿ ಗ್ರಾಮದ ಅಡಿಕೆ ವ್ಯಾಪಾರಿ ಮಹಮ್ಮದ್ ಇರ್ಫಾನುಲ್ಲಾ ತನ್ನ ಸ್ನೇಹಿತ ಜಾಕೀರ್ ಅವರೊಂದಿಗೆ ಹೈದರಾಬಾದ್‍ಗೆ ಹೋಗಿ ಅಡಿಕೆ ವ್ಯಾಪಾರ ಮಾಡಿ 1.50 ಕೋಟಿ ರೂ ಹಣ ಪಡೆದುಕೊಂಡು, ಹೈದರಾಬಾದ್‍ನಿಂದ ಡಿಸೆಂಬರ್ 4 ರಂದು ಚಿತ್ರದುರ್ಗಕ್ಕೆ ಹಿಂತಿರುಗಿದ್ದರು. ಆದರೆ ಈಚಲನಾಗೇನಹಳ್ಳಿ ಬಳಿ ಕಾರನ್ನು ರಸ್ತೆಗೆ ಅಡ್ಡ ನಿಲ್ಲಿಸಿದ 4 ಜನ ದರೋಡೆಕೋರರು ಮಹಮ್ಮದ್ ಇರ್ಪಾನುಲ್ಲಾ ಮತ್ತು ಆತನ ಸ್ನೇಹಿತನ ಮೇಲೆ ಹಲ್ಲೆ ಮಾಡಿ ಚಾಕು ತೋರಿಸಿ ಬೆದರಿಸಿ ಅವರ ಬಳಿಯಿದ್ದ ಎರಡು ಹಣದ ಬ್ಯಾಗ್‍ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ದೂರು ದಾಖಲಾಗಿತ್ತು.

ಈ ಪ್ರಕರಣದಲ್ಲಿ ಕಳುವಾದ ಹಣ ಮತ್ತು ಆರೋಪಿತರನ್ನು ಪತ್ತೆ ಮಾಡಲು ಪೊಲೀಸ್ ಅಧೀಕ್ಷಕರವರ ಮಾರ್ಗದರ್ಶನದಲ್ಲಿ ಚಿತ್ರದುರ್ಗ ಉಪವಿಭಾಗದ ಉಪಾಧೀಕ್ಷಕರಾದ ಅನಿಲ್ ಕುಮಾರ್‌, ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ.ಮುದ್ದರಾಜ.ವೈ ಹಾಗೂ ಸಿಬ್ಬಂದಿ ಪ್ರಕರಣದ ತನಿಖೆ ಕೈಗೊಂಡಿದ್ದು, 10 ಮಂದಿ ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ