AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ಶೌಚಾಲಯ ಗೋಡೆಗೆ ಗೌಪ್ಯ ಬಾಗಿಲು ನಿರ್ಮಿಸಿ ವೇಶ್ಯಾವಾಟಿಕೆ! ಮೂವರು ಆರೋಪಿಗಳು ಅರೆಸ್ಟ್

ಶೌಚಾಲಯ ಗೋಡೆಗೆ ಗೌಪ್ಯ ಬಾಗಿಲು ನಿರ್ಮಿಸಿ ಪ್ರವೇಶಕ್ಕೆ ವ್ಯವಸ್ಥೆ ಮಾಡಿದ್ದರು. ದಾಳಿ ವೇಳೆ ವೇಶ್ಯಾವಾಟಿಕೆ ಅಡ್ಡೆಯ ಕಳ್ಳ ಬಾಗಿಲು ರಹಸ್ಯ ಬಯಲಾಗಿದೆ.

ಚಿತ್ರದುರ್ಗದಲ್ಲಿ ಶೌಚಾಲಯ ಗೋಡೆಗೆ ಗೌಪ್ಯ ಬಾಗಿಲು ನಿರ್ಮಿಸಿ ವೇಶ್ಯಾವಾಟಿಕೆ! ಮೂವರು ಆರೋಪಿಗಳು ಅರೆಸ್ಟ್
ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ
TV9 Web
| Edited By: |

Updated on:May 07, 2022 | 8:19 AM

Share

ಚಿತ್ರದುರ್ಗ: ಹೊಳಲ್ಕೆರೆಯಲ್ಲಿ ವೇಶ್ಯಾವಾಟಿಕೆ (Prostitution) ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಓರ್ವ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳು ಅರೆಸ್ಟ್ (Arrest) ಆಗಿದ್ದಾರೆ. ಹೊರ ರಾಜ್ಯದ ಯುವತಿಯರನ್ನು ಬಳಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಶೌಚಾಲಯ ಗೋಡೆಗೆ ಗೌಪ್ಯ ಬಾಗಿಲು ನಿರ್ಮಿಸಿ ಪ್ರವೇಶಕ್ಕೆ ವ್ಯವಸ್ಥೆ ಮಾಡಿದ್ದರು. ದಾಳಿ ವೇಳೆ ವೇಶ್ಯಾವಾಟಿಕೆ ಅಡ್ಡೆಯ ಕಳ್ಳ ಬಾಗಿಲು ರಹಸ್ಯ ಬಯಲಾಗಿದೆ. ಮೈಸೂರಿನ ಒಡನಾಡಿ ಸಂಸ್ಥೆ ಮಾಹಿತಿ ಮೇರೆಗೆ ಚಿತ್ರದುರ್ಗ ಡಿಸಿಐಬಿ ಇನ್ಸ್​ಪೆಕ್ಟರ್​ ಕಿರಣ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಸಾರ್ವಜನಿಕರ ಬಳಿ ಹಣ ವಸೂಲಿ ಮಾಡುತ್ತಿದ್ದವರು ಬಂಧನ: ಬೆಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆಗೆ ಟಿಪ್ಸ್ ನೀಡುತ್ತೇವೆಂದು ವಂಚಿಸಿ ಸಾರ್ವಜನಿಕರ ಬಳಿ ಹಣ ವಸೂಲಿ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರೆಹಮತ್ ಉಲ್ಲಾ, ಮಲ್ಲಯ್ಯ ಸ್ವಾಮಿ, ದುರ್ಗಪ್ಪ ಬಂಧಿತರು. ಮೇಕ್ ಇನ್ ಪ್ರಾಫಿಟ್ ಎಂಬ ಕಂಪನಿ ಹೆಸರು ಹೇಳಿ ವಂಚನೆ ಮಾಡಿದ್ದಾರೆ. ಬಂಧಿತರು 2.15 ಲಕ್ಷ ರೂ. ಹಣ ಬ್ಯಾಂಕ್ ಖಾತೆಗೆ ಹಾಕಿಸಿಕೊಂಡಿದ್ದಾರೆ. ಈಶಾನ್ಯ ವಿಭಾಗದ ಸಿಇಎನ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಂದ 3 ಮೊಬೈಲ್, 6 ಸಿಮ್ ಕಾರ್ಡ್​ನ ವಶಕ್ಕೆ ಪಡೆದಿದ್ದಾರೆ.

ಪಡಿತರ ಅಕ್ಕಿ ಅಕ್ರಮ ಸಾಗಾಟ: ರಾಯಚೂರು: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ನಡೆದಿದೆ. ದಾಳಿ ವೇಳೆ 296 ಕ್ವಿಂಟಾಲ್​​ನ 605 ಅಕ್ಕಿ ಮೂಟೆಗಳನ್ನ ಜಪ್ತಿ ಮಾಡಲಾಗಿದ್ದು, ಲಾರಿ ಚಾಲಕ ನಾಗೇಶ್ ಮುದಗಲ್​ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಕ್ಕಿ ದಂಧೆ ನಡೆಸುತ್ತಿದ್ದರ ಬಗ್ಗೆ ಆರೋಪಿ ನಾಗೇಶ್ ಒಪ್ಪಿಕೊಂಡಿದ್ದಾನೆ. ಸದ್ಯ ಈ ಬಗ್ಗೆ ಮುದಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ

Honour killing in Hyderabad: ನಿಮ್ಮ ಟೈಮ್​ಲೈನ್; ಮುಸ್ಲಿಂ ಸಮುದಾಯದೊಳಗೂ ಜಾತಿ ಶ್ರೇಷ್ಠತೆಯ ವ್ಯಸನವಿದೆ

Sri Lanka: ಆರ್ಥಿಕ ಬಿಕ್ಕಟ್ಟು: ಶ್ರೀಲಂಕಾದಲ್ಲಿ 5 ವಾರಗಳಲ್ಲಿ ಎರಡನೇ ಬಾರಿಗೆ ತುರ್ತು ಪರಿಸ್ಥಿತಿ ಜಾರಿ

Published On - 8:12 am, Sat, 7 May 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್