AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರುಘಾಶ್ರೀ ವಿರುದ್ಧ ಸುಳ್ಳು ದೂರು ಕೊಡಲು ಬಾಲಕಿಗೆ ಪ್ರಚೋದನೆ: ಮಠದ ಅಡುಗೆ ಸಹಾಯಕಿ ಅರೆಸ್ಟ್

ಮುರುಘಾಶ್ರೀ ವಿರುದ್ಧ ಸುಳ್ಳು ದೂರು ಕೊಡಲು ಬಾಲಕಿಗೆ ಪ್ರಚೋದನೆ ನೀಡಿದ ಪ್ರಕಣಕ್ಕೆ ಸಂಬಂಧಿಸಿದಂತೆ ಅಡುಗೆ ಸಹಾಯಕಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಮುರುಘಾಶ್ರೀ ವಿರುದ್ಧ ಸುಳ್ಳು ದೂರು ಕೊಡಲು ಬಾಲಕಿಗೆ ಪ್ರಚೋದನೆ: ಮಠದ ಅಡುಗೆ ಸಹಾಯಕಿ ಅರೆಸ್ಟ್
ಮುರುಘಾ ಶರಣರು
TV9 Web
| Edited By: |

Updated on:Nov 11, 2022 | 6:39 PM

Share

ಚಿತ್ರದುರ್ಗ : ಚಿತ್ರದುರ್ಗದ ಮುರುಘಾ ಮಠದ (Chitradurga Muruga Mutt)  ಶಿವಮೂರ್ತಿ ಶರಣರ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳ ವಿರುದ್ಧ ದೂರು ನೀಡುವಂತೆ ಬಾಲಕಿಗೆ ಕುಮ್ಮಕ್ಕು ನೀಡಿದ ಆರೋಪದ ಮೇರೆಗೆ ಚಿತ್ರದುರ್ಗ ಪೊಲೀಸರು (Chitradurga rural Police) ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ ಸುಳ್ಳು ದೂರಿಗೆ ಪಿತೂರಿ ಪ್ರಕರಣದಲ್ಲಿ ಮಠದ ಅಡುಗೆ ಸಹಾಯಕಿ ಇಂದು(ನ.11) ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಮುರುಘಾಶ್ರೀ ವಿರುದ್ಧ ಎರಡನೇ ಪೋಕ್ಸೋ ದೂರು ನೀಡಿದ್ದ ಈ ಮಹಿಳೆಯನ್ನು ಪೊಲೀಸರು ವಿಚಾರಣೆಗೆಂದು ನಿನ್ನೆ(ನ.10) ಮೈಸೂರಿನ ಒಡನಾಡಿ ಸಂಸ್ಥೆಯಿಂದ ಕರೆತಂದಿದ್ದರು. ಇಂದು ವಿಚಾರಣೆ ನಡೆಸಿದ ಬಳಿಕ ಅರೆಸ್ಟ್ ಮಾಡಿದ್ದಾರೆ.

ಮುರುಘಾ ಶ್ರೀಗಳ ಮತ್ತಷ್ಟು ಕಾಮಕೂಟ ಬಿಚ್ಚಿಟ್ಟ ಆಪ್ತರು: ಅಡುಗೆಭಟ್ಟ, ಸಹಾಯಕ, ಆಫೀಸ್ ಬಾಯ್ ಹೇಳಿಕೆ ಇಲ್ಲಿದೆ

ವ್ಯಕ್ತಿಯೊಬ್ಬ ಮುರುಘಾ ಮಠದ ಹಾಸ್ಟೆಲ್‌ನಲ್ಲಿ ಅಭ್ಯಾಸ ಮಾಡುತ್ತಿದ್ದ ಬಾಲಕಿಯೊಬ್ಬಳಿಗೆ ಕರೆ ಮಾಡಿ ಶ್ರೀಗಳ ವಿರುದ್ಧ ಸುಳ್ಳು ದೂರು ಕೊಡುವಂತೆ ಮಾತನಾಡಿದ್ದ ಆಡಿಯೊವೊಂದು ವೈರಲ್‌ ಆಗಿತ್ತು. ಈ ಸಂಬಂಧ ಮುರುಘಾಮಠದ ಉಸ್ತುವಾರಿ ಬಸವಪ್ರಭು ಶ್ರೀಗಳು ಚಿತ್ರದುರ್ಗದ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು, ಆ ವ್ಯಕ್ತಿ ಯಾರು ಎಂದು ಪತ್ತೆ ಹಚ್ಚಲು ಆಗ್ರಹಿಸಿದ್ದರು. ಈ ಸಂಬಂಧ ತನಿಖೆ ನಡೆಸಿದ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ ಜೆ ಎಂ ವಿದ್ಯಾಪೀಠದಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಅಥಣಿ ಮೂಲದ ಬಸವರಾಜೇಂದ್ರನನ್ನು ಬಂಧಿಸಿದ್ದಾರೆ. ಇದೀಗ ಅಡುಗೆ ಸಹಾಯಕಿಯನ್ನು ಅರೆಸ್ಟ್ ಮಾಡಿದ್ದಾರೆ.

ಈಗ ಮುರುಘಾ ಶರಣರ ವಿರುದ್ಧ ಸುಳ್ಳು ದೂರು ನೀಡುವಂತೆ ವ್ಯಕ್ತಿಯೊಬ್ಬರು ಕರೆ ಮಾಡಿರುವ ಆಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ಸಂಭಾಷಣೆ 14 ನಿಮಿಷ 15 ಸೆಕೆಂಡ್‌ ಕಾಲ ಇದ್ದು, ಕರೆ ಮಾಡಿದ ವ್ಯಕ್ತಿ ಬಾಲಕಿಗೆ ಸುಳ್ಳು ದೂರು ನೀಡುವಂತೆ ಪ್ರಚೋದನೆ ಮಾಡಿದ್ದಲ್ಲದೆ, ಸಹಾಯ ಮಾಡುವುದಾಗಿ ಆಮಿಷವನ್ನೂ ಒಡ್ಡಿದ್ದಾನೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:38 pm, Fri, 11 November 22

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ