ಕ್ಯಾನ್ಸರ್ ಪೀಡಿತನಿಂದ ವಿದ್ಯಾರ್ಥಿನಿ ಕೊಲೆ ಕೇಸ್​: ಪ್ರೀ ಪ್ಲ್ಯಾನ್ಡ್ ಮರ್ಡರ್ ರಹಸ್ಯ ಬಯಲು

ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿ ವರ್ಷಿತಾಳ ಕೊಲೆ ಕೇಸ್​ನಲ್ಲಿ ಆಕೆಯ ಪ್ರಿಯಕರ ಚೇತನ್​ನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ಕೂಡ ಚುರುಕಾಗಿದೆ. ಹೀಗಿರುವಾಗ ಆರೋಪಿ ಯುವತಿ ಕೊಲೆಗೆ ಸಂಚು ಹಾಕಿದ್ದ ರಹಸ್ಯ ಬಯಲಾಗಿದೆ. ವರ್ಷಿತಾ ಮತ್ತು ಚೇತನ್ ಜೊತೆಗಿದ್ದ ಕೊನೆ ಕ್ಷಣದ ಸಿಸಿಟಿವಿ ದೃಶ್ಯಗಳು ಪತ್ತೆ ಆಗಿವೆ.

ಕ್ಯಾನ್ಸರ್ ಪೀಡಿತನಿಂದ ವಿದ್ಯಾರ್ಥಿನಿ ಕೊಲೆ ಕೇಸ್​: ಪ್ರೀ ಪ್ಲ್ಯಾನ್ಡ್ ಮರ್ಡರ್ ರಹಸ್ಯ ಬಯಲು
ಪ್ರಾತಿನಿಧಿಕ ಚಿತ್ರ
Edited By:

Updated on: Aug 21, 2025 | 12:12 PM

ಚಿತ್ರದುರ್ಗ, ಆಗಸ್ಟ್​ 21: ಕ್ಯಾನ್ಸರ್ ಮೂರನೇ ಹಂತದಲ್ಲಿರುವ ಚೇತನ್​​ನಿಂದಲೇ ವಿದ್ಯಾರ್ಥಿನಿ (student) ವರ್ಷಿತಾ(19) ಕೊಲೆ (kill) ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಡಿವೈಎಸ್​ಪಿ ಪಿ.ದಿನಕರ್, ಗ್ರಾಮಾಂತರ ಠಾಣೆ ಸಿಪಿಐ ಮುದ್ದುರಾಜ್, ಪಿಎಸ್​ಐ ಸುರೇಶ್ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದೆ. ಆರೋಪಿಯ ಪ್ರತಿ ಜಾಡು ಹಿಡಿದು ತನಿಖೆ ಮಾಡಲಾಗುತ್ತಿದೆ. ಈ ಮಧ್ಯೆ ಕಿರಾತಕ ಚೇತನ್ ಪ್ರೀ ಪ್ಲ್ಯಾನ್ಡ್  ಮರ್ಡರ್ ರಹಸ್ಯ ಬಯಲಾಗಿದೆ. ಟಿವಿ9ಗೆ ವರ್ಷಿತಾ ಮತ್ತು ಚೇತನ್ ಜೊತೆಗಿದ್ದ ಕೊನೆ ಕ್ಷಣದ ಸಿಸಿಟಿವಿ ದೃಶ್ಯ ಲಭ್ಯವಾಗಿದೆ.

ಕೊಲೆಗೆ ಸಂಚು ರೂಪಿಸಿದ್ದ ಚೇತನ್

ವರ್ಷಿತಾ ಮತ್ತು ಚೇತನ್ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರಂತೆ. ಇತ್ತೀಚೆಗೆ ಚೇತನ್​ಗೆ ಕ್ಯಾನ್ಸರ್ ಇರೋದು ಗೊತ್ತಾಗಿದೆ. ಬಳಿಕ ವರ್ಷಿತಾ ದೂರಾಗಿದ್ದು, ಮತ್ತೊಬ್ಬನನ್ನ ಪ್ರೀತಿಸುತ್ತಿದ್ದಳಂತೆ. ಈ ವಿಷಯ ತಿಳಿದು ಕೆರಳಿದ ಚೇತನ್, ನಯವಾಗಿ ಆಕೆಯನ್ನ ಗೋನೂರು ಬಳಿ ಕರೆದೊಯ್ದಿದ್ದಾನೆ. ಅಲ್ಲಿ ಆಕೆಯ ಕತ್ತು ಹಿಸುಕಿ ಕೊಂದಿದ್ದು, ಪೆಟ್ರೋಲ್ ಹಾಕಿ ಶವ ಸುಟ್ಟಿರುವುದಾಗಿ ಒಪ್ಪಿಕೊಂಡಿದ್ದಾನೆ.

ಇದನ್ನೂ ಓದಿ: ಚಿತ್ರದುರ್ಗ: ಕ್ಯಾನ್ಸರ್ ಮೂರನೇ ಹಂತದಲ್ಲಿರುವ ಯುವಕನಿಂದಲೇ ವಿದ್ಯಾರ್ಥಿನಿಯ ಕೊಲೆ

ಇದನ್ನೂ ಓದಿ
ಚಿಕ್ಕಬಳ್ಳಾಪುರ: ಕಿಡ್ಯ್ನಾಪ್​​ ಆ್ಯಂಡ್​ ಮರ್ಡರ್​ ಕೇಸ್​ ಭೇದಿಸಿದ ಪೊಲೀಸ್​
ಕ್ಯಾನ್ಸರ್ ಮೂರನೇ ಹಂತದಲ್ಲಿರುವ ಯುವಕನಿಂದಲೇ ವಿದ್ಯಾರ್ಥಿನಿಯ ಕೊಲೆ
ವರ್ಷಿತಾ ಅನುಭವಿಸಿದ ಯಾತನೆ ಯಾರಿಗೂ ಬೇಡ: ಜ್ಯೋತಿ ತಿಪ್ಪೇಸ್ವಾಮಿ
ಕರ್ನಾಟಕದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಭಾರಿ ಹೆಚ್ಚಳ

ಕೊಲೆ ಸಂಚು ರೂಪಿಸಿದ್ದ ಚೇತನ್​​ ಚಿತ್ರದುರ್ಗ ನಗರದ ತುರುವನೂರು ರಸ್ತೆ ಬಳಿಗೆ ಕರೆಸಿದ್ದಾನೆ. ಆಕೆ ಬರುವ ಮುನ್ನ ತುರುವನೂರು ರಸ್ತೆಯ ಖಾಸಗಿ ಪೆಟ್ರೋಲ್ ಬಂಕ್​​ನಲ್ಲಿ ಪೆಟ್ರೋಲ್ ಖರೀದಿಸಿದ್ದ. ಪ್ಯಾಂಟ್​ ಜೇಬಿನಲ್ಲಿ ಪೆಟ್ರೋಲ್ ಬಾಟಲಿ ಇರಿಸಿಕೊಂಡಿದ್ದ. ಇತ್ತ ಪ್ರಿಯಕರನ ಕ್ರಿಮಿನಲ್ ಬುದ್ಧಿ ಅರಿಯದ ವರ್ಷಿತಾ, ಆತನ ಬಣ್ಣದ ಮಾತಿಗೆ ಮರಳಾಗಿ ಬೆನ್ನುಹತ್ತಿದ್ದಳು.

ವರ್ಷಿತಾ ಬಂದ ಬಳಿಕ ನಡೆದುಕೊಂಡೇ ಗೋನೂರು ಕಡೆಗೆ ಪಯಣ ಬೆಳೆಸಿದ್ದಾರೆ. ಚೇತನ್ ಮುಂದೆ ನಡೆದರೆ ಹಿಂದೆ ವರ್ಷಿತಾ ಹೆಜ್ಜೆ ಹಾಕಿದ್ದಾಳೆ. ಗೋನೂರು ಬಳಿಗೆ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಹೊಡೆದು, ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ. ಬಳಿಕ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದ. ಆ.18ರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಕೃತ್ಯ ನಡೆದಿದೆ.

ಇದನ್ನೂ ಓದಿ: ನನ್ನ ಮಗಳು ವರ್ಷಿತಾಳ ಹಂತಕರನ್ನು ಗಲ್ಲಿಗೇರಿಸಬೇಕು: ಜ್ಯೋತಿ ತಿಪ್ಪೇಸ್ವಾಮಿ, ವರ್ಷಿತಾ ತಾಯಿ

ಅದೇ ದಿನ ಸಂಜೆ ಬೈಕಿನಲ್ಲಿ ಹಾಲಿನ ಕ್ಯಾನ್ ಜತೆಗೆ ಬಂದಿದ್ದ ಚೇತನ್, ನಗರದಲ್ಲಿ ಹಾಲು ಹಾಕಿದ ಬಳಿಕ ಮತ್ತೆ ಪೆಟ್ರೋಲ್ ಖರಿದಿಸಿ ಮತ್ತೆ ಘಟನಾ ಸ್ಥಳಕ್ಕೆ ತೆರಳಿದ್ದಾನೆ. ಅರೆಬೆಂದಿದ್ದ ಮೃತ ದೇಹಕ್ಕೆ ಪೆಟ್ರೋಲ್ ಸುರಿದು ಮತ್ತೆ ಬೆಂಕಿ ಹಚ್ಚಿದ್ದಾನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us