AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದ ಮಂಗಳಮುಖಿ ಬದುಕಿಗೆ ಕಳ್ಳರಿಂದ ಕೊಳ್ಳಿ

ಕೊಳಹಾಳ್ ಗ್ರಾಮದ ಬಳಿ ಮಂಗಳಮುಖಿ (ತೃತೀಯ ಲಿಂಗಿ) ಅರುಂಧತಿ ಮತ್ತಿತರೆ ಆರು ಜನರು ಸೇರಿ ಕುರಿ-ಮೇಕೆ ಸಾಕಣೆ ಆರಂಭಿಸಿದ್ದರು. ಕಳೆದ ನಾಲ್ಕು ವರ್ಷದಿಂದ ಸ್ವಾವಲಂಬಿಯಾಗಿ ಬದುಕುತ್ತಿದ್ದರು. ನಾಲ್ಕು ದಿನದ ಹಿಂದೆ ಅರುಂಧತಿ ಚಿಕ್ಕಮಗಳೂರಿಗೆ ತೆರಳಿದ್ದರು. ವಾಪಸ್ ಬರುವುದರೊಳಗೆ ಶೆಡ್ ನಲ್ಲಿದ್ದ ಕುರಿ ಮತ್ತು ಮೇಕೆಗಳನ್ನು ಕದ್ದು ಕಳ್ಳರು ಎಸ್ಕೇಪ್ ಆಗಿದ್ದಾರೆ.

ಚಿತ್ರದುರ್ಗ: ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದ ಮಂಗಳಮುಖಿ ಬದುಕಿಗೆ ಕಳ್ಳರಿಂದ ಕೊಳ್ಳಿ
ಚಿತ್ರದುರ್ಗ: ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದ ಮಂಗಳಮುಖಿ ಬದುಕಿಗೆ ಕಳ್ಳರಿಂದ ಕೊಳ್ಳಿ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Oct 30, 2023 | 10:25 PM

Share

ಚಿತ್ರದುರ್ಗ, ಅಕ್ಟೋಬರ್ 30: ತೃತೀಯ ಲಿಂಗಿಗಳನ್ನು ಬಹುತೇಕರು ತಿರಸ್ಕಾರ ಭಾವನೆಯಿಂದ ನೋಡುತ್ತಾರೆ. ಈ ಮಧ್ಯೆ, ಅದೊಂದು ಗುಂಪು ಕೋಟೆನಾಡು ಚಿತ್ರದುರ್ಗದಲ್ಲಿ (Chitradurga) ಸ್ವಾವಲಂಬಿ ಬದುಕಿಗೆ ಮುನ್ನುಡಿ ಬರೆದು ಗಮನ ಸೆಳೆದಿತ್ತು. ಆದ್ರೆ, ಸ್ವಾವಲಂಬನೆಯ ಬದುಕಿಗೂ ಕಳ್ಳರು ಕೊಳ್ಳಿಯಿಟ್ಟ ಖೇದಕರ ಘಟನೆ ಚಿತ್ರದುರ್ಗ ತಾಲೂಕಿನ ಕೊಳಹಾಳ್ ಗ್ರಾಮದ ಬಳಿ ನಡೆದಿದೆ. ಕುರಿ-ಮೇಕೆ ಸಾಕಣೆ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದ ಮಂಗಳಮುಖಿ ಬದುಕಿಗೆ ಕಳ್ಳರು (Thieves) ಕೊಳ್ಳಿಯಿಟ್ಟಿದ್ದಾರೆ. ಇದರಿಂದಾಗಿ ಕಂಗಾಲಾದ ತೃತೀಯ ಲಿಂಗಿಗಳೀಗ ಪೊಲೀಸರ ಮೊರೆ ಹೋಗಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನ್ಯಾಯಕ್ಕಾಗಿ ಮನವಿ ಸಲ್ಲಿಸಿದ್ದಾರೆ.

ಕೊಳಹಾಳ್ ಗ್ರಾಮದ ಬಳಿ ಮಂಗಳಮುಖಿ (ತೃತೀಯ ಲಿಂಗಿ) ಅರುಂಧತಿ ಮತ್ತಿತರೆ ಆರು ಜನರು ಸೇರಿ ಕುರಿ-ಮೇಕೆ ಸಾಕಣೆ ಆರಂಭಿಸಿದ್ದರು. ಕಳೆದ ನಾಲ್ಕು ವರ್ಷದಿಂದ ಸ್ವಾವಲಂಬಿಯಾಗಿ ಬದುಕುತ್ತಿದ್ದರು. ನಾಲ್ಕು ದಿನದ ಹಿಂದೆ ಅರುಂಧತಿ ಚಿಕ್ಕಮಗಳೂರಿಗೆ ತೆರಳಿದ್ದರು. ವಾಪಸ್ ಬರುವುದರೊಳಗೆ ಶೆಡ್ ನಲ್ಲಿದ್ದ ಕುರಿ ಮತ್ತು ಮೇಕೆಗಳನ್ನು ಕದ್ದು ಕಳ್ಳರು ಎಸ್ಕೇಪ್ ಆಗಿದ್ದಾರೆ. ಪರಿಣಾಮ ಅರುಂಧತಿಯ ಬದುಕು ಮತ್ತೆ ಬೀದಿಗೆ ಬಂದಂತಾಗಿದೆ. ಈ ಬಗ್ಗೆ ಭರಮಸಾಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆದ್ರೆ, ಈವರೆಗೆ ಆರೋಪಿಗಳು ಪತ್ತೆ ಆಗಿಲ್ಲ. ನ್ಯಾಯವೂ ಸಿಕ್ಕಿಲ್ಲ. ಹೀಗಾದರೆ ನಾವು ಮತ್ತೆ ಬೆಗ್ಗಿಂಗ್ ಮತ್ತು ಸೆಕ್ಸ್ ವರ್ಕ್ ಗೆ ಇಳಿಯಬೇಕೇ ಎಂದು ಅರುಂಧತಿ ನೋವಿನಿಂದ ಪ್ರಶ್ನೆ ಮಾಡುತ್ತಿದ್ದಾರೆ.

ಇನ್ನು ಅರುಂಧತಿಗೆ ಬೆಂಗಳೂರಿನ ಲಿಂಗತ್ವ ಮತ್ತು ಲೈಂಗಿಕ ವೈವಿಧ್ಯತೆಗಾಗಿ ಚಳುವಳಿ ಸಂಘಟನೆ ಸಾಥ್ ನೀಡಿದೆ. ಸಂಘಟನೆಯ ಮುಖ್ಯಸ್ಥೆ ವೈಶಾಲಿ ಮತ್ತಿತರರು ಅರುಂಧತಿ ಪರ ನಿಂತಿ ಜಿಲ್ಲಾ ಪೊಲೀಸ್ ಕಚೇರಿಗೆ ಆಗಮಿಸಿ ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ ಅವ್ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಈ ವೇಳೆ ಪ್ರತಿಕ್ರಿಯಿಸಿದ ಲಿಂಗತ್ವ ಮತ್ತು ಲೈಂಗಿಕ ವೈವಿಧ್ಯತೆಗಾಗಿ ಚಳುವಳಿಯ ಮುಖ್ಯಸ್ಥೆ ವೈಶಾಲಿ, ಅನೇಕರು ವೇದಿಕೆಗಳನ್ನು ನಮ್ಮ ಪರ ಭಾಷಣ ಮಾಡುತ್ತಾರೆ. ಆದ್ರೆ, ಸ್ವಾವಲಂಬಿ, ಸ್ವಾಭಿಮಾನಿ ಬದುಕು ನಡೆಸುತ್ತಿದ್ದ ಅರುಂಧತಿ ಬದುಕು ಬೀದಿಗೆ ಬಂದಿದೆ. ಸುಮಾರು 8ಲಕ್ಷ ಮೌಲ್ಯದ ಕುರಿ-ಮೇಕೆಯನ್ನು ಕಳ್ಳತನ ಮಾಡಲಾಗಿದೆ. ಈ ಕೃತ್ಯದ ಹಿಂದೆ ಶೋಷಣೆ ಮನೋಸ್ಥಿತಿ ಇದ್ದೇ ಇದೆ. ಈ ಸಂದರ್ಭದಲ್ಲಿ ಯಾರೂ ಸಹ ಅರುಂಧತಿಯ ನೆರವಿಗೆ ಬಂದಿಲ್ಲ ಎಂದು ನೋವು ತೋಡಿಕೊಂಡರು.

ಇದನ್ನೂ ಓದಿ: 30 ಟಿಎಂಸಿ ಸಂಗ್ರಹ ಸಾಮರ್ಥ್ಯದ ಆ ಜಲಾಶಯದಲ್ಲಿ 22 ಟಿಎಂಸಿ ನೀರಿದೆ, ಬರಗಾಲದ ರೈತಾಪಿ ವರ್ಗ ಫುಲ್ ಖುಷ್​!

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದಲ್ಲಿ ಸ್ವಾವಲಂಬಿ ಬದುಕು ನಡೆಸುತ್ತಿದ್ಧ ಅರುಂಧತಿ ಬದುಕಿಗೆ ಕಳ್ಳರು ಕೊಳ್ಳಿ ಇಟ್ಟಿದ್ದಾರೆ. ಚಿತ್ರದುರ್ಗ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸ್ರು ಶೀಘ್ರ ಗತಿಯಲ್ಲಿ ಕಳ್ಳರನ್ನು ಪತ್ತೆ ಹಚ್ಚಬೇಕಿದೆ. ಸ್ವಾಭಿಮಾನಿ, ಸ್ವಾವಲಂಬಿ ಬದುಕು ನಡೆಸಿ ಮಾದರಿಯಾಗಿದ್ದ ಅರುಂಧತಿಗೆ ನ್ಯಾಯ ಒದಗಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್