AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದ ಮಂಗಳಮುಖಿ ಬದುಕಿಗೆ ಕಳ್ಳರಿಂದ ಕೊಳ್ಳಿ

ಕೊಳಹಾಳ್ ಗ್ರಾಮದ ಬಳಿ ಮಂಗಳಮುಖಿ (ತೃತೀಯ ಲಿಂಗಿ) ಅರುಂಧತಿ ಮತ್ತಿತರೆ ಆರು ಜನರು ಸೇರಿ ಕುರಿ-ಮೇಕೆ ಸಾಕಣೆ ಆರಂಭಿಸಿದ್ದರು. ಕಳೆದ ನಾಲ್ಕು ವರ್ಷದಿಂದ ಸ್ವಾವಲಂಬಿಯಾಗಿ ಬದುಕುತ್ತಿದ್ದರು. ನಾಲ್ಕು ದಿನದ ಹಿಂದೆ ಅರುಂಧತಿ ಚಿಕ್ಕಮಗಳೂರಿಗೆ ತೆರಳಿದ್ದರು. ವಾಪಸ್ ಬರುವುದರೊಳಗೆ ಶೆಡ್ ನಲ್ಲಿದ್ದ ಕುರಿ ಮತ್ತು ಮೇಕೆಗಳನ್ನು ಕದ್ದು ಕಳ್ಳರು ಎಸ್ಕೇಪ್ ಆಗಿದ್ದಾರೆ.

ಚಿತ್ರದುರ್ಗ: ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದ ಮಂಗಳಮುಖಿ ಬದುಕಿಗೆ ಕಳ್ಳರಿಂದ ಕೊಳ್ಳಿ
ಚಿತ್ರದುರ್ಗ: ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದ ಮಂಗಳಮುಖಿ ಬದುಕಿಗೆ ಕಳ್ಳರಿಂದ ಕೊಳ್ಳಿ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Oct 30, 2023 | 10:25 PM

Share

ಚಿತ್ರದುರ್ಗ, ಅಕ್ಟೋಬರ್ 30: ತೃತೀಯ ಲಿಂಗಿಗಳನ್ನು ಬಹುತೇಕರು ತಿರಸ್ಕಾರ ಭಾವನೆಯಿಂದ ನೋಡುತ್ತಾರೆ. ಈ ಮಧ್ಯೆ, ಅದೊಂದು ಗುಂಪು ಕೋಟೆನಾಡು ಚಿತ್ರದುರ್ಗದಲ್ಲಿ (Chitradurga) ಸ್ವಾವಲಂಬಿ ಬದುಕಿಗೆ ಮುನ್ನುಡಿ ಬರೆದು ಗಮನ ಸೆಳೆದಿತ್ತು. ಆದ್ರೆ, ಸ್ವಾವಲಂಬನೆಯ ಬದುಕಿಗೂ ಕಳ್ಳರು ಕೊಳ್ಳಿಯಿಟ್ಟ ಖೇದಕರ ಘಟನೆ ಚಿತ್ರದುರ್ಗ ತಾಲೂಕಿನ ಕೊಳಹಾಳ್ ಗ್ರಾಮದ ಬಳಿ ನಡೆದಿದೆ. ಕುರಿ-ಮೇಕೆ ಸಾಕಣೆ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದ ಮಂಗಳಮುಖಿ ಬದುಕಿಗೆ ಕಳ್ಳರು (Thieves) ಕೊಳ್ಳಿಯಿಟ್ಟಿದ್ದಾರೆ. ಇದರಿಂದಾಗಿ ಕಂಗಾಲಾದ ತೃತೀಯ ಲಿಂಗಿಗಳೀಗ ಪೊಲೀಸರ ಮೊರೆ ಹೋಗಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನ್ಯಾಯಕ್ಕಾಗಿ ಮನವಿ ಸಲ್ಲಿಸಿದ್ದಾರೆ.

ಕೊಳಹಾಳ್ ಗ್ರಾಮದ ಬಳಿ ಮಂಗಳಮುಖಿ (ತೃತೀಯ ಲಿಂಗಿ) ಅರುಂಧತಿ ಮತ್ತಿತರೆ ಆರು ಜನರು ಸೇರಿ ಕುರಿ-ಮೇಕೆ ಸಾಕಣೆ ಆರಂಭಿಸಿದ್ದರು. ಕಳೆದ ನಾಲ್ಕು ವರ್ಷದಿಂದ ಸ್ವಾವಲಂಬಿಯಾಗಿ ಬದುಕುತ್ತಿದ್ದರು. ನಾಲ್ಕು ದಿನದ ಹಿಂದೆ ಅರುಂಧತಿ ಚಿಕ್ಕಮಗಳೂರಿಗೆ ತೆರಳಿದ್ದರು. ವಾಪಸ್ ಬರುವುದರೊಳಗೆ ಶೆಡ್ ನಲ್ಲಿದ್ದ ಕುರಿ ಮತ್ತು ಮೇಕೆಗಳನ್ನು ಕದ್ದು ಕಳ್ಳರು ಎಸ್ಕೇಪ್ ಆಗಿದ್ದಾರೆ. ಪರಿಣಾಮ ಅರುಂಧತಿಯ ಬದುಕು ಮತ್ತೆ ಬೀದಿಗೆ ಬಂದಂತಾಗಿದೆ. ಈ ಬಗ್ಗೆ ಭರಮಸಾಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆದ್ರೆ, ಈವರೆಗೆ ಆರೋಪಿಗಳು ಪತ್ತೆ ಆಗಿಲ್ಲ. ನ್ಯಾಯವೂ ಸಿಕ್ಕಿಲ್ಲ. ಹೀಗಾದರೆ ನಾವು ಮತ್ತೆ ಬೆಗ್ಗಿಂಗ್ ಮತ್ತು ಸೆಕ್ಸ್ ವರ್ಕ್ ಗೆ ಇಳಿಯಬೇಕೇ ಎಂದು ಅರುಂಧತಿ ನೋವಿನಿಂದ ಪ್ರಶ್ನೆ ಮಾಡುತ್ತಿದ್ದಾರೆ.

ಇನ್ನು ಅರುಂಧತಿಗೆ ಬೆಂಗಳೂರಿನ ಲಿಂಗತ್ವ ಮತ್ತು ಲೈಂಗಿಕ ವೈವಿಧ್ಯತೆಗಾಗಿ ಚಳುವಳಿ ಸಂಘಟನೆ ಸಾಥ್ ನೀಡಿದೆ. ಸಂಘಟನೆಯ ಮುಖ್ಯಸ್ಥೆ ವೈಶಾಲಿ ಮತ್ತಿತರರು ಅರುಂಧತಿ ಪರ ನಿಂತಿ ಜಿಲ್ಲಾ ಪೊಲೀಸ್ ಕಚೇರಿಗೆ ಆಗಮಿಸಿ ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ ಅವ್ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಈ ವೇಳೆ ಪ್ರತಿಕ್ರಿಯಿಸಿದ ಲಿಂಗತ್ವ ಮತ್ತು ಲೈಂಗಿಕ ವೈವಿಧ್ಯತೆಗಾಗಿ ಚಳುವಳಿಯ ಮುಖ್ಯಸ್ಥೆ ವೈಶಾಲಿ, ಅನೇಕರು ವೇದಿಕೆಗಳನ್ನು ನಮ್ಮ ಪರ ಭಾಷಣ ಮಾಡುತ್ತಾರೆ. ಆದ್ರೆ, ಸ್ವಾವಲಂಬಿ, ಸ್ವಾಭಿಮಾನಿ ಬದುಕು ನಡೆಸುತ್ತಿದ್ದ ಅರುಂಧತಿ ಬದುಕು ಬೀದಿಗೆ ಬಂದಿದೆ. ಸುಮಾರು 8ಲಕ್ಷ ಮೌಲ್ಯದ ಕುರಿ-ಮೇಕೆಯನ್ನು ಕಳ್ಳತನ ಮಾಡಲಾಗಿದೆ. ಈ ಕೃತ್ಯದ ಹಿಂದೆ ಶೋಷಣೆ ಮನೋಸ್ಥಿತಿ ಇದ್ದೇ ಇದೆ. ಈ ಸಂದರ್ಭದಲ್ಲಿ ಯಾರೂ ಸಹ ಅರುಂಧತಿಯ ನೆರವಿಗೆ ಬಂದಿಲ್ಲ ಎಂದು ನೋವು ತೋಡಿಕೊಂಡರು.

ಇದನ್ನೂ ಓದಿ: 30 ಟಿಎಂಸಿ ಸಂಗ್ರಹ ಸಾಮರ್ಥ್ಯದ ಆ ಜಲಾಶಯದಲ್ಲಿ 22 ಟಿಎಂಸಿ ನೀರಿದೆ, ಬರಗಾಲದ ರೈತಾಪಿ ವರ್ಗ ಫುಲ್ ಖುಷ್​!

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದಲ್ಲಿ ಸ್ವಾವಲಂಬಿ ಬದುಕು ನಡೆಸುತ್ತಿದ್ಧ ಅರುಂಧತಿ ಬದುಕಿಗೆ ಕಳ್ಳರು ಕೊಳ್ಳಿ ಇಟ್ಟಿದ್ದಾರೆ. ಚಿತ್ರದುರ್ಗ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸ್ರು ಶೀಘ್ರ ಗತಿಯಲ್ಲಿ ಕಳ್ಳರನ್ನು ಪತ್ತೆ ಹಚ್ಚಬೇಕಿದೆ. ಸ್ವಾಭಿಮಾನಿ, ಸ್ವಾವಲಂಬಿ ಬದುಕು ನಡೆಸಿ ಮಾದರಿಯಾಗಿದ್ದ ಅರುಂಧತಿಗೆ ನ್ಯಾಯ ಒದಗಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!