AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಧುನಿಕ ಪ್ರಪಂಚದಿಂದ ಬಲು ದೂರು ಉಳಿದ ಗ್ರಾಮ: ಈ ಹಳ್ಳಿಗೆ ಮೊಬೈಲ್ ಸಿಗ್ನಲ್, ಇಂಟರ್​ನೆಟ್ ಇಲ್ಲ

ಮೊಬೈಲ್​ ಮತ್ತು ಇಟರ್​​ನೆಟ್​ ಇಡೀ ಜಗತ್ತನ್ನು ಆಳುತ್ತಿರುವ ಇಂದಿನ ಕಾಲದಲ್ಲಿ ಚಿತ್ರದುರ್ಗ ತಾಲೂಕಿನ ಅದೊಂದು ಗ್ರಾಮ ಮಾತ್ರ ಆಧುನಿಕತೆಯಿಂದ ಮೈಲಿಗಟ್ಟಲೆ ದೂರ ಉಳಿದುಕೊಂಡಿದೆ. ಒಂದು ದಶಕದಿಂದ ಇಲ್ಲಿನ ಜನರಿಗೆ ಮೊಬೈಲ್ ಸಿಗ್ನಲ್ ಮತ್ತು ಇಂಟರ್ನೆಟ್ ಸಂಪರ್ಕವೇ ಇಲ್ಲ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಗ್ರಾಮಸ್ಥರು ಪರದಾಡುತ್ತಿದ್ದಾರೆ.

ಆಧುನಿಕ ಪ್ರಪಂಚದಿಂದ ಬಲು ದೂರು ಉಳಿದ ಗ್ರಾಮ: ಈ ಹಳ್ಳಿಗೆ ಮೊಬೈಲ್ ಸಿಗ್ನಲ್, ಇಂಟರ್​ನೆಟ್ ಇಲ್ಲ
ಮೊಬೈಲ್ ಸಿಗ್ನಲ್​​ಗಾಗಿ ಜನರ ಪರದಾಟ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Nov 21, 2025 | 7:43 PM

Share

ಚಿತ್ರದುರ್ಗ, ನವೆಂಬರ್​ 21: ಆ ಗ್ರಾಮ ನಗರ ಪ್ರದೇಶದಿಂದ ಕೇವಲ 25 ಕಿ.ಮೀ ವ್ಯಾಪ್ತಿಯಲ್ಲೇ ಇದೆ. ಆದರೆ ಆಧುನಿಕ ಪ್ರಪಂಚದಿಂದ ಮೈಲು ದೂರದಲ್ಲೇ ಉಳಿದಿದೆ. ಇಂದಿಗೂ ಆ ಗ್ರಾಮದ ಜನರಿಗೆ ಮೊಬೈಲ್ ಸಿಗ್ನಲ್ (Mobile Signal) ಸಿಗುತ್ತಿಲ್ಲ, ಇಂಟರ್​ನೆಟ್ ಕನೆಕ್ಟಿವಿಟಿ (Internet) ಇಲ್ಲವೇ ಇಲ್ಲದ ದುಸ್ಥಿತಿ ಇದೆ. ಆದರೂ ಯಾವೊಬ್ಬ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಕ್ಯಾರೆ ಅಂದಿಲ್ಲ.

ಚಿತ್ರದುರ್ಗ ತಾಲೂಕಿನ ವಿ.ಪಾಳ್ಯ ಗ್ರಾಮದಲ್ಲಿ ಅಪ್ಪಿ ತಪ್ಪಿ ಮೊಬೈಲ್ ರಿಂಗಣಿಸಿದರೂ ಮಾತುಗಳು ಮಾತ್ರ ಕೇಳಿಸುವುದಿಲ್ಲ. ಇಂಟರ್ ನೆಟ್ ಇಲ್ಲದೆ ಆಧುನಿಕತೆಯೇ ಮರೀಚಿಕೆ ಆಗಿದೆ. ದಶಕದಿಂದ ಯಾರೊಬ್ಬರು ನಮ್ಮ ಗೋಳು ಕೇಳುತ್ತಿಲ್ಲ ಎಂದು ಇಲ್ಲಿನ ಜನರು ಹಿಡಿಶಾಪ ಹಾಕುತ್ತಿದ್ದಾರೆ.

ಇದನ್ನೂ ಓದಿ: ಬಾಲಕನನ್ನ ಕಾಲಲ್ಲಿ ಒದ್ದು, ತುಳಿದು ರಾಕ್ಷಸೀ ಕೃತ್ಯ: ಸಂಸ್ಕೃತ ಶಾಲೆಯಲ್ಲಿ ಇವನೆಂಥಾ ಸುಸಂಸ್ಕೃತ ಶಿಕ್ಷಕ

ಹೌದು.. ಈ ಗ್ರಾಮದ ಜನರು ಮನೆ ಮಾಳಿಗೆ ಹತ್ತಿದರೂ ಅಷ್ಟೇ, ಗಿಡ-ಮರವೇರಿದರು ಅಷ್ಟೆ, ಮೊಬೈಲ್ ಸಿಗ್ನಲ್​ ಸಿಗುವುದಿಲ್ಲ. ಮಕ್ಕಳ ಓದು, ಸಿಲಿಂಡರ್, ನ್ಯಾಯಬೆಲೆ ಅಂಗಡಿ ರೇಷನ್​ಗಾಗಿ ನೆಟವರ್ಕ್ ಬಳಸುವುದು ಅಸಾಧ್ಯವಾಗಿದೆ. ಹೀಗಾಗಿ, ವಿ.ಪಾಳ್ಯ ಗ್ರಾಮದ ಜನರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.

ಇನ್ನು ಮಕ್ಕಳ ಶಾಲೆಗಳಿಂದ ಮೆಸೇಜ್​ಗಳು ಬರುವುದಿಲ್ಲ. ಅನಿವಾರ್ಯ ಸಂದರ್ಭಗಳಲ್ಲೂ ಹೊರ ಜಗತ್ತು‌ ಸಂಪರ್ಕಿಸಲು ಆಗದೆ ಪರದಾಡುವ ದುಸ್ಥಿತಿ ನಿರ್ಮಾಣ ಆಗಿದೆ ಎಂದು ಗ್ರಾಮಸ್ಥರಾದ ಶೋಭಾ ಎನ್ನುವವರು ಹೇಳುತ್ತಾರೆ.

ಜಿಲ್ಲಾಡಳಿತ, ಅಧಿಕಾರಿಗಳು ನಿರ್ಲಕ್ಷ 

ಈ ಬಗ್ಗೆ ವಿ.ಪಾಳ್ಯ ಗ್ರಾಮದ ಜನರು ಅನೇಕ ಸಲ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ. ಗ್ರಾಮದ ಸಮಸ್ಯೆಯನ್ನು ಅಧಿಕಾರಿಗಳು, ಜನಪ್ರತಿನಿಧಿಗಳ ಗಮನಕ್ಕೆ ತರಲು ಪ್ರಯತ್ನ ಪಟ್ಟಿದ್ದಾರೆ. ಆದರೆ ಕಳೆದೊಂದು ದಶಕದಿಂದಲೂ ಇಲ್ಲಿನ ಗ್ರಾಮದ ಜನರ ಪ್ರಯತ್ನಗಳು ಫಲಿಸಿಲ್ಲ. ಜಿಲ್ಲಾಡಳಿತ, ಸಂಬಂಧಿತ ಅಧಿಕಾರಿಗಳು ತೀವ್ರ ನಿರ್ಲಕ್ಷ ತೋರಿದ್ದು ಜನರ ಹಿಡಿಶಾಪಕ್ಕೆ ಗುರಿ ಆಗಿದೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಚಡ್ಡಿ ಗ್ಯಾಂಗ್ ಹಾವಳಿಗೆ ಜನರು ತಲ್ಲಣ: ಬಂಧಿಸುವಲ್ಲಿ ಖಾಕಿ ವಿಫಲ?

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ತಾಲೂಕಿನ ವಿ.ಪಾಳ್ಯ ಗ್ರಾಮ ಇಂದಿಗೂ ಮೊಬೈಲ್ ಸಂಪರ್ಕ, ಇಂಟರ್ ನೆಟ್ ಸಂಪರ್ಕದಿಂದ ಹೊರಗುಳಿದಿದೆ. ವಿದ್ಯಾರ್ಥಿಗಳಿಗೆ ಓದು ಬರಹಕ್ಕೆ ತೊಂದರೆ ಉಂಟಾಗಿದ್ದು, ಸಂಪರ್ಕ ವ್ಯವಸ್ಥೆಯೇ ಇಲ್ಲದೆ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಇನ್ನಾದರೂ ಸರ್ಕಾರ ಮತ್ತು ಜಿಲ್ಲಾಡಳಿತ ಈ ಬಗ್ಗೆ ಗಮನಹರಿಸಬೇಕಿದೆ. ಸೂಕ್ತ ಸಂಪರ್ಕ ವ್ಯವಸ್ಥೆ ಕಲ್ಪಿಸಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಸವರಾಜ ಮುದನೂರ್, ಚಿತ್ರದುರ್ಗ
ಬಸವರಾಜ ಮುದನೂರ್, ಚಿತ್ರದುರ್ಗ

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್