AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ ಕಲುಷಿತ ನೀರು ಸೇವನೆ ಪ್ರಕರಣ: ಅಸ್ವಸ್ಥಗೊಂಡವರ ಸಂಖ್ಯೆ 185ಕ್ಕೆ ಏರಿಕೆ

ಚಿತ್ರದುರ್ಗ ಹೊರವಲಯದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ ಐವರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ವಸ್ಥಗೊಂಡವರ ಸಂಖ್ಯೆ 185ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ಕಲುಷಿತ ನೀರು ಸೇವನೆ ಪ್ರಕರಣ: ಅಸ್ವಸ್ಥಗೊಂಡವರ ಸಂಖ್ಯೆ 185ಕ್ಕೆ ಏರಿಕೆ
ಕಲುಷಿತ ನೀರು
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Aug 05, 2023 | 9:38 AM

Share

ಚಿತ್ರದುರ್ಗ: ಕಲುಷಿತ ನೀರು ಸೇವಿಸಿ (Contaminated water) ಐವರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ವಸ್ಥಗೊಂಡವರ ಸಂಖ್ಯೆ 185ಕ್ಕೆ ಏರಿಕೆಯಾಗಿದೆ. ಓರ್ವ ಗರ್ಭಿಣಿಯ ಗರ್ಭಪಾತವಾಗಿದೆ. 25 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 155 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿತ್ರದುರ್ಗ ಹೊರವಲಯದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಜುಲೈ 31ರಂದು ಕಲುಷಿತ ನೀರು ಸೇವಿಸಿ ಮೂರು ಜನ ಸಾವನ್ನಪ್ಪಿದ್ದರು. ಜೊತೆಗೆ ಸುಮಾರು ನೂರು ಜನ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಘಟನೆಗೆ ಸಂಬಂಧಪಟ್ಟಂತೆ ಮೃತರ ಸಂಖ್ಯೆ ನಿನ್ನೆ (ಜು.04) ಐದಕ್ಕೆ ಏರಿತ್ತು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ: ಪ್ರಯೋಗಾಲಯ ವರದಿ ಬಹಿರಂಗ, ಕಾಲರಾ ಮಾದರಿ ಪತ್ತೆ

ಆಗಸ್ಟ 3 ರಂದು ಪ್ರಯೋಗಾಲಯ ವರದಿ ಬಂದಿದ್ದು, ಕಾಲರಾ ಮಾದರಿಯ ಸೂಕ್ಷ್ಮಾಣು ಅಂಶ ಪತ್ತೆಯಾಗಿತ್ತು. ವಾಂತಿ, ಭೇದಿ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆ ಮಾಡಿದ್ದು, ಈ ನೀರು ಕುಡಿಯಲು ಯೋಗ್ಯವಲ್ಲವೆಂದು ಚಿತ್ರದುರ್ಗ ಜಿಲ್ಲಾ ಸರ್ವೇಕ್ಷಣಾ ಘಟಕ ವರದಿಯಲ್ಲಿ ಉಲ್ಲೇಖಿಸಿತ್ತು. ಇದೀಗ ಪ್ರಕರಣ ಸಂಬಂಧ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಾಕಿಯಿದೆ.

5 ಲಕ್ಷ ರೂ. ಪರಿಹಾರ ನೀಡುವಂತೆ ಸೂಚನೆ

ಇನ್ನು 5 ಲಕ್ಷ ರೂ. ಪರಿಹಾರ ಚೆಕ್‌ ನೀಡುವಂತೆ ಜಿಲ್ಲಾಧಿಕಾರಿಗೆ ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಸೂಚನೆ ನೀಡಿದ್ದರು. ಮೃತರ ಕುಟುಂಬಕ್ಕೆ ತಲಾ 50 ಸಾವಿರ ರೂ. ವೈಯಕ್ತಿಕ ಸಹಾಯ ಧನ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್