ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಐವರು ಸಾವು; ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ – ಗುಂಡೂರಾವ್

ಚಿತ್ರದುರ್ಗದ 17ನೇ ವಾರ್ಡ್​ ವ್ಯಾಪ್ತಿಯ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಐವರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಥಳಕ್ಕೆ ಭೇಟಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಬಳಿಕ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರದ ಚೆಕ್ ನೀಡಿದರು.

ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಐವರು ಸಾವು; ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ - ಗುಂಡೂರಾವ್
ಪರಿಹಾರದ ಚೆಕ್​ ವಿತರಿಸಿದ ಸಚಿವ ದಿನೇಶ್​ ಗುಂಡೂರಾವ್​
Follow us
| Updated By: ವಿವೇಕ ಬಿರಾದಾರ

Updated on: Aug 05, 2023 | 2:49 PM

ಚಿತ್ರದುರ್ಗ: ನಗರದ 17ನೇ ವಾರ್ಡ್​ ವ್ಯಾಪ್ತಿಯ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು (Contaminated Water) ಸೇವಿಸಿ ಐವರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸ್ಥಳಕ್ಕೆ ಭೇಟಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಬಳಿಕ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರದ ಚೆಕ್ ನೀಡಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ನೀಡಿದ್ದೇವೆ ಎಂದು ಹೇಳಿದರು.

ಕವಾಡಿಗರಹಟ್ಟಿ ದುರಂತ ವಿಚಾರ ಸಾಕಷ್ಟು ನೋವುಂಟು ಮಾಡಿದೆ. ಮತ್ತೆ ಬೇರೆ ಕಡೆ ಇಂತಹ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಪ್ರಕರಣ ಸಂಬಂಧ ಸೂಕ್ತ ವರದಿ ನೀಡುವಂತೆ ಸೂಚಿಸಲಾಗಿದೆ. ಇಲಾಖೆಯ ಲೋಪದೋಷವಿದ್ದರೇ ಸರಿಪಡಿಸಲು ಸೂಚನೆ ನೀಡಿದ್ದೇನೆ. ಇಂತಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ಮುಂದೇನು ಮಾಡಬೇಕೆಂದು ಉಸ್ತುವಾರಿ ಸಚಿವರ ಜೊತೆ ಚರ್ಚೆ ಮಾಡಲಾಗುತ್ತದೆ. ಕವಾಡಿಗರಹಟ್ಟಿಯ ಸಮಗ್ರ ಅಭಿವೃದ್ಧಿ ಮಾಡಲು ನಾವು ಸಿದ್ಧರಾಗಿದ್ದೇವೆ. ಉಸ್ತುವಾರಿ ಸಚಿವರು ಕೂಡ ಈ ಕುರಿತು ಆದೇಶ ನೀಡಿದ್ದಾರೆ. ಯಾಕೆ ಆಯ್ತು ಹೇಗೆ ಆಯ್ತು ಎಂಬುದನ್ನು ವಿಚಾರಣೆ ಮಾಡಲು ಹೇಳಿದ್ದೇವೆ. ಸ್ಪಷ್ಟ ವರದಿ ಬಂದ ಬಳಿಕ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಊಹಾಪೋಹಗಳಿಗೆ ಕಿವಿಗೊಡಬಾರದು. ನಿಜಾಂಶ ಏನೆಂದು ಕಂಪ್ಲೀಟ್ ವರದಿ ಮೂಲಕ ಹೊರ ಬರಲಿದೆ. ನಾನು ಇನ್ನೂ ರಿಪೋರ್ಟ್ ನೋಡಿಲ್ಲ, ಯಾರದ್ದೇ ಲೋಪವಿದ್ದರೂ ಕ್ರಮ ಕೈಗೊಳ್ಳುತ್ತೇವೆ ಎಂದರು.

ಇದನ್ನೂ ಓದಿ: ಚಿತ್ರದುರ್ಗ ಕಲುಷಿತ ನೀರು ಸೇವನೆ ಪ್ರಕರಣ: ಅಸ್ವಸ್ಥಗೊಂಡವರ ಸಂಖ್ಯೆ 185ಕ್ಕೆ ಏರಿಕೆ

ಈಗಾಗಲೇ ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳ ಅಮಾನತು ಆಗಿದ್ದಾರೆ. ಕಾಲರಾಗೆ ಶೀಘ್ರಗತಿಯಲ್ಲಿ ಚಿಕಿತ್ಸೆ ಪಡೆದರೆ ಅನಾಹುತ ಆಗಲ್ಲ. ಈ ಪ್ರಕರಣ ಗಂಭೀರವಾಗಿ ಪರಿಗಣಿಸಲು ನಾವು ಬಂದಿದ್ದೇವೆ. ರಾಜ್ಯದಲ್ಲಿ ಈರೀತಿ ನಡೆದ ಎಲ್ಲಾ ಪ್ರಕರಣಗಳನ್ನೂ ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಪ್ರಕರಣದ ಎಲ್ಲಾ ವರದಿಗಳೂ ಬಹಿರಂಗವಾಗುತ್ತವೆ ಎಂದು ಹೇಳಿದರು.

ಕಲುಷಿತ ನೀರಿನಿಂದ ಆಗಿದೆ ಎಂಬ ಪ್ರಾಥಮಿಕ ವರದಿ ಇದೆ

ಕವಾಡಿಗರಹಟ್ಟಿಯಲ್ಲಿ ಬಹಳಷ್ಟು ಜನ ಅಸ್ತವ್ಯಸ್ಥಗೊಂಡಿದ್ದರು. ಐದು ಜನ ಸಾವಿಗೀಡಾಗಿದ್ದಾರೆ. ಒಂದೇ ಜಾತಿ, ಧರ್ಮದವರು ಇಲ್ಲ ಎಲ್ಲರೂ ಇದ್ದಾರೆ. ಕಲುಷಿತ ನೀರಿನಿಂದ ಆಗಿದೆ ಎಂಬ ಪ್ರಾಥಮಿಕ ವರದಿ ಇದೆ. ಇನ್ನು ತನಿಖೆಗಳು ಆಗಬೇಕು, ಕೆಮಿಕಲ್ ವರದಿಗಳು ಬರಬೇಕು. ವರದಿಗಳು ಬಂದ ಮೇಲೆ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಸಿಎಂ ಏನಾಗುತ್ತಿದೆ ಎಂಬುದನ್ನು ಗಮನಿಸುತ್ತಿದ್ದಾರೆ. ನಾವು ಕೂಡ ಸ್ಥಳಕ್ಕೆ ಭೇಟಿ ನೀಡಿದ್ದೇವೆ. ಅಲ್ಲಿಯ ಶಾಸಕರು ಬಹಳ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಐವರು ಜನರನ್ನು ಸಸ್ಪೆಂಡ್ ಮಾಡಿದ್ದೇವೆ. ತನಿಖೆ ಹಂತದಲ್ಲಿದೆ ಈಗ ನಾನೇನು ಹೇಳೋದಿಕ್ಕೆ ಹೋಗಲ್ಲ ಎಂದು ಬಾಗಲಕೋಟೆಯಲ್ಲಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ