AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಿಸಲು ಮನವಿ: ಜಿಲ್ಲಾಧಿಕಾರಿಗಳಿಂದ ವರದಿ ಬಂದ ಬಳಿಕ ಮುಂದಿನ ಕ್ರಮ – ಸಿಎಂ ಬೊಮ್ಮಾಯಿ

ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಿಸಲು ಮನವಿ ಮಾಡಿದ್ದಾರೆ. ಈ ಬಗ್ಗೆ ಕಂದಾಯ ಇಲಾಖೆಯಿಂದ ಜಿಲ್ಲಾಧಿಕಾರಿಗೆ ವರದಿ ಕೇಳಿದ್ದೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಿಸಲು ಮನವಿ: ಜಿಲ್ಲಾಧಿಕಾರಿಗಳಿಂದ ವರದಿ ಬಂದ ಬಳಿಕ ಮುಂದಿನ ಕ್ರಮ - ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Updated By: ವಿವೇಕ ಬಿರಾದಾರ|

Updated on:Nov 08, 2022 | 8:10 PM

Share

ಚಿತ್ರದುರ್ಗ: ಚಿತ್ರದುರ್ಗದ ಮುರುಘಾಮಠಕ್ಕೆ (Muruga Mutt) ಆಡಳಿತಾಧಿಕಾರಿ ನೇಮಿಸಲು ಮನವಿ ಮಾಡಿದ್ದಾರೆ. ಈ ಬಗ್ಗೆ ಕಂದಾಯ ಇಲಾಖೆಯಿಂದ ಜಿಲ್ಲಾಧಿಕಾರಿಗೆ ವರದಿ ಕೇಳಿದ್ದೇವೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಚಿತ್ರದುರ್ಗದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಹೇಳಿದ್ದಾರೆ. ಇಂದು (ನ. 8) ಚಿತ್ರದುರ್ಗದ (chitradurga) ಸಾಣೇಹಳ್ಳಿ ಬಳಿಯ ಹೆಲಿಪ್ಯಾಡ್​​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಮುರುಘಾಶ್ರೀಗಳಿಂದ ಅಕ್ಷಮ್ಯ ಅಪರಾಧ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ​ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಪ್ರಕರಣ ನ್ಯಾಯಾಲಯದಲ್ಲಿದೆ ಈಗ ಏನೂ ಹೇಳಲಾಗದು ಎಂದು ಜಾರಿಕೊಂಡರು.

ಶತಮಾನಗಳ ನಂಬಿಕೆಗೆ ಕೊಡಲಿ ಪೆಟ್ಟು ಕೊಡುವ ಕೆಲಸ ನಡೆದಿದೆ

ಹಿಂದೂ ಪದದ ಬಗ್ಗೆ ಸತೀಶ್ ಜಾರಕಿಹೊಳಿ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಕುರಿತು ಮಾತನಾಡಿದ ಸಿಎಂ ಬೊಮ್ಮಾಯಿ ಶತಮಾನಗಳ ನಂಬಿಕೆಗೆ ಕೊಡಲಿ ಪೆಟ್ಟು ಕೊಡುವ ಕೆಲಸ ನಡೆದಿದೆ. ನಂಬಿಕೆ, ವಿಶ್ವಾಸದ ಮೇಲೆ ಧರ್ಮ ನಡೆಯುತ್ತಿದೆ. ಸತೀಶರ ಶಾಲಾ ದಾಖಲಾತಿಯಲ್ಲಿ ಹಿಂದೂ ಎಂದು ಇದೆ ಅಲ್ಲವೇ ? ತಾಂತ್ರಿಕವಾದ ಸರ್ಟಿಫಿಕೇಟ್, ನಂಬಿಕೆ ಶತಮಾನದಿಂದ ಇದೆ. ಜನರ ನಂಬಿಕೆಗೆ ಘಾಸಿ ಮಾಡಿದ ಬಳಿಕ ಚರ್ಚೆ ಏನು ಮಾಡುವುದು. ಚರ್ಚೆಯೂ ಬೇಕಿಲ್ಲ, ಕ್ಷಮೆಯೂ ಬೇಕಿಲ್ಲ, ಜನ ತೀರ್ಮಾನಿಸುತ್ತಾರೆ ಎಂದು ಕಿಡಿಕಾರಿದರು.

ಆಹ್ವಾನ ನೀಡುತ್ತೇವೆ ಸಿದ್ಧರಾಮಯ್ಯ ಬಂದು ಜನಸಂಕಲ್ಪ ಯಾತ್ರೆ ನೋಡಲಿ

ಬಿಜೆಪಿ ಜನ ಸಂಕಲ್ಪ ಯಾತ್ರೆಗೆ ಜನರ ಕೊರತೆ ಎಂದು ಸಿದ್ಧರಾಮಯ್ಯ ವ್ಯಂಗ್ಯವಾಡಿದ ಕುರಿತು ಪ್ರತಿಕ್ರಿಯಿಸಿ ಸಿದ್ಧರಾಮಯ್ಯ ಅವರಿಗೆ ಬಂದು ಜನಸಂಕಲ್ಪ ಯಾತ್ರೆ ನೋಡಲು ಹೇಳಿ. ಆಹ್ವಾನ ನೀಡುತ್ತೇವೆ ಸಿದ್ಧರಾಮಯ್ಯ ಬಂದು ನೋಡಲಿ ಎಂದರು.

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಸಿಎಂ ಬೊಮ್ಮಾಯಿ ಭೇಟಿ

ಇದೇ ವೇಳೆ ಸಾಣೇಹಳ್ಳಿ ಬಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಮೈದಾನಕ್ಕೆ ಸಿಎಂ ಬೊಮ್ಮಾಯಿ ಭೇಟಿ ನೀಡಿದರು. ಈ ವೇಳೆ ಮಕ್ಕಳಿಗೆ ಚಾಕೋಲೇಟ್ ನೀಡಿದರು. ವಿದ್ಯಭ್ಯಾಸ ಮಾಡಿ ಏನಾಗಬೇಕೆಂದಿದ್ದೀರಿ ಎಂದು ಮಕ್ಕಳಿಗೆ ಸಿಎಂ ಪ್ರಶ್ನೆ ಮಾಡಿದರು. ಆಗ ವಿದ್ಯಾರ್ಥಿಗಳು ಡಾಕ್ಟರ್, ಸೈಂಟಿಸ್ಟ್, ಎಸ್ಪಿ, ಡಿಸಿ ಆಗುವ ಗುರಿಯಿದೆ ಎಂದು ಹೇಳಿದರು. ಆಗ ಸಿಎಂ ಬೊಮ್ಮಾಯಿ ಉತ್ತಮ ವಿದ್ಯಭ್ಯಾಸ ಮಾಡಿ ಶಾಲೆ ಮತ್ತು ಪೋಷಕರಿಗೆ ಗೌರವ ತರಬೇಕೆಂದು ಕಿವಿ ಮಾತು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:15 pm, Tue, 8 November 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!