AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಳಿನ್ ಕುಮಾರ್ ಕಟೀಲು ಓರ್ವ ಭಯೋತ್ಪಾದಕ: ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ

Siddaramaiah: ನಳಿನ್ ಕುಮಾರ್ ಕಟೀಲು ಓರ್ವ ಭಯೋತ್ಪಾದಕ. ನಳಿನ್ ಕುಮಾರ್ ಮಾತಿಗೆ ಮೂರು ಕಾಸಿನ ಕಿಮ್ಮತ್ತಿಲ್ಲ ಎಂದು ಚಿತ್ರದುರ್ಗದಲ್ಲಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ನಳಿನ್ ಕುಮಾರ್ ಕಟೀಲು ಓರ್ವ ಭಯೋತ್ಪಾದಕ: ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ
TV9 Web
| Edited By: |

Updated on:Nov 28, 2021 | 5:56 PM

Share

ಚಿತ್ರದುರ್ಗ: ಕಾಂಗ್ರೆಸ್ ಪಕ್ಷ ಭಯೋತ್ಪಾದನೆಗೆ ಬಡ್ತಿ ನೀಡುತ್ತದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಹೇಳಿಕೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ನಳಿನ್ ಕುಮಾರ್ ಕಟೀಲು ಓರ್ವ ಭಯೋತ್ಪಾದಕ. ನಳಿನ್ ಕುಮಾರ್ ಮಾತಿಗೆ ಮೂರು ಕಾಸಿನ ಕಿಮ್ಮತ್ತಿಲ್ಲ ಎಂದು ಚಿತ್ರದುರ್ಗದಲ್ಲಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಮುಂದಿನ ವಿಧಾನಸಭೆ ಎಲೆಕ್ಷನ್‌ನಲ್ಲಿ 140 ಸ್ಥಾನ ಗೆಲ್ಲುತ್ತೇವೆ ಎಂಬ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ಕೂಡ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 140 ಸ್ಥಾನ ಗೆಲ್ಲಲು ಮತಗಳು ಏನು ಅವರ ಜೇಬಿನಲ್ಲಿ ಇದ್ಯಾ? ರಾಜ್ಯದ ಜನರು ಬಿಜೆಪಿ ಕಿತ್ತೊಗೆಯಲು ತೀರ್ಮಾನಿಸಿದ್ದಾರೆ ಎಂದು ಹೇಳಿದ್ದಾರೆ. ಜೆಡಿಎಸ್ ಯಾವ ಪಕ್ಷದ ಬಿ ಟೀಂ ಅಲ್ಲ ಎಂಬ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಪರಿಷತ್ ಚುನಾವಣೆಗೆ ಹಲವು ಕಡೆ ಅಭ್ಯರ್ಥಿ ಹಾಕಿಲ್ಲ. ಜೆಡಿಎಸ್ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನ ಕಣಕ್ಕಿಳಿಸಿಲ್ಲ. 6 ಕಡೆ ಮಾತ್ರ ಜೆಡಿಎಸ್ ಅಭ್ಯರ್ಥಿಗಳನ್ನ ಕಣಕ್ಕಿಳಿಸಿದ್ದಾರೆ. ಇನ್ನುಳಿದ ಕ್ಷೇತ್ರಗಳಲ್ಲಿ ಜೆಡಿಎಸ್ ಯಾರಿಗೆ ಬೆಂಬಲ ನೀಡುತ್ತದೆ? ಎಂದು ಚಿತ್ರದುರ್ಗದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಕಾಂಗ್ರೆಸ್ ಭಯೋತ್ಪಾದನೆಗೆ ಬಡ್ತಿ ನೀಡುತ್ತಿದೆ ಎಂಬ ನಳಿನ್ ಕುಮಾರ್ ಕಟೀಲು ಹೇಳಿಕೆಗೆ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಅವನು ಅಸಂಬದ್ಧ ವಿಚಾರ ಹೇಳ್ತಾನೆ. ಬಿಜೆಪಿಯಲ್ಲಿ ಕೆಲವರು ಅನಗತ್ಯ ಗೊಂದಲ ಸೃಷ್ಟಿಸುವವರಿದ್ದಾರೆ. ಬಿಜೆಪಿಯಲ್ಲಿ ಗೊಂದಲವಿದೆ, ನಮ್ಮ ಪಕ್ಷದಲ್ಲಿ ಗೊಂದಲವಿಲ್ಲ ಎಂದು ಏಕವಚನದಲ್ಲಿ ನಳಿನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಳಿನ್ ಕುಮಾರ್ ಕಟೀಲು ಹೇಳಿಕೆಗೆ ಹಾವೇರಿಯಲ್ಲಿ ಸಲೀಂ ಅಹ್ಮದ್​ ಕೂಡ ಗರಂ ಆಗಿದ್ದಾರೆ. ಕಟೀಲು ಮಾನಸಿಕ ಸಮತೋಲನವನ್ನ ಕಳೆದುಕೊಂಡಿದ್ದಾರೆ. ಕಟೀಲು ಆಡಿದ ಮಾತುಗಳು ಅವರ ವ್ಯಕ್ತಿತ್ವ ತೋರಿಸುತ್ತಿದೆ. ಇಂದಿರಾ ಗಾಂಧಿ ದೇಶದ ಐಕ್ಯತೆಗಾಗಿ ಪ್ರಾಣ ಕೊಟ್ಟಿದ್ದಾರೆ. ಈ ಎಲ್ಲ ವಿಚಾರ ನಳಿನ್​ ಕುಮಾರ್​ ಕಟೀಲುರಿಗೆ ಗೊತ್ತಿಲ್ಲ. ಕಟೀಲು ಅವರ ಈ ಮಾತುಗಳನ್ನು ನಾನು ಖಂಡಿಸುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್​ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ನ​ವರ ಅವಧಿಯಲ್ಲಿ ಭಯೋತ್ಪಾದನೆ ಆರಂಭವಾಗಿದೆ: ನಳಿನ್ ಕುಮಾರ್ ಕಟೀಲ್

ಇದನ್ನೂ ಓದಿ: ಲಂಚ ತೆಗೆದುಕೊಳ್ಳುವ ಇಲಾಖೆಯಿಂದಲೇ ತನಿಖೆ ಮಾಡಿಸೋದಾ? ನಿವೃತ್ತ ನ್ಯಾಯಾಧೀಶರಿಂದ ತನಿಖೆಯಾಗಲಿ- ಸಿದ್ದರಾಮಯ್ಯ ಆಗ್ರಹ

Published On - 5:56 pm, Sun, 28 November 21

ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ