AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಕದ್ದೊಯ್ಯುತ್ತಿದ್ದ ಹಸುವನ್ನು ಸಿನಿಮೀಯ ಶೈಲಿಯಲ್ಲಿ ರಕ್ಷಿಸಿದ ರೈತರು, ವಿಡಿಯೋ ಇಲ್ಲಿದೆ

ಚಿತ್ರದುರ್ಗ ಜಿಲ್ಲೆಯ ಹೊಟ್ಟಪ್ಪನಹಳ್ಳಿಯಲ್ಲಿ ರೈತರೊಬ್ಬರು ಸಾಕಿದ ಹಸುವನ್ನು ಕಳ್ಳತನ ಮಾಡಿ ಸಾಗಿಸುತ್ತಿದ್ದ ವಿಚಾರ ತಿಳಿದ ಗೋಪನಹಳ್ಳಿ ಗ್ರಾಮದ ರೈತರು ಸಿನಿಮೀಯ ಶೈಲಿಯಲ್ಲಿ ಹಸುವನ್ನು ರಕ್ಷಿಸಿದ್ದಾರೆ. ರೈತರು ದಾಳಿ ನಡೆಸುತ್ತಿದ್ದಂತೆ ಚಾಲಕ ಲಗೇಜ್ ವಾಹನವನ್ನು ಅಡ್ಡಾದಿಡ್ಡಿ ಚಲಾಯಿಸಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಬಳಿಕ ವಾಹನ ನಿಲ್ಲಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ.

Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: Rakesh Nayak Manchi

Updated on:Dec 18, 2023 | 10:53 AM

ಚಿತ್ರದುರ್ಗ, ಡಿ.18: ಲಗೇಜ್ ವಾಹನದಲ್ಲಿ ಸಾಗಿಸುತ್ತಿದ್ದ ಹಸುವನ್ನು ರೈತರು ಸಿನಿಮೀಯ ಶೈಲಿಯಲ್ಲಿ ರಕ್ಷಿಸಿದ ಘಟನೆ ಜಿಲ್ಲೆಯ (Chitradurga) ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಬಳಿ ನಡೆದಿದೆ. ಹೊಟ್ಟಪ್ಪನಹಳ್ಳಿಯಲ್ಲಿ ರೈತ ನಾಗರಾಜ್ ಎಂಬುವರ ಹಸುವನ್ನು ರಾತ್ರಿ ವೇಳೆ ಕದ್ದು ಲಗೇಜ್ ವಾಹನದಲ್ಲಿ ಸಾಗಿಸಲಾಗುತ್ತಿತ್ತು.

ಈ ವಿಚಾರ ತಿಳಿದ ಗೋಪನಹಳ್ಳಿ ರೈತರು ತಕ್ಷಣ ಎಚ್ಚೆತ್ತು ವಾಹನದಲ್ಲಿ ಹಿಂಬಾಲಿಸಿದ್ದಾರೆ. ಈ ವೇಳೆ ಮತ್ತೊಂದು ಕಾರಿನ ಚಾಲಕ ಹಸು ರಕ್ಷಣೆಗೆ ಸಾಥ್ ನೀಡಿದ್ದು, ಈ ವೇಳೆ ಆರೋಪಿಯು ವಾಹನವನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿದ್ದಾನೆ. ಇದರಿಂದಾಗಿ ಕಾರಿಗೆ ಡಿಕ್ಕಿ ಹೊಡೆದಿದೆ. ಆದರೂ ನಿಲ್ಲಿಸದ ಗೂಡ್ಸ್ ಚಾಲಕ ವಾಹನ ಸಹಿತ ತಪ್ಪಿಸಲು ಯತ್ನಿಸಿದ್ದಾನೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ನಾಯಿ ದಾಳಿಗೆ 10 ವರ್ಷದ ಬಾಲಕ ಸಾವು

ಆದರೂ, ರೈತರು ಬೆನ್ನು ಬಿಡದ ಹಿನ್ನೆಲೆ ಲಗೇಜ್ ವಾಹನವನ್ನು ನಿಲ್ಲಿಸಿ ಆರೋಪಿ ಚಾಲಕ ಪರಾರಿಯಾಗಿದ್ದಾನೆ. ಜಾನುವಾರು ಕಳ್ಳರನ್ನು ಬಂಧಿಸುವಂತೆ ರೈತರು ಆಗ್ರಹಿಸುತ್ತಿದ್ದಾರೆ. ಶನಿವಾರ ತಡರಾತ್ರಿ ರೈತರು ಕಳ್ಳರ ವಾಹನ ಚೇಸ್ ಮಾಡಿದ ದೃಶ್ಯವನ್ನು ಮೊಬೈಲ್​ನಲ್ಲಿ ಸೆರೆ ಹಿಡಿಯಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಮಂಡ್ಯದಲ್ಲಿ ತಲೆ ಎತ್ತಿದ ಅಕ್ರಮ ಕಸಾಯಿಖಾನೆ

ರಾಜ್ಯದಲ್ಲಿ ಗೋ ಹತ್ಯೆ ನಿಷೇಧವಿದ್ದರೂ ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆಗಳು ತಲೆ ಎತ್ತಿವೆ. ತೂಬಿನಕೆರೆ ಗ್ರಾಮದ ಹೊರ ವಲಯದ ಜಮೀನಿನಲ್ಲಿ ಅಕ್ರಮ ಶೆಡ್ ನಿರ್ಮಾಣ ಮಾಡಿ ಜಾನುವಾರುಗಳನ್ನು ಕೊಂದು ಅವುಗಳ ಮೂಳೆ, ಮಾಂಸ ಸಂಗ್ರಹ ಮಾಡಲಾಗುತ್ತಿದೆ. ಗುಜರಿ ವಸ್ತುಗಳ ಸಂಗ್ರಹದ ಹೆಸರಲ್ಲಿ ಗೋವುಗಳ ಮಾರಣಹೋಮ ನಡೆಸಲಾಗುತ್ತಿದೆ.

ಕೊಳೆತ ವಾಸನೆ ಹೆಚ್ಚಾಗ್ತಿದ್ದಂತೆ ಸ್ಥಳೀಯರಿಗೆ ಅನುಮಾನ ಉಂಟಾಗಿದ್ದು, ಭಜರಂಗದಳದ ಕಾರ್ಯಕರ್ತರು ಅಖಾಡಕ್ಕಿಳಿದು ಅಕ್ರಮ ಶೆಡ್ ಪತ್ತೆಹಚ್ಚಿದ್ದಾರೆ. ತೂಬಿನಕೆರೆ ಗ್ರಾಮದ ಲಿಂಗರಾಜು ಎಂಬುವರ ಜಮೀನನ್ನು ಮಂಡ್ಯದ ಮೂಲದ ವ್ಯಕ್ತಿ ಬಾಡಿಗೆ ಪಡೆದು ಶೆಡ್ ನಿರ್ಮಿಸಿ ಗೋವುಗಳ ಮೂಳೆ ಸಂಗ್ರಹ ಮಾಡುತ್ತಿದ್ದನು. ಈ ಮೂಳೆಗಳಿಂದ ಪೌಡರ್ ತಯಾರಿಸುತ್ತಿದ್ದ ಎನ್ನುವ ಆರೋಪ ಕೇಳಿಬಂದಿದ್ದು, ಮಾಹಿತಿ ನೀಡಿದರೂ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:02 am, Mon, 18 December 23

‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!
ಸಾಲ್ಟ್ ಬ್ಯಾಟಿಂಗ್ ನೋಡಿದ ಯುವತಿಯರು ಉಪ್ಪಿಗಿಂತ ರುಚಿಯಿಲ್ಲ ಅಂದರು!
ಸಾಲ್ಟ್ ಬ್ಯಾಟಿಂಗ್ ನೋಡಿದ ಯುವತಿಯರು ಉಪ್ಪಿಗಿಂತ ರುಚಿಯಿಲ್ಲ ಅಂದರು!
ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು: ಬೈಕ್, ಕಾರು ಮುಳುಗಡೆ
ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು: ಬೈಕ್, ಕಾರು ಮುಳುಗಡೆ
ಏರ್​​ಪೋರ್ಟ್​ನಲ್ಲಿ ಯುವತಿಯ ಮೇಕಪ್​ ತೆಗೆಸಿದ ಏರ್​ಪೋರ್ಟ್​ ಸಿಬ್ಬಂದಿ
ಏರ್​​ಪೋರ್ಟ್​ನಲ್ಲಿ ಯುವತಿಯ ಮೇಕಪ್​ ತೆಗೆಸಿದ ಏರ್​ಪೋರ್ಟ್​ ಸಿಬ್ಬಂದಿ
VIDEO: ಇದೆಂಥ ಕೀಳುಮಟ್ಟದ ವರ್ತನೆ... ವಿರಾಟ್ ಕೊಹ್ಲಿ ವಿರುದ್ಧ ಆಕ್ರೋಶ
VIDEO: ಇದೆಂಥ ಕೀಳುಮಟ್ಟದ ವರ್ತನೆ... ವಿರಾಟ್ ಕೊಹ್ಲಿ ವಿರುದ್ಧ ಆಕ್ರೋಶ
ಪಂಜಾಬ್​ನಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ, 4 ಮಂದಿ ಸಾವು, 25 ಜನರಿಗೆ ಗಾಯ
ಪಂಜಾಬ್​ನಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ, 4 ಮಂದಿ ಸಾವು, 25 ಜನರಿಗೆ ಗಾಯ
ಈ ರೀತಿ ಕುತ್ತಿಗೆ ತೂಗು ಹಾಕುವ ವಿಧಾನದಿಂದ ಈ ಗಂಭೀರ ಕಾಯಿಲೆ ಮಾಯ
ಈ ರೀತಿ ಕುತ್ತಿಗೆ ತೂಗು ಹಾಕುವ ವಿಧಾನದಿಂದ ಈ ಗಂಭೀರ ಕಾಯಿಲೆ ಮಾಯ
ಧುಮ್ಮಿಕ್ಕಿ ಹರಿಯುತ್ತಿದೆ ಧನುಷ್ಕೋಟಿ ಜಲಪಾತ: ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಧನುಷ್ಕೋಟಿ ಜಲಪಾತ: ವಿಡಿಯೋ ನೋಡಿ