TRAI, ಮುಂಬೈ ಪೊಲೀಸರೆಂದು ಕರೆ ಮಾಡಿ ಹಿರಿಯ ವೈದ್ಯನಿಗೆ 1.27 ಕೋಟಿ ವಂಚನೆ ಮಾಡಿದ ಸೈಬರ್ ಖದೀಮರು

ಚಿತ್ರದುರ್ಗದ ಹಿರಿಯ ವೈದ್ಯ ಡಾ.ಶ್ರೀನಿವಾಸ್ ಶೆಟ್ಟಿ ಎಂಬುವವರಿಗೆ ಕರೆ ಮಾಡಿದ ಸೈಬರ್ ಖದೀಮರು, ನಾವು TRAI ಮತ್ತು ಮುಂಬೈ ಪೊಲೀಸರೆಂದು ಪರಿಚಯ ಮಾಡಿಕೊಂಡಿದ್ದಾರೆ. ಬಳಿಕ ನಿಮ್ಮ ಬ್ಯಾಂಕ್ ಖಾತೆ ಬಳಸಿ ಮನಿ ಲ್ಯಾಂಡರಿಂಗ್ ವಂಚನೆ ಆಗಿದೆ ಎಂದು ನಂಬಿಸಿ ವಂಚನೆ ಮಾಡಿದ್ದಾರೆ.

TRAI, ಮುಂಬೈ ಪೊಲೀಸರೆಂದು ಕರೆ ಮಾಡಿ ಹಿರಿಯ ವೈದ್ಯನಿಗೆ 1.27 ಕೋಟಿ ವಂಚನೆ ಮಾಡಿದ ಸೈಬರ್ ಖದೀಮರು
ಚಿತ್ರದುರ್ಗದ CEN ಪೊಲೀಸ್ ಠಾಣೆ
Edited By:

Updated on: Aug 26, 2024 | 3:54 PM

ಚಿತ್ರದುರ್ಗ, ಆಗಸ್ಟ್​.26: ಹಿರಿಯ ವೈದ್ಯರೊಬ್ಬರಿಗೆ ಸೈಬರ್ ಖದೀಮರು ಬರೋಬ್ಬರಿ 1.27 ಕೋಟಿ ರೂಪಾಯಿ ವಂಚನೆ (Cheat) ಮಾಡಿರುವ ಘಟನೆ ಕೋಟೆನಾಡು ಚಿತ್ರದುರ್ಗದಲ್ಲಿ ನಡೆದಿದೆ. ನಿಮ್ಮ ಬ್ಯಾಂಕ್ ಖಾತೆ ಬಳಸಿ ಮನಿ ಲ್ಯಾಂಡರಿಂಗ್ (Money Laundering) ವಂಚನೆ ಆಗಿದೆ. ಖಾತೆಯ ಹಣದ ಆಡಿಟ್ ಮಾಡಬೇಕಿದೆ ಎಂದು ನಂಬಿಸಿ ವಾಟ್ಸಾಪ್​, ನಾರ್ಮಲ್ ಕಾಲ್ ಮಾಡಿ ಖದೀಮರು ವಂಚಿಸಿದ್ದಾರೆ. ಚಿತ್ರದುರ್ಗದ CEN ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿತ್ರದುರ್ಗದ ಹಿರಿಯ ವೈದ್ಯ ಡಾ.ಶ್ರೀನಿವಾಸ್ ಶೆಟ್ಟಿ ಎಂಬುವವರಿಗೆ ಕರೆ ಮಾಡಿದ ಸೈಬರ್ ಖದೀಮರು, ನಾವು TRAI ಮತ್ತು ಮುಂಬೈ ಪೊಲೀಸರೆಂದು ಪರಿಚಯ ಮಾಡಿಕೊಂಡಿದ್ದಾರೆ. ಬಳಿಕ ನಿಮ್ಮ ಬ್ಯಾಂಕ್ ಖಾತೆ ಬಳಸಿ ಮನಿ ಲ್ಯಾಂಡರಿಂಗ್ ವಂಚನೆ ಆಗಿದೆ. ಖಾತೆಯ ಹಣದ ಆಡಿಟ್ ಮಾಡಬೇಕಿದೆ ಎಂದು ಹೇಳಿ ನಂಬಿಸಿದ್ದಾರೆ. ನಂತರ ತಮ್ಮ ಖಾತೆಗೆ 1 ಕೋಟಿ 27ಲಕ್ಷ ಹಣ ವರ್ಗಾಯಿಸಿಕೊಂಡು ವಂಚನೆ ಮಾಡಿದ್ದಾರೆ. ಚಿತ್ರದುರ್ಗದ CEN ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Krishna Janmashtami: ಇಸ್ಕಾನ್​ನಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ, ನೃತ್ಯ ಮಾಡುತ್ತ ಭಕ್ತಿಯಲ್ಲಿ ಮೈ ಮರೆತ ಭಕ್ತರು

ಹಣಕಾಸು ವಿಚಾರಕ್ಕೆ ಗಲಾಟೆ.. ಯುವಕನ ಮೇಲೆ ಹಲ್ಲೆ

ಇಟ್ಟಿಗೆ ಫ್ಯಾಕ್ಟರಿ ಬಾಡಿಗೆ ವಿಚಾರಕ್ಕೆ ಗಲಾಟೆ ನಡೆದಿದ್ದು, ಯುವಕನ ಮೇಲೆ ಹತ್ತಾರು ಜನರ ಗುಂಪು ಮಾರಣಾಂತಿಕ ಹಲ್ಲೆ ನಡೆಸಿದೆ. ಬೆಂಗಳೂರು ಜಿಲ್ಲೆ ಗೆರಟಿಗನಬೆಲೆ ಗ್ರಾಮದ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಘಟನೆ ನಡೆದಿದೆ. ಮೋಹನ್ ಎಂಬುವರು ಪ್ರವೀಣ್​ಗೆ ಗುಡ್ನಹಳ್ಳಿ ಗ್ರಾಮದಲ್ಲಿ ಇಟ್ಟಿಗೆ ಫ್ಯಾಕ್ಟರಿ ಬಾಡಿಗೆಗೆ ಕೊಟ್ಟಿದ್ರು. 8 ತಿಂಗಳಿನಿಂದ ಪ್ರವೀಣ್ ಬಾಡಿಗೆ ಕಟ್ಟಿರಲಿಲ್ಲ. ಬಾಡಿಗೆ ಕೇಳಲು ಹೋದಾಗ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಮಾಲೀಕ ಮೋಹನ್ ಮೇಲೆ ಪ್ರವೀಣ್, ಜೀವನ್ ಮತ್ತು ಗ್ಯಾಂಗ್ ಹಲ್ಲೆ ನಡೆಸಿದೆ. ಆನೇಕಲ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:27 am, Mon, 26 August 24

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us