AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ ಬಳಿಕ ಎರಡು ಪಕ್ಷಗಳಿಂದ 25 ರಿಂದ 30 ಶಾಸಕರು ಕಾಂಗ್ರೆಸ್ ಸೇರ್ತಾರೆ- ಡಿ.ಸುಧಾಕರ್

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಜೆಡಿಎಸ್​ಗೆ ಮುಜುಗರ ಉಂಟುಮಾಡಿದ್ದು, 12 ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದರ ಬೆನ್ನಲ್ಲೇ ಲೋಕಸಭಾ ಚುನಾವಣೆ ಬಳಿಕ 25 ರಿಂದ 30 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಸಚಿವ ಡಿ.ಸುಧಾಕರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಲೋಕಸಭಾ ಚುನಾವಣೆ ಬಳಿಕ ಎರಡು ಪಕ್ಷಗಳಿಂದ 25 ರಿಂದ 30 ಶಾಸಕರು ಕಾಂಗ್ರೆಸ್ ಸೇರ್ತಾರೆ- ಡಿ.ಸುಧಾಕರ್
ಡಿ.ಸುಧಾಕರ್​
ಬಸವರಾಜ ಮುದನೂರ್, ಚಿತ್ರದುರ್ಗ
| Edited By: ಕಿರಣ್ ಹನುಮಂತ್​ ಮಾದಾರ್|

Updated on: May 17, 2024 | 4:47 PM

Share

ಚಿತ್ರದುರ್ಗ, ಮೇ.17: ಇತ್ತೀಚೆಗೆ ಹನ್ನೆರಡು ಜೆಡಿಎಸ್ ಶಾಸಕರು ಕಾಂಗ್ರೆಸ್(Congress) ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಅದಕ್ಕೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ‘ಅದೆಲ್ಲವೂ ಸುಳ್ಳು ಎಂದು​ ಸ್ಪಷ್ಟನೆ ನೀಡಿದ್ದರು. ಇದರ ಬೆನ್ನಲ್ಲೇ  ಲೋಕಸಭಾ ಚುನಾವಣೆ ಮುಗಿದ ನಂತರ ಬಿಜೆಪಿ, ಜೆಡಿಎಸ್​​​​ನಿಂದ 25 ರಿಂದ 30 ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ (D. Sudhakar) ಸ್ಪೋಟಕ ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ‘ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಮತ್ತಷ್ಟು ಬಲಶಾಲಿ ಆಗಲಿದೆ ಎಂದರು.

ಇದೇ ವೇಳೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಳ್ಳ ಹಿಡಿದಿದೆ ಎಂಬ ಜಗದೀಶ್ ಶೆಟ್ಟರ್ ಹೇಳಿಕೆ ವಿಚಾರ, ‘ಜಗದೀಶ್ ಶೆಟ್ಟರ್ ಅವರು ಮಾಜಿ ಸಿಎಂ ಆಗಿದ್ದವರು. ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ನಾನು ಇದ್ದವನು. ಕಾನೂನು ಸುವ್ಯವಸ್ಥೆ ಹೇಗಿತ್ತು ಎಂದು ನೋಡಿದ್ದೇನೆ. ನಮ್ಮ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ತುಂಬಾ ದಕ್ಷವಾಗಿದ್ದು, ರಾಜ್ಯದಲ್ಲಿ ಅಚ್ಚುಕಟ್ಟಾಗಿದೆ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ:ಕಲಬುರಗಿ ಪ್ರಭಾವಿ ನಾಯಕ, ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್​ ಕಾಂಗ್ರೆಸ್​ ಸೇರ್ಪಡೆ

ಅಪರಾಧಿಗೆ ಕೇಂದ್ರ ಸರ್ಕಾರ ಭದ್ರತೆ ಕೊಡ್ತಿದೆ

ಇನ್ನು ಅಂಜಲಿ ಹತ್ಯೆ ಕೇಸ್​ಗೆ ನಮ್ಮ ನಾಯಕರು ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ. ಎಸ್​ಐಟಿ ಸ್ವತಂತ್ರ ತನಿಖಾ ಸಂಸ್ಥೆ, ಅದಕ್ಕೆ ಸರ್ಕಾರದಿಂದ ಸಂಪೂರ್ಣ ಸ್ವತಂತ್ರ್ಯ ಕೊಡಲಾಗಿದೆ. ಅವರು ಸಮರ್ಥವಾಗಿ ತನಿಖೆ ಮಾಡುತ್ತಿದ್ದಾರೆ. ಆದ್ರೆ, ಪ್ರಜ್ವಲ್ ರೇವಣ್ಣ ಕೇಸ್ ವಿಚಾರವಾಗಿ ಕೇಂದ್ರ ಸರ್ಕಾರ ಸಹಕಾರ ಕೊಡುತ್ತಿಲ್ಲ. ಕೇಂದ್ರ ಮನಸ್ಸು ಮಾಡಿದ್ರೆ 1 ನಿಮಿಷದಲ್ಲಿ ಪ್ರಜ್ವಲ್​ನನ್ನು ಹಿಡಿಯಬಹುದು. ಸಾವಿರಾರು ಹೆಣ್ಣುಮಕ್ಕಳು ಆ ಕೇಸ್​ನಲ್ಲಿ ದುಃಖತಪ್ತರಾಗಿದ್ದಾರೆ. ಅಪರಾಧಿಗೆ ಡಿಪ್ಲೋಮೆಟಿಕ್ ಪಾಸ್ ಪೋರ್ಟ್ ಕೊಟ್ಟಿದೆ. ತನಿಖಾ ಸಂಸ್ಥೆಗಳಿಂದ ಪಾಸ್​ಪೋರ್ಟ್ ಕ್ಯಾನ್ಸಲ್ ಮಾಡಿಸಲಿ. ಆದರೆ, ಎನ್​ಡಿಎ ಸರ್ಕಾರ ಅದನ್ನು ಮಾಡುತ್ತಿಲ್ಲ. ಈಗಾಗಲೇ ಅಪರಾಧಿ ನಾಪತ್ತೆಯಾಗಿ ಇಪ್ಪತ್ತು ದಿನ ಆಗಿದೆ ಎಂದು ಕಿಡಿಕಾರಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More