AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುಕುಳ ಆರೋಪ: ಜೈಲರ್​ಗೆ ಶೋಕಾಸ್ ನೋಟಿಸ್​ ನೀಡಿದ ದಾವಣಗೆರೆ ಜಿಲ್ಲಾ ಕೋರ್ಟ್​​

ಚಿತ್ರದುರ್ಗಾ ಜಿಲ್ಲಾ ಕಾರಾಗೃಹದ ಜೈಲರ್ ಶ್ರೀಮಂತ ಗೌಡ ಪಾಟೀಲ್​ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Court) ಜೈಲರ್​ಗೆ ಶೋಕಾಸ್ ನೋಟಿಸ್​ ನೀಡಿದೆ.

ಕಿರುಕುಳ ಆರೋಪ: ಜೈಲರ್​ಗೆ ಶೋಕಾಸ್ ನೋಟಿಸ್​ ನೀಡಿದ ದಾವಣಗೆರೆ ಜಿಲ್ಲಾ ಕೋರ್ಟ್​​
ಜೈಲರ್ ಶ್ರೀಮಂತ ಗೌಡ ಪಾಟೀಲ್, ನೋಟಿಸ್​​
ಬಸವರಾಜ ಮುದನೂರ್, ಚಿತ್ರದುರ್ಗ
| Edited By: ವಿವೇಕ ಬಿರಾದಾರ|

Updated on: Dec 13, 2023 | 12:55 PM

Share

ಚಿತ್ರದುರ್ಗ, ಡಿಸೆಂಬರ್​​ 13: ಜಿಲ್ಲಾ ಕಾರಾಗೃಹದ (Central Jail) ಜೈಲರ್ ಶ್ರೀಮಂತ ಗೌಡ ಪಾಟೀಲ್​ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ (Davangere) ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Court) ಜೈಲರ್​ಗೆ ಶೋಕಾಸ್ ನೋಟಿಸ್​ ನೀಡಿದೆ. ನ್ಯಾಮತಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣವೊಂದರಲ್ಲಿ ಹೊನ್ನಾಳಿ ತಾಲೂಕಿನ ಚಿಲೂರು ಗ್ರಾಮದ ಚಂದ್ರಪ್ಪ ಎಂಬ ಆರೋಪಿಯ ಬಂಧನವಾಗಿದೆ. ಆರೋಪಿಯನ್ನು ದಾವಣಗೆರೆ ಜೈಲಿಂದ ಚಿತ್ರದುರ್ಗ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಚಿತ್ರದುರ್ಗ ಜೈಲಿನ ಜೈಲರ್​​ ಶ್ರೀಮಂತ ಗೌಡ ಪಾಟೀಲ್ ತನಗೆ (ಆರೋಪಿ ಚಂದ್ರಪ್ಪ) ಜಾತಿ ಆಧರಿತ ಹಿಂಸೆ ನೀಡಿದ್ದು ಮತ್ತು ಥಳಿತಿಳಿಸಿದ್ದಾರೆ ಎಂದು ವಕೀಲರ ಮೂಲಕ ಕೋರ್ಟ್​​ಗೆ ಲಿಖಿತ ದೂರು ನೀಡಿದ್ದಾರೆ. ಅಲ್ಲದೆ ಚಿತ್ರದುರ್ಗ ಜೈಲಿನಿಂದ ದಾವಣಗೆರೆ ಜೈಲಿಗೆ ಶಿಫ್ಟ್ ಮಾಡುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕೈದಿಗಳಿಗೆ ಕಾರಾಗೃಹದಲ್ಲಿ ಕಂಪ್ಯೂಟರ್ ಶಿಕ್ಷಣ; ವಿನೂತನ ಪ್ರಯತ್ನಕ್ಕೆ ಮುಂದಾದ ಚಾಮರಾಜನಗರ ಜಿಲ್ಲಾ ಕಾರಾಗೃಹ

ಆರೋಪಿ ಚಂದ್ರಪ್ಪ ನೀಡಿರುವ ದೂರು ಆಧರಿಸಿ ನ್ಯಾಯಾಲಯ ನೋಟಿಸ್​ ನೀಡಿದೆ. ನೋಟಿಸ್ ತಲುಪಿದ ಒಂದು ವಾರದೊಳಗೆ ಜೈಲರ್​ ಶ್ರೀಮಂತ ಗೌಡ ಪಾಟೀಲ್​ ಖುದ್ದಾಗಿ ಹಾಜರಾಗಿ ಉತ್ತರಿಸುವಂತೆ ನ್ಯಾಯಾಲಯ ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!