AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಗಳನ್ನು ಮಠದ ಪೀಠಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಲು ಆಗ್ರಹ: ಎಸ್​ಜೆಎಂ ವಿದ್ಯಾಸಂಸ್ಥೆ ಸಿಬ್ಬಂದಿ ಹೆಸರಿನಲ್ಲಿ ಬಹಿರಂಗ ಪತ್ರ ವೈರಲ್

ಸಂತ್ರಸ್ತೆಯರ ಭೇಟಿ ಮಾಡಲು ವಕೀಲರಿಗೆ ನಕಾರ ಮಾಡಿದ್ದು, ಸಂತ್ರಸ್ತೆಯರ ಪರ ವಕೀಲ ಶ್ರೀನಿವಾಸ್ ಗಂಭೀರ ಆರೋಪ ಮಾಡಿದ್ದಾರೆ. ಸಂತ್ರಸ್ತೆಯರ ಭೇಟಿಗೆ ಕೋರ್ಟ್ ಅನುಮತಿಯಿದ್ದರೂ ನಕಾರ.

ಶ್ರೀಗಳನ್ನು ಮಠದ ಪೀಠಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಲು ಆಗ್ರಹ: ಎಸ್​ಜೆಎಂ ವಿದ್ಯಾಸಂಸ್ಥೆ ಸಿಬ್ಬಂದಿ ಹೆಸರಿನಲ್ಲಿ ಬಹಿರಂಗ ಪತ್ರ ವೈರಲ್
ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರು
TV9 Web
| Edited By: |

Updated on: Sep 15, 2022 | 3:48 PM

Share

ಚಿತ್ರದುರ್ಗ: ಪೋಕ್ಸೋ ಕೇಸ್​ನಲ್ಲಿ ಮುರುಘಾ ಶರಣು ಜೈಲುಪಾಲಾಗಿದ್ದು, ಮುರುಘಾ ಮಠದ ಎಸ್​ಜೆಎಂ ವಿದ್ಯಾಸಂಸ್ಥೆ ಸಿಬ್ಬಂದಿ ಹೆಸರಿನಲ್ಲಿ ಬಹಿರಂಗ ಪತ್ರ ವೈರಲ್ ಮಾಡಲಾಗಿದೆ. ಶಿವಮೂರ್ತಿ ಮುರುಘಾಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪವಿದ್ದು, ಶ್ರೀಗಳನ್ನು ಮಠದ ಪೀಠಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಲಾಗಿದೆ. ಮಠ, ಸಂಸ್ಥೆಗಳಲ್ಲಿನ ಮುರುಘಾಶ್ರೀ ಭಾವಚಿತ್ರ ತೆರವಿಗೆ ಒತ್ತಾಯಿಸಲಾಗಿದೆ. ಮಠದ ಆಡಳಿತದಲ್ಲಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಬೇಕು. ಶರಣ ಸಂಸ್ಕೃತಿ ಉತ್ಸವ ಹೆಸರಲ್ಲಿ ಸಿಬ್ಬಂದಿಯಿಂದ ಹಣ ವಸೂಲಿ ಮಾಡಲಾಗಿದ್ದು, ಹಾಗೆ ಮಾಡಿರುವ ಹಣವನ್ನು ಸಿಬ್ಬಂದಿಗೆ ವಾಪಸ್ ನೀಡಬೇಕು. ಐಷಾರಾಮಿ ಕಾರುಗಳನ್ನು ಮಾರಿ ಮಠದ ಅಭಿವೃದ್ಧಿಗೆ ಬಳಸಿ. ಶ್ರೀಗಳು ಹೆಲಿಕಾಪ್ಟರ್ ಖರೀದಿ ಮಾಡಿದ ಮಾಹಿತಿ ಇದೆ. ಶ್ರೀಗಳ ಆಪ್ತರನ್ನು ಮಠದಲ್ಲಿನ ಹುದ್ದೆಗಳಿಂದ ಮುಕ್ತಿಗೊಳಿಸಿ ಎಂದು ಎಸ್​​ಜೆಎಂ ವಿದ್ಯಾಸಂಸ್ಥೆ ಸಿಬ್ಬಂದಿ ಹೆಸರಿನ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.

ಸಂತ್ರಸ್ತೆಯರ ಭೇಟಿ ಮಾಡಲು ವಕೀಲರಿಗೆ ನಕಾರ ಆರೋಪ

ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರು ಜೈಲು ಪಾಲಾಗಿದ್ದು, ಸಂತ್ರಸ್ತೆಯರ ಭೇಟಿ ಮಾಡಲು ವಕೀಲರಿಗೆ ನಕಾರ ಮಾಡಿದ್ದು, ಸಂತ್ರಸ್ತೆಯರ ಪರ ವಕೀಲ ಶ್ರೀನಿವಾಸ್ ಗಂಭೀರ ಆರೋಪ ಮಾಡಿದ್ದಾರೆ. ಸಂತ್ರಸ್ತೆಯರ ಭೇಟಿಗೆ ಕೋರ್ಟ್ ಅನುಮತಿಯಿದ್ದರೂ ನಕಾರ. ಬಾಲಕಿಯರಿಗೆ ಕೋಪ ಹೆಚ್ಚಿದೆ, ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ಬಿಂಬಿಸಲು ಪ್ರಯತ್ನ ಮಾಡಲಾಗಿದೆ. ನಿಮ್ಹಾನ್ಸ್​ಗೆ ದಾಖಲಿಸಿ ಪ್ರಕರಣಕ್ಕೆ ಟ್ವಿಸ್ಟ್ ನೀಡುವ ಹುನ್ನಾರ ನಡೆದಿದ್ದು, ಚಿತ್ರದುರ್ಗದ CWC ಕಾಣದ ಕೈಗಳ ಒತ್ತಡಕ್ಕೆ ಮಣಿಯುತ್ತಿದೆ. ಸಿಡಬ್ಲ್ಯುಸಿ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುತ್ತೇವೆ. ಸಂತ್ರಸ್ತೆಯರಿಗೆ ಸಮರ್ಪಕ ಆಹಾರವನ್ನೂ ನೀಡದೆ ನಿರ್ಲಕ್ಷ್ಯ ವಹಿಸಲಾಗಿದೆ. ಸಂತ್ರಸ್ತೆಯರ ಪೋಷಕರು ಭೇಟಿಯಾಗಲು ಅವಕಾಶ ನೀಡಿಲ್ಲ ಎಂದು ಚಿತ್ರದುರ್ಗದಲ್ಲಿ ಸಂತ್ರಸ್ತೆಯರ ಪರ ವಕೀಲ ಶ್ರೀನಿವಾಸ್ ಕಿಡಿ ಕಾರಿದರು.

ಮುರುಘಾ ಮಠದಿಂದ ಇಬ್ಬರು ಬಾಲಕರು ನಾಪತ್ತೆ:

ಮುರುಘಾ ಮಠದ ಇಬ್ಬರು ವಿದ್ಯಾರ್ಥಿಗಳು ಸೆಪ್ಟೆಂಬರ್​ 8ರಂದು ನಾಪತ್ತೆ ಆಗಿದ್ದಾರೆ. ಮಠದ SJM ಶಾಲೆಯಲ್ಲಿ ಬಾಲಕರು ಓದುತ್ತಿದ್ದರು. ಮಲ್ಲಯ್ಯ(11), ಅಭಯ್​(13) ನಾಪತ್ತೆಯಾದ ವಿದ್ಯಾರ್ಥಿಗಳು. ಮುರುಘಾ ಮಠದ ಜಯದೇವ ಹಾಸ್ಟೆಲ್​ನಲ್ಲಿದ್ದ ವಿದ್ಯಾರ್ಥಿಗಳು. ಸಂಜೆ ಹಾಸ್ಟೆಲ್​ಗೆ ಬಾರದ ಹಿನ್ನೆಲೆ ಸಿಬ್ಬಂದಿಯಿಂದ ತಪಾಸಣೆ ಮಾಡಲಾಗಿದೆ. ಮಕ್ಕಳ ನಾಪತ್ತೆ ಬಗ್ಗೆ ಹಾಸ್ಟೆಲ್ ಸಿಬ್ಬಂದಿ ಪೋಷಕರ ತಿಳಿಸಿದ್ದಾರೆ. ಮಕ್ಕಳು ಮನೆಗೂ ಬಂದಿಲ್ಲ ಎಂದು ಪೋಷಕರು ಹೇಳಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ ಮಾಡಿ. 

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ